Homeಮುಖಪುಟರೇಪಿಸ್ಟ್‌ಗಳಿಗೆ ಮತ್ತೆ ಜೈಲು: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್‌ ಬಾನು ಪ್ರತಿಕ್ರಿಯೆ...

ರೇಪಿಸ್ಟ್‌ಗಳಿಗೆ ಮತ್ತೆ ಜೈಲು: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್‌ ಬಾನು ಪ್ರತಿಕ್ರಿಯೆ…

- Advertisement -
- Advertisement -

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ನಿನ್ನೆ ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಪ್ರತಿಕ್ರಿಯಿಸಿದ್ದು, ತೀರ್ಪು ಸಮಾಧಾನ ತಂದಿದೆ, ನನಗೆ ಈಗ ಮತ್ತೆ ಉಸಿರಾಡಬಹುದು ಎಂದು ಹೇಳಿದ್ದಾರೆ.

ತಮ್ಮ ವಕೀಲೆ ಶೋಭಾ ಗುಪ್ತಾ ಮೂಲಕ ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಬಿಲ್ಕಿಸ್ ಬಾನು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇಂದು ನನಗೆ ನಿಜವಾಗಿಯೂ ಹೊಸ ವರ್ಷ, ಸುಪ್ರೀಂಕೋರ್ಟ್ ತೀರ್ಪಿಗೆ ಧನ್ಯವಾದಗಳು. ನಾನು ಸಮಾಧಾನದಿಂದ ಕಣ್ಣೀರು ಹಾಕಿದೆ. ಒಂದೂವರೆ ವರ್ಷದಲ್ಲಿ ನಾನು ಮೊದಲ ಬಾರಿಗೆ ನಗುತ್ತಿದ್ದೇನೆ. ನಾನು ನನ್ನ ಮಕ್ಕಳನ್ನು ತಬ್ಬಿಕೊಂಡಿದ್ದೇನೆ. ನನ್ನ ಎದೆಯಿಂದ ಪರ್ವತದ ಗಾತ್ರದ ಕಲ್ಲು ಎತ್ತಲ್ಪಟ್ಟಂತೆ ಭಾಸವಾಗುತ್ತಿದೆ. ನಾನು ಈಗ ಮತ್ತೆ ಉಸಿರಾಡುತ್ತೇನೆ. ಇದು ನ್ಯಾಯ ಅನ್ನಿಸುತ್ತದೆ. ನನಗೆ, ನನ್ನ ಮಕ್ಕಳು ಮತ್ತು ಎಲ್ಲಾ ಮಹಿಳೆಯರಿಗೆ ಈ ನ್ಯಾಯ ನೀಡಿದ್ದಕ್ಕಾಗಿ ಭಾರತದ ಗೌರವಾನ್ವಿತ ಸುಪ್ರೀಂಕೋರ್ಟ್‌ಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕಳೆದ 20 ವರ್ಷಗಳಿಂದ ನನಗೆ ಬೆಂಬಲವನ್ನು ನೀಡಿದ್ದಕ್ಕಾಗಿ ಮತ್ತು ನನ್ನ ಪರವಾಗಿ ನಿಂತಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ವಕೀಲರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಮೊದಲೇ ಹೇಳಿದ್ದೇನೆ ಮತ್ತು ನಾನು ಇಂದು ಮತ್ತೆ ಹೇಳುತ್ತೇನೆ, ನನ್ನಂತಹ ಮಹಿಳೆಯ ಪ್ರಯಾಣ ಎಂದಿಗೂ ಏಕಾಂಗಿಯಾಗಿ ಸಾಧ್ಯವಿಲ್ಲ. ನನ್ನ ಪಕ್ಕದಲ್ಲಿ ನನ್ನ ಪತಿ ಮತ್ತು ಮಕ್ಕಳಿದ್ದಾರೆ. ದ್ವೇಷದ ಸಮಯದಲ್ಲಿ ನನಗೆ ತುಂಬಾ ಪ್ರೀತಿಯನ್ನು ನೀಡಿದ ನನ್ನ ಸ್ನೇಹಿತರಿದ್ದಾರೆ. ಪ್ರತಿ ಕಷ್ಟದ ಸಮಯದಲ್ಲಿ ನನ್ನ ಕೈಯನ್ನು ಹಿಡಿದಿದ್ದಾರೆ. ನನ್ನ ವಕೀಲರದ್ದು ಅಸಾಧಾರಣ ವ್ಯಕ್ತಿತ್ವ, ವಕೀಲೆ ಶೋಭಾ ಗುಪ್ತಾ ಅವರು 20 ವರ್ಷಗಳಿಂದ ನನ್ನೊಂದಿಗೆ ಅಚಲವಾಗಿ ನಿಂತುಕೊಂಡಿದ್ದಾರೆ ಮತ್ತು ನ್ಯಾಯದ ಹೋರಾಟದಲ್ಲಿ ಭರವಸೆ ಕಳೆದುಕೊಳ್ಳಲು ನನಗೆ ಎಂದಿಗೂ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ.

