Homeಕರ್ನಾಟಕ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನ ಪುಂಜವಾಗಿದ್ದರು. ಕೊನೆ ಉಸಿರಿನ ವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.

ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನು ಕಳೆದುಕೊಂಡ ದು:ಖದಲ್ಲಿದ್ದೇನೆ.

ಇದನ್ನೂ ಓದಿ: ಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ, ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.

ಆಸ್ಪತ್ರೆಯಲ್ಲಿ ತಿಂಡಿ ತಿನ್ನುತ್ತಿರುವ ದೊರೆಸ್ವಾಮಿಯವರು

ದೇಶದ, ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.

ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.

ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.

ಪತ್ನಿಯೊಂದಿಗೆ

ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.

ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸ ತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಜ್ಞಾಕ್ಷಿತಿಜ ವಿಸ್ತಾರವಾಗುವ ವಿಚಾರ ಲಹರಿ ಹೊತ್ತ ‘ ನಾನು ಗೌರಿ’ ಗೆ ಶರಣು ಶರಣು.

  2. ವರ್ಷವಿದ್ದವು ಕರೋ ನ ಹೋಗದು; ಒಂದು ಗುಂಗಾಡನ್ನು ಒಡಿಶಾದ ಸರ್ಕಾರ ಎಂದು ಹೇಳಬೇಕಾಗುತ್ತೆ ವರ್ಷ ನಂತಸಾರ>?ACCULTURATE: he works hard but not preaches!
    only talk but not financial transactions is allowed what usew of f.m’s way!>? do U agree>!<

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...