Homeಸಿನಿಮಾಕ್ರೀಡೆ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

- Advertisement -
- Advertisement -

ಭಾರತ ಕ್ರಿಕೆಟ್‌ ತಂಡದ ಆಟಗಾರ ವಿರಾಟ್ ಕೊಹ್ಲಿ ಅವರು ಭಾರತ ಟೆಸ್ಟ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ. ಕಳೆದ ವರ್ಷ, ಕೊಹ್ಲಿ ಅವರು ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದರ ನಂತರ ಬಿಸಿಸಿಐ ಅವರನ್ನು ಏಕದಿನ ತಂಡನ ನಾಯಕ ಸ್ಥಾನದಿಂದ ತೆಗೆದುಹಾಕಿತ್ತು.

“ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು 7 ವರ್ಷಗಳ ಕಾಲ ಪ್ರತಿದಿನ ನಿರಂತರವಾಗಿ ಶ್ರಮ ಪಟ್ಟಿದ್ದೇನೆ. ಏನನ್ನೂ ಬಿಡದೇ ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಪ್ರತಿಯೊಂದು ವಿಷಯವೂ ಒಂದು ಹಂತದಲ್ಲಿ ಸ್ಥಗಿತಗೊಳ್ಳಬೇಕು, ಹಾಗೆಯೆ, ಭಾರತದ ಟೆಸ್ಟ್ ಕ್ಯಾಪ್ಟನ್ ಆಗಿ ಇದು ನನ್ನ ಕೊನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ವಿರಾಟ್ ಕೊಹ್ಲಿ ನಾಯಕತ್ವ ವಿವಾದ: ಬಿಸಿಸಿಐ ಇದನ್ನು ನಿಭಾಯಿಸುತ್ತದೆ ಎಂದ ಸೌರವ್ ಗಂಗೂಲಿ

“ಪ್ರಯಾಣದ ಉದ್ದಕ್ಕೂ ಅನೇಕ ಏರಿಳಿತಗಳು ಮತ್ತು ಕೆಲವು ಕುಸಿತಗಳು ಇದ್ದವು. ಆದರೆ ಎಂದಿಗೂ ಪ್ರಯತ್ನದ ಕೊರತೆ ಅಥವಾ ನಂಬಿಕೆಯ ಕೊರತೆ ಇರಲಿಲ್ಲ. ನಾನು ಯಾವಾಗಲೂ ನನ್ನ 120% ದಷ್ಟು ಪ್ರಯತ್ನವನ್ನು ಎಲ್ಲದರಲ್ಲೂ ನೀಡುತ್ತೇನೆ ಎಂದು ನಂಬಿದ್ದೇನೆ. ಒಂದು ವೇಳೆ ನಾನು ಅದನ್ನು ಮಾಡಲು ಸಾಧ್ಯವಾಗದಿದ್ದರೆ, ಅದು ಸರಿಯಾದ ಕೆಲಸವಲ್ಲ ಎಂದು ನನಗೆ ತಿಳಿದಿದೆ. ನನ್ನ ಮನಸ್ಸಿನಲ್ಲಿ ನನಗೆ ಸಂಪೂರ್ಣ ಸ್ಪಷ್ಟತೆ ಇದೆ ಮತ್ತು ನನ್ನ ತಂಡಕ್ಕೆ ನಾನು ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇಷ್ಟು ದೀರ್ಘಾವಧಿಯವರೆಗೆ ನನ್ನ ದೇಶವನ್ನು ಮುನ್ನಡೆಸಲು ನನಗೆ ಅವಕಾಶ ನೀಡಿದ ಬಿಸಿಸಿಐಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಎಲ್ಲಕ್ಕಿಂತ ಮುಖ್ಯವಾಗಿ ಯಾವುದೇ ಪರಿಸ್ಥಿತಿಯಲ್ಲಿ ಎಂದಿಗೂ ಬಿಟ್ಟುಕೊಡದ ತಂಡದ ಸಹ ಆಟಗಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಈ ಪ್ರಯಾಣವನ್ನು ಸ್ಮರಣೀಯ ಮತ್ತು ಸುಂದರಗೊಳಿಸಿದ್ದೀರಿ. ಟೆಸ್ಟ್ ಕ್ರಿಕೆಟ್‌ನಲ್ಲಿ ಸತತವಾಗಿ ನಮ್ಮನ್ನು ಮುನ್ನಡೆಸಿದ್ದ ರವಿ ಭಾಯ್ ಮತ್ತು ಅವರ ಗುಂಪಿಗೆ ಧನ್ಯವಾದಗಳು. ಕೊನೆಯದಾಗಿ, ನಾಯಕನಾಗಿ ನನ್ನನ್ನು ನಂಬಿದ ಎಂಎಸ್ ಧೋನಿಗೆ ಧನ್ಯವಾದ”ಎಂದು ಅವರು ಹೇಳಿದ್ದಾರೆ.

ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಸೋತ ಒಂದು ದಿನದ ನಂತರ ಟೆಸ್ಟ್ ನಾಯಕತ್ವವನ್ನು ತೊರೆಯುವ ನಿರ್ಧಾರವನ್ನು ಕೊಹ್ಲಿ ತೆಗೆದುಕೊಂಡಿದ್ದಾರೆ. ನವೆಂಬರ್ 2019 ರಿಂದ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾವುದೆ ಶತಕ ದಾಖಲಿಸಿಲ್ಲ. ಅವರು ಕೊನೆಯ ಬಾರಿಗೆ ಬಾಂಗ್ಲಾದೇಶ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದರು.

ಇದನ್ನೂ ಓದಿ:ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...