Homeಅಂಕಣಗಳುಪುಸ್ತಕ ವಿಮರ್ಶೆ; "ಐ ಕಾಂಟ್ ಬ್ರೀದ್" ಉಸಿರುಗಟ್ಟಿಸುವ ವಾತಾವರಣದ ಸಂಕಟಗಳ ಅನಾವರಣ

ಪುಸ್ತಕ ವಿಮರ್ಶೆ; “ಐ ಕಾಂಟ್ ಬ್ರೀದ್” ಉಸಿರುಗಟ್ಟಿಸುವ ವಾತಾವರಣದ ಸಂಕಟಗಳ ಅನಾವರಣ

- Advertisement -
- Advertisement -

ಕೊಪ್ಪಳದ ಯುವಕವಿ ಮಹೇಶ ಬಳ್ಳಾರಿ ಅವರ ಕವನ ಸಂಕಲನ “ಐ ಕಾಂಟ್ ಬ್ರೀದ್”. ಅವರಲ್ಲಿನ ಕವಿ ಪ್ರತಿಭೆಯನ್ನು ಮತ್ತಷ್ಟು ಹುರಿಗೊಳಿಸಿ ಹೊಸೆದ ಕಾವ್ಯಮಾಲೆಯಾಗಿದೆ ಇದು. ವರ್ತಮಾನದ ತಲ್ಲಣಗಳನ್ನು ತಣ್ಣನೆಯ ಬಂಡಾಯದೊಂದಿಗೆ ಬೆಸೆದು, ನಮ್ಮೊಳಗಿನ ಜಡತ್ವವನ್ನು ಬಡಿದೆಬ್ಬಿಸುವ ಎಚ್ಚರಿಕೆಯ ಗಂಟೆಯಾಗಿದೆ. ಆವರಿಸಿರುವ ಅಂಧಕಾರಕ್ಕೆ ಬೆಳದಿಂಗಳ ಕಿರಣವಾಗಿ, ಸಮಕಾಲೀನ ಸಂಗತಿಗಳ ಪ್ರತಿಬಿಂಬವಾಗಿ, ಮನಸಿಗಂಟಿದ ಮಾಲಿನ್ಯಕ್ಕೆ ಸ್ಯಾನಿಟೈಸರ್ ಆಗಿ, ಧರ್ಮದ ಅಮಲು ಇಳಿಸುವ ತಂಪು ಪಾನಕವಾಗಿ, ಬೆಂಕಿ ಆರಿಸಿ, ಹಸಿರು ಸೃಜಿಸುವ ಹನಿಗಳ ಸಿಂಚನವಾಗಿ ಅಲ್ಲಿನ ಎಲ್ಲ ಕವಿತೆಗಳು ಸಹೃದಯರ ಅಂತರಂಗವನ್ನು ಆವರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗುತ್ತವೆ.

ತೀರ ಎಳೆಯ ತಾರುಣ್ಯದಲ್ಲಿಯೇ ’ಕಗ್ಗತ್ತಲು’ ಕವನ ಸಂಕಲನದ ಮೂಲಕ ಕಾವ್ಯಕ್ಷೇತ್ರಕ್ಕೆ ಕಾಲಿರಿಸಿದವರು ಮಹೇಶ. ನಿರಂತರವಾಗಿ ಉತ್ತಮ ಸಾಹಿತ್ಯದ ಕೃಷಿ ಮಾಡುತ್ತ, ಕನ್ನಡ ಕಾವ್ಯ, ಕಥೆ, ವೈಚಾರಿಕ ಕ್ಷೇತ್ರಕ್ಕೆ ಭರವಸೆಯ ಬೆಳೆ ನೀಡುತ್ತ, ಕವಿತೆಯಿಂದ ಕವಿತೆಗೆ, ಕೃತಿಯಿಂದ ಕೃತಿಗೆ ತಮ್ಮೊಳಗಿನ ಕವಿಯನ್ನು ಎತ್ತರಕ್ಕೆ ಬೆಳೆಸುತ್ತ, ಮಾಗಿಸುತ್ತ ಸಾಗಿರುವುದು ಈಗ ಅಕ್ಷರದ ರೂಪದಲ್ಲಿ ಮೂಡಿ ಕನ್ನಡದ ಓದುಗರ ಮುಂದೆ ಇದೆ.

