Homeಕರ್ನಾಟಕ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನ ಪುಂಜವಾಗಿದ್ದರು. ಕೊನೆ ಉಸಿರಿನ ವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.

ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನು ಕಳೆದುಕೊಂಡ ದು:ಖದಲ್ಲಿದ್ದೇನೆ.

ಇದನ್ನೂ ಓದಿ: ಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ, ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.

ಆಸ್ಪತ್ರೆಯಲ್ಲಿ ತಿಂಡಿ ತಿನ್ನುತ್ತಿರುವ ದೊರೆಸ್ವಾಮಿಯವರು

ದೇಶದ, ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.

ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.

ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.

ಪತ್ನಿಯೊಂದಿಗೆ

ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.

ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸ ತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಜ್ಞಾಕ್ಷಿತಿಜ ವಿಸ್ತಾರವಾಗುವ ವಿಚಾರ ಲಹರಿ ಹೊತ್ತ ‘ ನಾನು ಗೌರಿ’ ಗೆ ಶರಣು ಶರಣು.

  2. ವರ್ಷವಿದ್ದವು ಕರೋ ನ ಹೋಗದು; ಒಂದು ಗುಂಗಾಡನ್ನು ಒಡಿಶಾದ ಸರ್ಕಾರ ಎಂದು ಹೇಳಬೇಕಾಗುತ್ತೆ ವರ್ಷ ನಂತಸಾರ>?ACCULTURATE: he works hard but not preaches!
    only talk but not financial transactions is allowed what usew of f.m’s way!>? do U agree>!<

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....