Homeಮುಖಪುಟರೇಪಿಸ್ಟ್‌ಗಳಿಗೆ ಮತ್ತೆ ಜೈಲು: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್‌ ಬಾನು ಪ್ರತಿಕ್ರಿಯೆ...

ರೇಪಿಸ್ಟ್‌ಗಳಿಗೆ ಮತ್ತೆ ಜೈಲು: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್‌ ಬಾನು ಪ್ರತಿಕ್ರಿಯೆ…

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ನಿನ್ನೆ ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಪ್ರತಿಕ್ರಿಯಿಸಿದ್ದು, ತೀರ್ಪು ಸಮಾಧಾನ ತಂದಿದೆ, ನನಗೆ ಈಗ ಮತ್ತೆ ಉಸಿರಾಡಬಹುದು ಎಂದು ಹೇಳಿದ್ದಾರೆ.

ತಮ್ಮ ವಕೀಲೆ ಶೋಭಾ ಗುಪ್ತಾ ಮೂಲಕ ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ನನಗೆ ನಿಜವಾಗಿಯೂ ಹೊಸ ವರ್ಷ, ಸುಪ್ರೀಂಕೋರ್ಟ್ ತೀರ್ಪಿಗೆ ಧನ್ಯವಾದಗಳು. ನಾನು ಸಮಾಧಾನದಿಂದ ಕಣ್ಣೀರು ಹಾಕಿದೆ. ಒಂದೂವರೆ ವರ್ಷದಲ್ಲಿ ನಾನು ಮೊದಲ ಬಾರಿಗೆ ನಗುತ್ತಿದ್ದೇನೆ. ನಾನು ನನ್ನ ಮಕ್ಕಳನ್ನು ತಬ್ಬಿಕೊಂಡಿದ್ದೇನೆ. ನನ್ನ ಎದೆಯಿಂದ ಪರ್ವತದ ಗಾತ್ರದ ಕಲ್ಲು ಎತ್ತಲ್ಪಟ್ಟಂತೆ ಭಾಸವಾಗುತ್ತಿದೆ. ನಾನು ಈಗ ಮತ್ತೆ ಉಸಿರಾಡುತ್ತೇನೆ. ಇದು ನ್ಯಾಯ ಅನ್ನಿಸುತ್ತದೆ. ನನಗೆ, ನನ್ನ ಮಕ್ಕಳು ಮತ್ತು ಎಲ್ಲಾ ಮಹಿಳೆಯರಿಗೆ ಈ ನ್ಯಾಯ ನೀಡಿದ್ದಕ್ಕಾಗಿ ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್‌ಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ 20 ವರ್ಷಗಳಿಂದ ನನಗೆ ಬೆಂಬಲವನ್ನು ನೀಡಿದ್ದಕ್ಕಾಗಿ ಮತ್ತು ನನ್ನ ಪರವಾಗಿ ನಿಂತಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ವಕೀಲರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಮೊದಲೇ ಹೇಳಿದ್ದೇನೆ ಮತ್ತು ನಾನು ಇಂದು ಮತ್ತೆ ಹೇಳುತ್ತೇನೆ, ನನ್ನಂತಹ ಮಹಿಳೆಯ ಪ್ರಯಾಣ ಎಂದಿಗೂ ಏಕಾಂಗಿಯಾಗಿ ಸಾಧ್ಯವಿಲ್ಲ. ನನ್ನ ಪಕ್ಕದಲ್ಲಿ ನನ್ನ ಪತಿ ಮತ್ತು ಮಕ್ಕಳಿದ್ದಾರೆ. ದ್ವೇಷದ ಸಮಯದಲ್ಲಿ ನನಗೆ ತುಂಬಾ ಪ್ರೀತಿಯನ್ನು ನೀಡಿದ ನನ್ನ ಸ್ನೇಹಿತರಿದ್ದಾರೆ. ಪ್ರತಿ ಕಷ್ಟದ ಸಮಯದಲ್ಲಿ ನನ್ನ ಕೈಯನ್ನು ಹಿಡಿದಿದ್ದಾರೆ. ನನ್ನ ವಕೀಲರದ್ದು ಅಸಾಧಾರಣ ವ್ಯಕ್ತಿತ್ವ, ವಕೀಲೆ ಶೋಭಾ ಗುಪ್ತಾ ಅವರು 20 ವರ್ಷಗಳಿಂದ ನನ್ನೊಂದಿಗೆ ಅಚಲವಾಗಿ ನಿಂತುಕೊಂಡಿದ್ದಾರೆ ಮತ್ತು ನ್ಯಾಯದ ಹೋರಾಟದಲ್ಲಿ ಭರವಸೆ ಕಳೆದುಕೊಳ್ಳಲು ನನಗೆ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ.

ಅಪರಾಧಿಗಳ ಬಿಡುಗಡೆ ಆರಂಭಿಕವಾಗಿ ನನ್ನನ್ನು ಭಾವನಾತ್ಮಕವಾಗಿ ಕುಗ್ಗಿಸಿತ್ತು. ಆದರೆ ನಂತರ ಬೆಂಬಲದ ಅಲೆಯ ಮೂಲಕ ಧೈರ್ಯವನ್ನು ಮರಳಿ ಪಡೆದಿದ್ದೇನೆ. ಸಾವಿರಾರು ಜನರು PIL ಅರ್ಜಿಗಳಿಗೆ ಬೆಂಬಲವನ್ನು ಸೂಚಿಸಿದ್ದಾರೆ. ಕೋರ್ಟ್‌ಗೆ ಸಾರ್ವಜನಿಕ ಹಿತಾಶಕ್ತಿ ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದಾರೆ. ಬಹಿರಂಗ ಪತ್ರಗಳ ರೂಪದಲ್ಲಿ ಬೆಂಬಲಿಸಲು ಮುಂದೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗುಜರಾತ್‌ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. 2002ರ ಕೋಮುಗಲಭೆಯಲ್ಲಿ ಮೃತಪಟ್ಟ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಜೈಲು ಶಿಕ್ಷಗೆ ಒಳಗಾಗಿದ್ದ 11 ಅಪರಾಧಿಗಳಿಗೆ ಗುಜರಾತ್‌ ಸರಕಾರ ಕ್ಷಮಾದಾನ ನೀಡಿ 2022ರ ಆಗಸ್ಟ್ 15ರಂದು ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ರದ್ದುಗೊಳಿಸಿ ನಿನ್ನೆ ಆದೇಶಿಸಿತ್ತು.

ಇದನ್ನು ಓದಿ: ಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...