ನಮ್ಮ ನಡುವೆ ನಿತ್ಯ ಘಟಿಸಿ ಇಂದು ಸುದ್ದಿಯಾಗಿ, ನಾಳೆ ರದ್ದಿಯಾಗಿ ನಮ್ಮ ಒತ್ತಡ, ಜಂಜಡಗಳ ನಡುವೆ ಮರೆತು ಹೋಗಿಬಿಡುವ ಅನೇಕ ಸಂಗತಿಗಳು ಕಾವ್ಯದ ರೂಪ ಪಡೆದಿವೆ ಇಲ್ಲಿ. ಮನುಷ್ಯನ ಅವಜ್ಞೆಗೆ ಒಳಗಾಗದೆ, ಮನುಕುಲಕ್ಕೆ ಸದಾ ಕಾಲ ಬಿಡದೇ ಕಾಡುವ ಚಿಂತನಾಕ್ರಮಗಳಾಗಬೇಕು ಎನ್ನುವ ರೀತಿಯಲ್ಲಿ, “ಐ ಕಾಂಟ್ ಬ್ರೀದ್ ಕವನ ಸಂಕಲನದ ಎಲ್ಲಾ 38 ಕವಿತೆಗಳು ವರ್ತಮಾನಕ್ಕೆ ಮುಖಾಮುಖಿಯಾಗುತ್ತವೆ. ಪ್ರತಿ ಸಾಲುಗಳಲ್ಲೂ ಮನುಷ್ಯತ್ವವನ್ನು ಸಾರುವ ಚಿಂತನೆಗಳು ಅಡಕವಾಗಿವೆ. ಓದುಗನೊಳಗೆ ಪ್ರೀತಿಯ ತೊರೆಯನ್ನು ತಿಳಿಯಾಗಿ, ಸದ್ದಿಲ್ಲದಂತೆ ಸಲಿಲವಾಗಿ ಹರಿಸಿ, ಮನಸ್ಸುಗಳನ್ನು ತೋಯಿಸುತ್ತವೆ.

ಅಧಿಕಾರದ ಕೇಂದ್ರ ಸ್ಥಾನಗಳ ಸುತ್ತಮುತ್ತಲಿನ ವಾತಾವರಣಕ್ಕಷ್ಟೇ ಸೌಕರ್ಯಗಳು ಸೀಮಿತವಾಗುವ ಪರಿಯನ್ನು ’ಪರುಷಕಟ್ಟೆ’ ಕವನದಲ್ಲಿ ಚಿತ್ರಿಸುತ್ತ, ಗಾಂಧಿಯ ಗ್ರಾಮ ಸ್ವರಾಜ್ಯ ಕಲ್ಪನೆಗೆ ಸಂಪೂರ್ಣ ಇತಿಶ್ರೀ ಹಾಡಿರುವ ಹಳ್ಳಿಗಳ ಸ್ಥಿತಿಯನ್ನು ಯಯಾತಿಗೆ ಹೋಲಿಸಿ, ಸೌಕರ್ಯಗಳ ನಿರೀಕ್ಷೆಯಲ್ಲಿರುವ ಹಳ್ಳಿಗರನ್ನು ಶಬರಿಗೆ ಹೋಲಿಸಿರುವದು ಅರ್ಥಪೂರ್ಣವಾಗಿ ಮೂಡಿಬಂದಿದೆ.

ಕೆಲವು ತಿಂಗಳುಗಳ ಹಿಂದೆ ಉತ್ತರ ಪ್ರದೇಶದ ಹಥರಾಸ್‌ನಲ್ಲಿ ನಡೆದ ಮನೀಷಾ ವಾಲ್ಮೀಕಿ ಎಂಬ ನತದೃಷ್ಟ ಯುವತಿಯ ಬರ್ಬರ ಹತ್ಯೆ ಹಲವರ ಪ್ರಜ್ಞಾಪೂರ್ವಕ ನಿರ್ಲಕ್ಷ್ಯಕ್ಕೆ ಒಳಗಾಯಿತು. ಈ ಹೊತ್ತಿನಲ್ಲಿ, ಕವಿಯಾದವನೊಬ್ಬ ಆ ಘಟನೆಗೆ ಸ್ಪಂದಿಸಬೇಕಾದ ಹೊಣೆಗಾರಿಕೆ ’ನಾನು ಮನೀಷಾ (ಕ್ಷಮಯಾ ಧರಿತ್ರಿ)’ ಕವನದ ಮೂಲಕ ಮಾನವೀಯ ನೆಲೆಗಳ ಸ್ಪಂದನೆ ವ್ಯಕ್ತವಾಗಿದೆ.

“ಬಂದೇ ಬರುತ್ತೇನೆ ಮತ್ತೆ
ಇದೇ ನೆಲದಲ್ಲಿ ನನ್ನ ಸುಟ್ಟವರ
ಮನೆಯಲ್ಲಿಯೇ ಮಗಳಾಗಿ ಹುಟ್ಟಿ
ಅವರ ಮನೆ ಬೆಳಗುವ
ನಂದಾ ದೀಪವಾಗುತ್ತೇನೆ..”

