Homeಅಂಕಣಗಳುಪುಸ್ತಕ ವಿಮರ್ಶೆ; "ಐ ಕಾಂಟ್ ಬ್ರೀದ್" ಉಸಿರುಗಟ್ಟಿಸುವ ವಾತಾವರಣದ ಸಂಕಟಗಳ ಅನಾವರಣ

ಪುಸ್ತಕ ವಿಮರ್ಶೆ; “ಐ ಕಾಂಟ್ ಬ್ರೀದ್” ಉಸಿರುಗಟ್ಟಿಸುವ ವಾತಾವರಣದ ಸಂಕಟಗಳ ಅನಾವರಣ

- Advertisement -
- Advertisement -

ಕೊಪ್ಪಳದ ಯುವಕವಿ ಮಹೇಶ ಬಳ್ಳಾರಿ ಅವರ ಕವನ ಸಂಕಲನ “ಐ ಕಾಂಟ್ ಬ್ರೀದ್”. ಅವರಲ್ಲಿನ ಕವಿ ಪ್ರತಿಭೆಯನ್ನು ಮತ್ತಷ್ಟು ಹುರಿಗೊಳಿಸಿ ಹೊಸೆದ ಕಾವ್ಯಮಾಲೆಯಾಗಿದೆ ಇದು. ವರ್ತಮಾನದ ತಲ್ಲಣಗಳನ್ನು ತಣ್ಣನೆಯ ಬಂಡಾಯದೊಂದಿಗೆ ಬೆಸೆದು, ನಮ್ಮೊಳಗಿನ ಜಡತ್ವವನ್ನು ಬಡಿದೆಬ್ಬಿಸುವ ಎಚ್ಚರಿಕೆಯ ಗಂಟೆಯಾಗಿದೆ. ಆವರಿಸಿರುವ ಅಂಧಕಾರಕ್ಕೆ ಬೆಳದಿಂಗಳ ಕಿರಣವಾಗಿ, ಸಮಕಾಲೀನ ಸಂಗತಿಗಳ ಪ್ರತಿಬಿಂಬವಾಗಿ, ಮನಸಿಗಂಟಿದ ಮಾಲಿನ್ಯಕ್ಕೆ ಸ್ಯಾನಿಟೈಸರ್ ಆಗಿ, ಧರ್ಮದ ಅಮಲು ಇಳಿಸುವ ತಂಪು ಪಾನಕವಾಗಿ, ಬೆಂಕಿ ಆರಿಸಿ, ಹಸಿರು ಸೃಜಿಸುವ ಹನಿಗಳ ಸಿಂಚನವಾಗಿ ಅಲ್ಲಿನ ಎಲ್ಲ ಕವಿತೆಗಳು ಸಹೃದಯರ ಅಂತರಂಗವನ್ನು ಆವರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗುತ್ತವೆ.

ತೀರ ಎಳೆಯ ತಾರುಣ್ಯದಲ್ಲಿಯೇ ’ಕಗ್ಗತ್ತಲು’ ಕವನ ಸಂಕಲನದ ಮೂಲಕ ಕಾವ್ಯಕ್ಷೇತ್ರಕ್ಕೆ ಕಾಲಿರಿಸಿದವರು ಮಹೇಶ. ನಿರಂತರವಾಗಿ ಉತ್ತಮ ಸಾಹಿತ್ಯದ ಕೃಷಿ ಮಾಡುತ್ತ, ಕನ್ನಡ ಕಾವ್ಯ, ಕಥೆ, ವೈಚಾರಿಕ ಕ್ಷೇತ್ರಕ್ಕೆ ಭರವಸೆಯ ಬೆಳೆ ನೀಡುತ್ತ, ಕವಿತೆಯಿಂದ ಕವಿತೆಗೆ, ಕೃತಿಯಿಂದ ಕೃತಿಗೆ ತಮ್ಮೊಳಗಿನ ಕವಿಯನ್ನು ಎತ್ತರಕ್ಕೆ ಬೆಳೆಸುತ್ತ, ಮಾಗಿಸುತ್ತ ಸಾಗಿರುವುದು ಈಗ ಅಕ್ಷರದ ರೂಪದಲ್ಲಿ ಮೂಡಿ ಕನ್ನಡದ ಓದುಗರ ಮುಂದೆ ಇದೆ.

