Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...