ಈ ಸಾಲುಗಳಲ್ಲಿ, ನ್ಯಾಯ, ಮನುಷ್ಯತ್ವ, ಪ್ರೀತಿಯ ಒರತೆಗಳು ಈಗ ಬತ್ತಿರಬಹುದು ಆದರೆ ಅವುಗಳು ಅಂತರಾಳದಲ್ಲಿ ಸ್ಥಾಯಿಯಾಗಿವೆ, ಮತ್ತೆ ಎಂದಾದರೂ ಅವು ಜೀವಸೆಲೆಯಾಗಿ ಮೈದಳೆಯುತ್ತವೆ ಎಂಬ ಭರವಸೆಯನ್ನು ಕವನದ ಮೂಲಕ ಓದುಗನ ಎದೆಗೆ ಕವಿ ದಾಟಿಸಿದ್ದಾರೆ.

ನಮ್ಮ ದೃಶ್ಯಮಾಧ್ಯಮಗಳ ಅಬ್ಬರ-ಭರಾಟೆಗಳು, ವೈಯಕ್ತಿಕ ಸ್ವಾತಂತ್ರ್ಯಗಳನ್ನೂ ಕೂಡ ಆಪೋಷನ ತೆಗೆದುಕೊಳ್ಳುತ್ತಿರುವ ವಿದ್ಯಮಾನಗಳನ್ನು ’ಆಕಾಶ-ಭೂಮಿ’ ಕವಿತೆಯಲ್ಲಿ ಸೊಗಸಾಗಿ, ತೀಕ್ಷ್ಣವಾಗಿ ದಾಖಲಿಸಿದ್ದಾರೆ. ’ಬಿಂಬ’ ಕವಿತೆಯು ರೂಪಕ, ಪ್ರತಿಮೆಗಳ ಹಂಗಿಲ್ಲದೇ ಮೂಡಿಬಂದಿದೆ. ಮೇಲ್ನೋಟಕ್ಕೆ ವಾಚ್ಯವೆನಿಸಿದರೂ ಕೂಡ, ವಸ್ತುವಿನ ದೃಷ್ಟಿಯಿಂದ ಹಿರಿದಾಗಿದೆ.

ರಾಜ ಬಂದ, ಟ್ರಂಪ್, ಅಹವಾಲುಗಳು, ಅಮಲು ಕವನಗಳು ಸಮಕಾಲೀನ ರಾಜಕಾರಣದ ಹಲವು ಮುಖಗಳನ್ನು ಅರ್ಥಪೂರ್ಣವಾಗಿ ಅನಾವರಣಗೊಳಿಸಿವೆ. ’ಅಲೈನ್‌ಮೆಂಟ್ ಕವಿತೆಯಲ್ಲಿ ಕಂಪ್ಯೂಟರ್ ಪರಿಭಾಷೆಯನ್ನು ಸಮರ್ಥವಾಗಿ ರೂಪಕವಾಗಿ ಬಳಸಿಕೊಂಡಿರುವುದು ಹೊಸಪೀಳಿಗೆಯ ಓದುಗರನ್ನು ಕಾವ್ಯದತ್ತ ಸೆಳೆದು ತರುವ ಸಾಧ್ಯತೆಗಳನ್ನು ತೋರಿದೆ.

“ಮೊದಲೆಲ್ಲ ಲೆಫ್ಟ್ ಅಲೈನ್‌ಮೆಂಟ್ ಸಾಲುಗಳಿರುತ್ತಿದ್ದವು,
ಇದೀಗ ರೈಟ್ ಅಲೈನ್‌ಮೆಂಟ್,
ಇವೆರಡರ ನಡುವೆ ಜಸ್ಟಿಫಿಕೇಷನ್ ಮಾಯವಾಗಿದೆ”

