Homeಕರ್ನಾಟಕ‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

‘ದೊರೆಸ್ವಾಮಿ ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ’- ಸಿದ್ದರಾಮಯ್ಯ ಅವರಿಂದ ಶ್ರದ್ದಾಂಜಲಿ ಬರಹ

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನ ಪುಂಜವಾಗಿದ್ದರು. ಕೊನೆ ಉಸಿರಿನ ವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.

ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನು ಕಳೆದುಕೊಂಡ ದು:ಖದಲ್ಲಿದ್ದೇನೆ.

ಇದನ್ನೂ ಓದಿ: ಹಿರಿಯ ಸ್ವಾತಂತ್ಯ್ರ ಹೋರಾಟಗಾರನಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ

ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ, ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.

ಆಸ್ಪತ್ರೆಯಲ್ಲಿ ತಿಂಡಿ ತಿನ್ನುತ್ತಿರುವ ದೊರೆಸ್ವಾಮಿಯವರು

ದೇಶದ, ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.

ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಇದನ್ನೂ ಓದಿ: ‘ಬದುಕಿದರೆ ದೊರೆಸ್ವಾಮಿಯವರ ಹಾಗೆ ಬದುಕಬೇಕು’

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.

ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.

ಪತ್ನಿಯೊಂದಿಗೆ

ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು.

ಇದನ್ನೂ ಓದಿ: ‘ಏನಪ್ಪ, ದೇವರು ಇದಾನೆ ಅನಿಸುತ್ತಾ, ಇಲ್ಲಾ ಅನಿಸುತ್ತಾ?’ ದೊರೆಸ್ವಾಮಿ ಜೊತೆಗಿನ ನೆನಪು

ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.

ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸ ತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

ಇದನ್ನೂ ಓದಿ: ಗೌರವ ನಮನ | ದೊರೆಸ್ವಾಮಿ ಅವರ ಸಾರ್ಥಕ ಬದುಕಿನ ಮೈಲಿಗಲ್ಲುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರಜ್ಞಾಕ್ಷಿತಿಜ ವಿಸ್ತಾರವಾಗುವ ವಿಚಾರ ಲಹರಿ ಹೊತ್ತ ‘ ನಾನು ಗೌರಿ’ ಗೆ ಶರಣು ಶರಣು.

  2. ವರ್ಷವಿದ್ದವು ಕರೋ ನ ಹೋಗದು; ಒಂದು ಗುಂಗಾಡನ್ನು ಒಡಿಶಾದ ಸರ್ಕಾರ ಎಂದು ಹೇಳಬೇಕಾಗುತ್ತೆ ವರ್ಷ ನಂತಸಾರ>?ACCULTURATE: he works hard but not preaches!
    only talk but not financial transactions is allowed what usew of f.m’s way!>? do U agree>!<

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...