ನಮ್ಮ ನಡುವೆ ನಿತ್ಯ ಘಟಿಸಿ ಇಂದು ಸುದ್ದಿಯಾಗಿ, ನಾಳೆ ರದ್ದಿಯಾಗಿ ನಮ್ಮ ಒತ್ತಡ, ಜಂಜಡಗಳ ನಡುವೆ ಮರೆತು ಹೋಗಿಬಿಡುವ ಅನೇಕ ಸಂಗತಿಗಳು ಕಾವ್ಯದ ರೂಪ ಪಡೆದಿವೆ ಇಲ್ಲಿ. ಮನುಷ್ಯನ ಅವಜ್ಞೆಗೆ ಒಳಗಾಗದೆ, ಮನುಕುಲಕ್ಕೆ ಸದಾ ಕಾಲ ಬಿಡದೇ ಕಾಡುವ ಚಿಂತನಾಕ್ರಮಗಳಾಗಬೇಕು ಎನ್ನುವ ರೀತಿಯಲ್ಲಿ, “ಐ ಕಾಂಟ್ ಬ್ರೀದ್ ಕವನ ಸಂಕಲನದ ಎಲ್ಲಾ 38 ಕವಿತೆಗಳು ವರ್ತಮಾನಕ್ಕೆ ಮುಖಾಮುಖಿಯಾಗುತ್ತವೆ. ಪ್ರತಿ ಸಾಲುಗಳಲ್ಲೂ ಮನುಷ್ಯತ್ವವನ್ನು ಸಾರುವ ಚಿಂತನೆಗಳು ಅಡಕವಾಗಿವೆ. ಓದುಗನೊಳಗೆ ಪ್ರೀತಿಯ ತೊರೆಯನ್ನು ತಿಳಿಯಾಗಿ, ಸದ್ದಿಲ್ಲದಂತೆ ಸಲಿಲವಾಗಿ ಹರಿಸಿ, ಮನಸ್ಸುಗಳನ್ನು ತೋಯಿಸುತ್ತವೆ.

ಅಧಿಕಾರದ ಕೇಂದ್ರ ಸ್ಥಾನಗಳ ಸುತ್ತಮುತ್ತಲಿನ ವಾತಾವರಣಕ್ಕಷ್ಟೇ ಸೌಕರ್ಯಗಳು ಸೀಮಿತವಾಗುವ ಪರಿಯನ್ನು ’ಪರುಷಕಟ್ಟೆ’ ಕವನದಲ್ಲಿ ಚಿತ್ರಿಸುತ್ತ, ಗಾಂಧಿಯ ಗ್ರಾಮ ಸ್ವರಾಜ್ಯ ಕಲ್ಪನೆಗೆ ಸಂಪೂರ್ಣ ಇತಿಶ್ರೀ ಹಾಡಿರುವ ಹಳ್ಳಿಗಳ ಸ್ಥಿತಿಯನ್ನು ಯಯಾತಿಗೆ ಹೋಲಿಸಿ, ಸೌಕರ್ಯಗಳ ನಿರೀಕ್ಷೆಯಲ್ಲಿರುವ ಹಳ್ಳಿಗರನ್ನು ಶಬರಿಗೆ ಹೋಲಿಸಿರುವದು ಅರ್ಥಪೂರ್ಣವಾಗಿ ಮೂಡಿಬಂದಿದೆ.

ಕೆಲವು ತಿಂಗಳುಗಳ ಹಿಂದೆ ಉತ್ತರ ಪ್ರದೇಶದ ಹಥರಾಸ್‌ನಲ್ಲಿ ನಡೆದ ಮನೀಷಾ ವಾಲ್ಮೀಕಿ ಎಂಬ ನತದೃಷ್ಟ ಯುವತಿಯ ಬರ್ಬರ ಹತ್ಯೆ ಹಲವರ ಪ್ರಜ್ಞಾಪೂರ್ವಕ ನಿರ್ಲಕ್ಷ್ಯಕ್ಕೆ ಒಳಗಾಯಿತು. ಈ ಹೊತ್ತಿನಲ್ಲಿ, ಕವಿಯಾದವನೊಬ್ಬ ಆ ಘಟನೆಗೆ ಸ್ಪಂದಿಸಬೇಕಾದ ಹೊಣೆಗಾರಿಕೆ ’ನಾನು ಮನೀಷಾ (ಕ್ಷಮಯಾ ಧರಿತ್ರಿ)’ ಕವನದ ಮೂಲಕ ಮಾನವೀಯ ನೆಲೆಗಳ ಸ್ಪಂದನೆ ವ್ಯಕ್ತವಾಗಿದೆ.

“ಬಂದೇ ಬರುತ್ತೇನೆ ಮತ್ತೆ
ಇದೇ ನೆಲದಲ್ಲಿ ನನ್ನ ಸುಟ್ಟವರ
ಮನೆಯಲ್ಲಿಯೇ ಮಗಳಾಗಿ ಹುಟ್ಟಿ
ಅವರ ಮನೆ ಬೆಳಗುವ
ನಂದಾ ದೀಪವಾಗುತ್ತೇನೆ..”