ಎನ್ನುವ ಸಾಲುಗಳು ರಾಜಕಾರಣದ ಸೈದ್ಧಾಂತಿಕ ಒಲವು, ನಿಲುವುಗಳಿಗೆ ಕನ್ನಡಿ ಹಿಡಿದಿವೆ.
ಜಾರ್ಜ್ ಫ್ಲಾಯ್ಡ್ ಎಂಬ ಆಫ್ರಿಕನ್ ಅಮೆರಿಕನ್ ಕಪ್ಪುವರ್ಣೀಯ ವ್ಯಕ್ತಿಯೊಬ್ಬನನ್ನು, ಅಮೆರಿಕಾದಲ್ಲಿ, ವರ್ಣಭೇದದ ಪೂರ್ವಾಗ್ರಹದ ಕಾರಣಕ್ಕೆ ಅಲ್ಲಿನ ಪೊಲೀಸರು ಅಮಾನವೀಯವಾಗಿ ಇದೇ 2020ರ ಮೇ 25ರಂದು ಕೊಲ್ಲುವಾಗ, ಆತನ ’ಐ ಕಾಂಟ್ ಬ್ರೀದ್’ ಎಂಬ ಆತ್ರರೋದನವನ್ನೇ, ಈ ಕವನ ಸಂಕಲನದ ಶೀರ್ಷಿಕೆಯಾಗಿಸಿರುವುದು ಮನುಷ್ಯತ್ವವನ್ನೇ ಉಸಿರುಗಟ್ಟಿಸಿರುವ ನಮ್ಮ ಸಮಕಾಲೀನ ವಾತಾವರಣದ ಚಿತ್ರಣ ನೀಡಿದೆ.

ಕನ್ನಡನಾಡಿನ ಹನ್ನೆರಡನೇ ಶತಮಾನದ ಹರಳಯ್ಯನಿಂದ ಹಿಡಿದು ಇಂತಹ ಹತ್ಯೆಗಳು ಇಂದಿಗೂ ಆಗಾಗ ಮರುಕಳಿಸುತ್ತಿರುವುದನ್ನು ಆರ್ದ್ರವಾಗಿ ಹಾಡಿದೆ.

’ತರಕಾರಿ ಹುಡುಗಿ’, ’ಕಳ್ಳ’ ಕವಿತೆಗಳು ನಮ್ಮ ವ್ಯವಸ್ಥೆಯಲ್ಲಿ ಬಡಜೀವಗಳು ತುತ್ತು ಅನ್ನಕ್ಕೆ, ಹಸಿವಿನ ಚೀಲ ತುಂಬಿಸಲಿಕ್ಕೆ ಪಡುವ ಪಡಿಪಾಟಲುಗಳು, ಭ್ರಷ್ಟಾಚಾರದ ಸಾಗರದಲ್ಲಿ ತಿಮಿಂಗಿಲಗಳನ್ನು ಹಿಡಿಯದೇ ಹಸಿವಿಗಾಗಿ ತುಂಡುರೊಟ್ಟಿ ಕದ್ದವನನ್ನು ಹಿಡಿವ ಭ್ರಷ್ಟಾಚಾರ ನಿಗ್ರಹದ ನಾಟಕಗಳನ್ನು ಓದುಗರ ಕಣ್ಣ ಮುಂದೆ ತರುತ್ತವೆ.

ಅಲಾಯಿ (ಮೊಹರಂ) ನಮ್ಮ ಸೌಹಾರ್ದದ ಸಿಹಿ ಚೊಂಗೆಯಂತಿದ್ದರೆ, ದೂರು, ಗಡಿಪಾರು ಶೀರ್ಷಿಕೆಯ ಮೂರುಸಾಲಿನ ಹನಿಗಳು ಕಿರಿದರಲ್ಲಿ ಹಿರಿದರ್ಥ ಹೇಳುವ, ಸಮ ಸಮಾಜ ಸಂದೇಶಗಳನ್ನು ಸಮರ್ಥವಾಗಿ ಸಾರಿವೆ.

ನಮ್ಮ ಕೊಪ್ಪಳದ ನಾಡಕವಿ ಎಂದೇ ಹೆಸರಾದ ಗವಿಸಿದ್ಧ ಎನ್ ಬಳ್ಳಾರಿಯವರ ಮಗನೆಂಬ ವಿಶೇಷ ರಿಯಾಯಿತಿ, ಆದ್ಯತೆ ಬಯಸದೆಯೂ ಕಾವ್ಯಕ್ಷೇತ್ರದಲ್ಲಿ ಸ್ಪಷ್ಟವಾಗಿ ಸ್ವಸಾಮರ್ಥ್ಯದಿಂದಲೇ ಮಹೇಶ ಬಳ್ಳಾರಿ ಮುನ್ನಡೆಯುತ್ತಿದ್ದಾರೆ.

ಮಂಜುನಾಥ ಡೊಳ್ಳಿನ

ಹಿರಿಯ ಸಹಾಯಕ ನಿರ್ದೇಶಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧಾರವಾಡ


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಬುದ್ಧನೆಡೆಗೆ ಮರಳಿ ಹಾರುವ ಮೂಡ್ನಾಕೂಡು ಚಿನ್ನಸ್ವಾಮಿಯವರ ನೆನಪಿನ ಹಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...