Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...