Homeಮುಖಪುಟ'ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ': ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ...

‘ಜೈಲಿಗೆ ಹೋದರೂ ಸರಿ, ಅರ್ಹರು ಕೆಲಸ ಕಳೆದುಕೊಳ್ಳಲು ಬಿಡುವುದಿಲ್ಲ’: ವಜಾಗೊಂಡ ಶಿಕ್ಷಕರ ಪರ ನಿಂತ ಮಮತಾ ಬ್ಯಾನರ್ಜಿ

- Advertisement -
- Advertisement -

“ಜೈಲಿಗೆ ಹೋದರೂ ಸರಿ, ಅರ್ಹರು ಶಾಲಾ ಉದ್ಯೋಗ ಕಳೆದುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016ರಲ್ಲಿ ರಾಜ್ಯದ ಶಾಲೆಗಳಿಗೆ ನೇಮಕ ಮಾಡಿದ ಶಿಕ್ಷಕರೂ ಸೇರಿದಂತೆ 25,000ಕ್ಕೂ ಹೆಚ್ಚು ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿದೆ.

ಈ ಹಿನ್ನೆಲೆ, ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಕೆಲಸ ಕಳೆದುಕೊಂಡವರನ್ನು ಸೋಮವಾರ (ಏ.7) ಭೇಟಿ ಮಾಡಿದ ಸಿಎಂ ಮಮತಾ ಬ್ಯಾನರ್ಜಿ “ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಂಡಿದ್ದೇವೆ ಎಂದು ದಯವಿಟ್ಟು ಭಾವಿಸಬೇಡಿ. ಅರ್ಹ ಅಭ್ಯರ್ಥಿಗಳು ಕೆಲಸ ಕಳೆದುಕೊಳ್ಳಲೋ, ವಿರಾಮ ಪಡೆಯಲೋ ನಾನು ಬಿಡುವುದಿಲ್ಲ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನಿಂದ ಎದುರಾಗಿರುವ ಸವಾಲುಗಳ ಹೊರತಾಗಿಯೂ, ಸಮಸ್ಯೆಯನ್ನು ನ್ಯಾಯಯುತವಾಗಿ ಮತ್ತು ಕಾಳಜಿಯಿಂದ ಪರಿಹರಿಸಲು ರಾಜ್ಯ ಸರ್ಕಾರದ ಬಳಿ ಪ್ರತ್ಯೇಕ ಯೋಜನೆಯಿದೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೆಲಸ ಕಳೆದುಕೊಂಡವರ ಘನತೆಯನ್ನು ಪುನಃಸ್ಥಾಪಿಸುವ ತನ್ನ ಅಚಲ ನಿಲುವನ್ನು ಒತ್ತಿ ಹೇಳಿದ ಮಮತಾ, ಸಮಸ್ಯೆಗೆ ಸಿಲುಕಿದವರ ಪರ ನಿಲ್ಲಲು ಯಾವುದೇ ಕಾನೂನು ಪರಿಣಾಮಗಳನ್ನು ಎದುರಿಸಲು ಸಿದ್ಧ ಎಂದು ಎಂದಿದ್ದಾರೆ.

“ನಾವು ಕಲ್ಲು ಹೃದಯಿಗಳಲ್ಲ… ಇದನ್ನು ಹೇಳಿದ್ದಕ್ಕಾಗಿ ನನ್ನನ್ನು ಜೈಲಿಗೆ ಹಾಕಬಹುದು, ಆದರೆ ನನಗೆ ಅದು ಮುಖ್ಯವಲ್ಲ. ನಾನು ನ್ಯಾಯಾಂಗವನ್ನು ಗೌರವಿಸುತ್ತೇನೆ. ಆದರೆ, ಈ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದ ಮಮತಾ ಬ್ಯಾನರ್ಜಿ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಎಷ್ಟು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ? ಬಂಗಾಳವನ್ನು ಏಕೆ ಗುರಿಯಾಗಿಸಿಕೊಂಡಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮತ್ತು ಕೇಂದ್ರ ಸಂಸ್ಥೆಗಳು ಬಂಗಾಳದ ಶಿಕ್ಷಣ ವ್ಯವಸ್ಥೆಯನ್ನು ಹಾಳುಗಡೆವಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಮಾನವೀಯತೆ ಆಧಾರದಲ್ಲಿ ಕೆಲಸ ಕಳೆದುಕೊಂಡ ಅಭ್ಯರ್ಥಿಗಳಿಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿದ್ದಾರೆ.

“ನೀವು ಸಿದ್ಧರಿದ್ದರೆ ನನ್ನನ್ನು ಹಿಡಿಯಿರಿ. ನಮ್ಮ ವಕೀಲರು ತೀರ್ಪನ್ನು ಪರಿಶೀಲಿಸುತ್ತಿದ್ದಾರೆ. ನಾನು ಅಭ್ಯರ್ಥಿಗಳೊಂದಿಗಿದ್ದೇನೆ… ಅದಕ್ಕಾಗಿ ಬಿಜೆಪಿ ನನ್ನನ್ನು ಜೈಲಿಗೆ ಹಾಕಲು ಬಯಸಿದರೆ, ಹಾಗೆಯೇ ಆಗಲಿ” ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಸಿಪಿಎಂ ಈ ಬಿಕ್ಕಟ್ಟನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

“ಪ್ರಚೋದಕರು ಮುಖ್ಯಮಂತ್ರಿ ಸಂಕಷ್ಟಕ್ಕೀಡಾದ ಜನರನ್ನು ಭೇಟಿಯಾಗದಂತೆ ತಡೆಯಬಹುದು ಎಂಬ ಮಾಹಿತಿ ಇದೆ. ಇದು ಜನರು ಬಿಕ್ಕಟ್ಟಿನಿಂದ ಹೊರಬರದಂತೆ ತಡೆಯುವ ಪಿತೂರಿಯಾಗಿದೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. ಮಮತಾ ಬ್ಯಾನರ್ಜಿಯವರ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಭೇಟಿಯ ಸಮಯದಲ್ಲಿ ಇದೇ ರೀತಿಯ ಅಡೆತಡೆಗಳನ್ನು ಉಲ್ಲೇಖಿಸಿ ಘೋಷ್ ಹೇಳಿಕೆ ನೀಡಿದ್ದರು.