ಈ ಸಾಲುಗಳಲ್ಲಿ, ನ್ಯಾಯ, ಮನುಷ್ಯತ್ವ, ಪ್ರೀತಿಯ ಒರತೆಗಳು ಈಗ ಬತ್ತಿರಬಹುದು ಆದರೆ ಅವುಗಳು ಅಂತರಾಳದಲ್ಲಿ ಸ್ಥಾಯಿಯಾಗಿವೆ, ಮತ್ತೆ ಎಂದಾದರೂ ಅವು ಜೀವಸೆಲೆಯಾಗಿ ಮೈದಳೆಯುತ್ತವೆ ಎಂಬ ಭರವಸೆಯನ್ನು ಕವನದ ಮೂಲಕ ಓದುಗನ ಎದೆಗೆ ಕವಿ ದಾಟಿಸಿದ್ದಾರೆ.

ನಮ್ಮ ದೃಶ್ಯಮಾಧ್ಯಮಗಳ ಅಬ್ಬರ-ಭರಾಟೆಗಳು, ವೈಯಕ್ತಿಕ ಸ್ವಾತಂತ್ರ್ಯಗಳನ್ನೂ ಕೂಡ ಆಪೋಷನ ತೆಗೆದುಕೊಳ್ಳುತ್ತಿರುವ ವಿದ್ಯಮಾನಗಳನ್ನು ’ಆಕಾಶ-ಭೂಮಿ’ ಕವಿತೆಯಲ್ಲಿ ಸೊಗಸಾಗಿ, ತೀಕ್ಷ್ಣವಾಗಿ ದಾಖಲಿಸಿದ್ದಾರೆ. ’ಬಿಂಬ’ ಕವಿತೆಯು ರೂಪಕ, ಪ್ರತಿಮೆಗಳ ಹಂಗಿಲ್ಲದೇ ಮೂಡಿಬಂದಿದೆ. ಮೇಲ್ನೋಟಕ್ಕೆ ವಾಚ್ಯವೆನಿಸಿದರೂ ಕೂಡ, ವಸ್ತುವಿನ ದೃಷ್ಟಿಯಿಂದ ಹಿರಿದಾಗಿದೆ.

ರಾಜ ಬಂದ, ಟ್ರಂಪ್, ಅಹವಾಲುಗಳು, ಅಮಲು ಕವನಗಳು ಸಮಕಾಲೀನ ರಾಜಕಾರಣದ ಹಲವು ಮುಖಗಳನ್ನು ಅರ್ಥಪೂರ್ಣವಾಗಿ ಅನಾವರಣಗೊಳಿಸಿವೆ. ’ಅಲೈನ್‌ಮೆಂಟ್ ಕವಿತೆಯಲ್ಲಿ ಕಂಪ್ಯೂಟರ್ ಪರಿಭಾಷೆಯನ್ನು ಸಮರ್ಥವಾಗಿ ರೂಪಕವಾಗಿ ಬಳಸಿಕೊಂಡಿರುವುದು ಹೊಸಪೀಳಿಗೆಯ ಓದುಗರನ್ನು ಕಾವ್ಯದತ್ತ ಸೆಳೆದು ತರುವ ಸಾಧ್ಯತೆಗಳನ್ನು ತೋರಿದೆ.

“ಮೊದಲೆಲ್ಲ ಲೆಫ್ಟ್ ಅಲೈನ್‌ಮೆಂಟ್ ಸಾಲುಗಳಿರುತ್ತಿದ್ದವು,
ಇದೀಗ ರೈಟ್ ಅಲೈನ್‌ಮೆಂಟ್,
ಇವೆರಡರ ನಡುವೆ ಜಸ್ಟಿಫಿಕೇಷನ್ ಮಾಯವಾಗಿದೆ”