ಅಪರಾಧಿಗಳ ಬಿಡುಗಡೆ ಆರಂಭಿಕವಾಗಿ ನನ್ನನ್ನು ಭಾವನಾತ್ಮಕವಾಗಿ ಕುಗ್ಗಿಸಿತ್ತು. ಆದರೆ ನಂತರ ಬೆಂಬಲದ ಅಲೆಯ ಮೂಲಕ ಧೈರ್ಯವನ್ನು ಮರಳಿ ಪಡೆದಿದ್ದೇನೆ. ಸಾವಿರಾರು ಜನರು PIL ಅರ್ಜಿಗಳಿಗೆ ಬೆಂಬಲವನ್ನು ಸೂಚಿಸಿದ್ದಾರೆ. ಕೋರ್ಟ್‌ಗೆ ಸಾರ್ವಜನಿಕ ಹಿತಾಶಕ್ತಿ ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದಾರೆ. ಬಹಿರಂಗ ಪತ್ರಗಳ ರೂಪದಲ್ಲಿ ಬೆಂಬಲಿಸಲು ಮುಂದೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಗುಜರಾತ್‌ ಕೋಮುಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಈ ವೇಳೆ ಅವರಿಗೆ 21 ವರ್ಷ ವಯಸ್ಸಾಗಿತ್ತು ಮತ್ತು ಅವರು ಐದು ತಿಂಗಳ ಗರ್ಭಿಣಿಯಾಗಿದ್ದರು. 2002ರ ಕೋಮುಗಲಭೆಯಲ್ಲಿ ಮೃತಪಟ್ಟ ಏಳು ಕುಟುಂಬದ ಸದಸ್ಯರಲ್ಲಿ ಆಕೆಯ ಮೂರು ವರ್ಷದ ಮಗಳೂ ಸೇರಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಜೈಲು ಶಿಕ್ಷಗೆ ಒಳಗಾಗಿದ್ದ 11 ಅಪರಾಧಿಗಳಿಗೆ ಗುಜರಾತ್‌ ಸರಕಾರ ಕ್ಷಮಾದಾನ ನೀಡಿ 2022ರ ಆಗಸ್ಟ್ 15ರಂದು ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಬಿಲ್ಕಿಸ್‌ ಬಾನು, ತೃಣಮೂಲ ಕಾಂಗ್ರೆಸ್‌ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್‌ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್‌ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್‌ ರೇಖಾ ವರ್ಮಾ ಸಹಿತ ಹಲವರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ 14 ಮಂದಿಯ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್‌ ಸರಕಾರದ ಆದೇಶನ್ನು ರದ್ದುಗೊಳಿಸಿ ನಿನ್ನೆ ಆದೇಶಿಸಿತ್ತು.

ಇದನ್ನು ಓದಿ: ಮಣಿಪುರದಲ್ಲಿ ಗ್ರಾಮಸ್ಥರಿಗೆ ಮನೆ ಬಿಟ್ಟು ತೆರಳುವಂತೆ ಬಲವಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...