Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...