Homeಕರ್ನಾಟಕ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನ ಪುಂಜವಾಗಿದ್ದರು. ಕೊನೆ ಉಸಿರಿನ ವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.

ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನು ಕಳೆದುಕೊಂಡ ದು:ಖದಲ್ಲಿದ್ದೇನೆ.

ಇದನ್ನೂ ಓದಿ: ಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ, ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.

ಆಸ್ಪತ್ರೆಯಲ್ಲಿ ತಿಂಡಿ ತಿನ್ನುತ್ತಿರುವ ದೊರೆಸ್ವಾಮಿಯವರು

ದೇಶದ, ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.

ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.

ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.

ಪತ್ನಿಯೊಂದಿಗೆ

ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.

ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸ ತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಜ್ಞಾಕ್ಷಿತಿಜ ವಿಸ್ತಾರವಾಗುವ ವಿಚಾರ ಲಹರಿ ಹೊತ್ತ ‘ ನಾನು ಗೌರಿ’ ಗೆ ಶರಣು ಶರಣು.

  2. ವರ್ಷವಿದ್ದವು ಕರೋ ನ ಹೋಗದು; ಒಂದು ಗುಂಗಾಡನ್ನು ಒಡಿಶಾದ ಸರ್ಕಾರ ಎಂದು ಹೇಳಬೇಕಾಗುತ್ತೆ ವರ್ಷ ನಂತಸಾರ>?ACCULTURATE: he works hard but not preaches!
    only talk but not financial transactions is allowed what usew of f.m’s way!>? do U agree>!<

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...