Homeಕರ್ನಾಟಕ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನ ಪುಂಜವಾಗಿದ್ದರು. ಕೊನೆ ಉಸಿರಿನ ವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.

ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನು ಕಳೆದುಕೊಂಡ ದು:ಖದಲ್ಲಿದ್ದೇನೆ.

ಇದನ್ನೂ ಓದಿ: ಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ, ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.

ಆಸ್ಪತ್ರೆಯಲ್ಲಿ ತಿಂಡಿ ತಿನ್ನುತ್ತಿರುವ ದೊರೆಸ್ವಾಮಿಯವರು

ದೇಶದ, ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.

ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.

ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.

ಪತ್ನಿಯೊಂದಿಗೆ

ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.

ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸ ತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಜ್ಞಾಕ್ಷಿತಿಜ ವಿಸ್ತಾರವಾಗುವ ವಿಚಾರ ಲಹರಿ ಹೊತ್ತ ‘ ನಾನು ಗೌರಿ’ ಗೆ ಶರಣು ಶರಣು.

  2. ವರ್ಷವಿದ್ದವು ಕರೋ ನ ಹೋಗದು; ಒಂದು ಗುಂಗಾಡನ್ನು ಒಡಿಶಾದ ಸರ್ಕಾರ ಎಂದು ಹೇಳಬೇಕಾಗುತ್ತೆ ವರ್ಷ ನಂತಸಾರ>?ACCULTURATE: he works hard but not preaches!
    only talk but not financial transactions is allowed what usew of f.m’s way!>? do U agree>!<

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...