ವಂಚನೆಯ ಮೂಲಕ ಉದ್ಯೋಗ ಗಳಿಸಿದ್ದಾರೆಂದು ಸಾಬೀತಾದ ಅಭ್ಯರ್ಥಿಗಳನ್ನು ಮಾತ್ರ ವಜಾಗೊಳಿಸಬೇಕು ಮತ್ತು ಅವರ ಸಂಬಳವನ್ನು ವಾಪಸ್ ಪಡೆಯಬೇಕು. ಆದರೆ, ಕಳಂಕವಿಲ್ಲದವರು ತಮ್ಮ ಸಂಬಳವನ್ನು ಉಳಿಸಿಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅರ್ಹ ವ್ಯಕ್ತಿಗಳು ಈ ಹಿಂದಿನ ಸರ್ಕಾರಿ ಹುದ್ದೆಗಳನ್ನು ಹೊಂದಿದ್ದರೆ ಅವುಗಳಿಗೆ ಮರಳಲು ಸಹ ಅವಕಾಶವಿದೆ ಎಂದಿದೆ.

ಬಂಗಾಳ ಸರ್ಕಾರದ್ದು ಸೇರಿದಂತೆ 120ಕ್ಕೂ ಹೆಚ್ಚು ಅರ್ಜಿಗಳನ್ನು ವಿಚಾರಣೆ ನಡೆಸಿದ ನಂತರ ತೀರ್ಪು ಬಂದಿದೆ. ಒಎಂಆರ್ ಹಾಳೆಗಳನ್ನು ತಿರುಚುವುದು, ಮಂಜೂರಾದ ಖಾಲಿ ಹುದ್ದೆಗಳನ್ನು ಮೀರಿದ ನೇಮಕಾತಿಗಳು ಮತ್ತು ಇತರ ಅಕ್ರಮಗಳನ್ನು ನ್ಯಾಯಾಲಯ ಗಮನಿಸಿದೆ. 24,640 ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರೆ, 25,700ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.

ತ್ರಿಪುರಾದಲ್ಲಿ ಸಿಪಿಎಂ ಆಡಳಿತದ ಅವಧಿಯಲ್ಲಿ 10,323 ಶಿಕ್ಷಕರು ಉದ್ಯೋಗ ಕಳೆದುಕೊಂಡಾಗ, ಕೆಲವರ ತಪ್ಪಿಗೆ ಎಲ್ಲರನ್ನೂ ಶಿಕ್ಷಿಸಬೇಡಿ ಎಂದು ಪಕ್ಷವು ನ್ಯಾಯಾಲಯಗಳನ್ನು ಒತ್ತಾಯಿಸಿತ್ತು. ಈಗ ಬಂಗಾಳದಲ್ಲಿ ಅವರು ಇದಕ್ಕೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದಾರೆ. ನಾವು ಅನರ್ಹರನ್ನು ರಕ್ಷಿಸುವುದಿಲ್ಲ, ಆದರೆ ನ್ಯಾಯಯುತವಾಗಿ ನೇಮಕಗೊಂಡ 20,000ಕ್ಕೂ ಹೆಚ್ಚು ಶಿಕ್ಷಕರ ಪರವಾಗಿ ನಾವು ಯಾವಾಗಲೂ ನಿಲ್ಲುತ್ತೇವೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) 2016 ರಲ್ಲಿ ನೇಮಕ ಮಾಡಿದ್ದ ಸುಮಾರು 25,000 ( 25,753) ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಅಮಾನ್ಯಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 3ರಂದು ಎತ್ತಿಹಿಡಿದಿದೆ.

ಶಾಲೆಗಳಲ್ಲಿನ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ ತೀರ್ಪು ಪ್ರಕಟಿಸಿದೆ.

“ಇಡೀ ನೇಮಕಾತಿ ಪ್ರಕ್ರಿಯೆ ಸರಿಪಡಿಸಲಾಗದಷ್ಟು ಕಲುಷಿತಗೊಂಡಿದೆ. ನೇಮಕಾತಿಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ. ಅದನ್ನು ಮುಚ್ಚಿ ಹಾಕಲು ಇಡೀ ಆಯ್ಕೆ ಪ್ರಕ್ರಿಯೆಯನ್ನು ಹಾಳುಗೆಡವಲಾಗಿದೆ. ಆಯ್ಕೆ ಪ್ರಕ್ರಿಯೆಯ ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ನಗ್ನಗೊಳಿಸಿದೆ” ಎಂದು ತೀರ್ಪು ಪ್ರಕಟಿಸುತ್ತಾ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

ತನ್ನ ಮೇಲಿನ ಎಫ್‌ಐಆರ್ ವಿರುದ್ಧ ಬಾಂಬೆ ಹೈಕೋರ್ಟ್‌ ಮೊರೆ ಹೋದ ಕುನಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...