Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...