Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...