ಎನ್ನುವ ಸಾಲುಗಳು ರಾಜಕಾರಣದ ಸೈದ್ಧಾಂತಿಕ ಒಲವು, ನಿಲುವುಗಳಿಗೆ ಕನ್ನಡಿ ಹಿಡಿದಿವೆ.
ಜಾರ್ಜ್ ಫ್ಲಾಯ್ಡ್ ಎಂಬ ಆಫ್ರಿಕನ್ ಅಮೆರಿಕನ್ ಕಪ್ಪುವರ್ಣೀಯ ವ್ಯಕ್ತಿಯೊಬ್ಬನನ್ನು, ಅಮೆರಿಕಾದಲ್ಲಿ, ವರ್ಣಭೇದದ ಪೂರ್ವಾಗ್ರಹದ ಕಾರಣಕ್ಕೆ ಅಲ್ಲಿನ ಪೊಲೀಸರು ಅಮಾನವೀಯವಾಗಿ ಇದೇ 2020ರ ಮೇ 25ರಂದು ಕೊಲ್ಲುವಾಗ, ಆತನ ’ಐ ಕಾಂಟ್ ಬ್ರೀದ್’ ಎಂಬ ಆತ್ರರೋದನವನ್ನೇ, ಈ ಕವನ ಸಂಕಲನದ ಶೀರ್ಷಿಕೆಯಾಗಿಸಿರುವುದು ಮನುಷ್ಯತ್ವವನ್ನೇ ಉಸಿರುಗಟ್ಟಿಸಿರುವ ನಮ್ಮ ಸಮಕಾಲೀನ ವಾತಾವರಣದ ಚಿತ್ರಣ ನೀಡಿದೆ.

ಕನ್ನಡನಾಡಿನ ಹನ್ನೆರಡನೇ ಶತಮಾನದ ಹರಳಯ್ಯನಿಂದ ಹಿಡಿದು ಇಂತಹ ಹತ್ಯೆಗಳು ಇಂದಿಗೂ ಆಗಾಗ ಮರುಕಳಿಸುತ್ತಿರುವುದನ್ನು ಆರ್ದ್ರವಾಗಿ ಹಾಡಿದೆ.

’ತರಕಾರಿ ಹುಡುಗಿ’, ’ಕಳ್ಳ’ ಕವಿತೆಗಳು ನಮ್ಮ ವ್ಯವಸ್ಥೆಯಲ್ಲಿ ಬಡಜೀವಗಳು ತುತ್ತು ಅನ್ನಕ್ಕೆ, ಹಸಿವಿನ ಚೀಲ ತುಂಬಿಸಲಿಕ್ಕೆ ಪಡುವ ಪಡಿಪಾಟಲುಗಳು, ಭ್ರಷ್ಟಾಚಾರದ ಸಾಗರದಲ್ಲಿ ತಿಮಿಂಗಿಲಗಳನ್ನು ಹಿಡಿಯದೇ ಹಸಿವಿಗಾಗಿ ತುಂಡುರೊಟ್ಟಿ ಕದ್ದವನನ್ನು ಹಿಡಿವ ಭ್ರಷ್ಟಾಚಾರ ನಿಗ್ರಹದ ನಾಟಕಗಳನ್ನು ಓದುಗರ ಕಣ್ಣ ಮುಂದೆ ತರುತ್ತವೆ.

ಅಲಾಯಿ (ಮೊಹರಂ) ನಮ್ಮ ಸೌಹಾರ್ದದ ಸಿಹಿ ಚೊಂಗೆಯಂತಿದ್ದರೆ, ದೂರು, ಗಡಿಪಾರು ಶೀರ್ಷಿಕೆಯ ಮೂರುಸಾಲಿನ ಹನಿಗಳು ಕಿರಿದರಲ್ಲಿ ಹಿರಿದರ್ಥ ಹೇಳುವ, ಸಮ ಸಮಾಜ ಸಂದೇಶಗಳನ್ನು ಸಮರ್ಥವಾಗಿ ಸಾರಿವೆ.

ನಮ್ಮ ಕೊಪ್ಪಳದ ನಾಡಕವಿ ಎಂದೇ ಹೆಸರಾದ ಗವಿಸಿದ್ಧ ಎನ್ ಬಳ್ಳಾರಿಯವರ ಮಗನೆಂಬ ವಿಶೇಷ ರಿಯಾಯಿತಿ, ಆದ್ಯತೆ ಬಯಸದೆಯೂ ಕಾವ್ಯಕ್ಷೇತ್ರದಲ್ಲಿ ಸ್ಪಷ್ಟವಾಗಿ ಸ್ವಸಾಮರ್ಥ್ಯದಿಂದಲೇ ಮಹೇಶ ಬಳ್ಳಾರಿ ಮುನ್ನಡೆಯುತ್ತಿದ್ದಾರೆ.

ಮಂಜುನಾಥ ಡೊಳ್ಳಿನ

ಹಿರಿಯ ಸಹಾಯಕ ನಿರ್ದೇಶಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧಾರವಾಡ


ಇದನ್ನೂ ಓದಿ: ಪುಸ್ತಕ ವಿಮರ್ಶೆ: ಬುದ್ಧನೆಡೆಗೆ ಮರಳಿ ಹಾರುವ ಮೂಡ್ನಾಕೂಡು ಚಿನ್ನಸ್ವಾಮಿಯವರ ನೆನಪಿನ ಹಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...