Homeಕರ್ನಾಟಕಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅಧಿವೇಶನದಲ್ಲೂ  ಆ ಬಗ್ಗೆ ಚರ್ಚೆಯಾಗುತ್ತಿದೆ. ನಾನು ಯಾರ ಜತೆಗಾದರೂ ಅಡ್ಡೆಸ್ಟ್‌ಮೆಂಟ್ ಮಾಡಿಕೊಂಡಿದ್ದೇನೆ ಎಂಬುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳುವು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರು, ”ನೀವು ಪದೇ ಪದೇ ವಿರೋಧ ಪಕ್ಷ ನಾಯಕ ಆಗಲ್ಲ ಎಂದು ಹೇಳುತ್ತೀರಿ, ಹಾಗಿದ್ದರೆ ನೀವು ಯಾರ ಜೊತೆಗೂ ಅಡ್ವಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಕೆಣಕಿದರು.

ಯತ್ನಾಳ ಅವರ ಈ ಮಾತಿಗೆ ಗರಂ ಆದ ಸಿಎಂ ಸಿದ್ದರಾಮಯ್ಯ ಅವರು, ”ನಾನು ಯಾರ ಜೊತೆಗೂ ನನ್ನ ಜೀವನದಲ್ಲಿ ಅಡ್ಡೆಸ್ಟ್‌ಮೆಂಟ್ ರಾಜಕೀಯ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ” ಎಂದು ಗುಡುಗಿದರು.

”ನೀವು ಪದೇ ಪದೇ ಮಾತನಾಡುವುದರಿಂದ ಸಂಸದೀಯ ಪಟು ಆಗಲ್ಲ. ನೀವು ಎಷ್ಟೇ ಕಿರುಚಾಡಿದರೂ ನನಗೆ ಇರುವ ಮಾಹಿತಿ ಪ್ರಕಾರ ನಿಮಗೆ ವಿಪಕ್ಷ ನಾಯಕ ಮಾಡುವುದಿಲ್ಲ. ಅರಗ ಜ್ಞಾನೇಂದ್ರ ಆಕಾಂಕ್ಷಿ ಅಲ್ಲ, ಅಶ್ವತ್ಥ ನಾರಾಯಣ, ಬೊಮ್ಮಾಯಿ, ಆಶೋಕ್ ಆಕಾಂಕ್ಷಿಗಳಾಗಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಅರಗ, ಅಶೋಕ ಮತ್ತು ಅಶ್ವತ್ಥನಾರಾಯಣ ಅವರುತಾವು ಆಕಾಂಕ್ಷಿ ಅಲ್ಲ ಎಂದರು.

ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಿದ ಯತ್ನಾಳ, ”ಹಿಂದೆ ನೀವು ಕುಮಾರಸ್ವಾಮಿ ಅವರಿಗೆ ಅಪ್ಪನಾಣೆಗೂ ಸಿಎಂ ಆಗಲ್ಲ ಎಂದು ಹೇಳಿದ್ದೀರಿ. ಆದರೆ, ಅವರು ಸಿಎಂ ಆದರು. ಈಗ ನೀವು ನನಗೆ ವಿಪಕ್ಷ ನಾಯಕ ಆಗಲ್ಲ ಎನ್ನುತ್ತಿದ್ದೀರಿ. ಹಾಗಾಗಿ ನಾನೇ ವಿಪಕ್ಷ ನಾಯಕ ಆಗುತ್ತೇನೆ” ಎಂದರು.

”ನೀವೆಷ್ಟೇ ಬೆಂಕಿ ಹಚ್ಚಿದರೂ ಹೊತ್ತಿಕೊಳ್ಳಲ್ಲ. ಪದೇ ಪದೇ ವಿಪಕ್ಷ ನಾಯಕ ಆಗಲ್ಲ ಎನ್ನುತ್ತಿದ್ದೀರಿ. ಹೀಗಾಗಿ ನೀವು ಯಾರ ಜೊತೆಗೋ ಅಡ್ಡೆಸ್ಟ್‌ಮೆಂಟ್ ಮಾಡಿಕೊಂಡಿರಬೇಕು” ಎಂದು ಯತ್ನಾಳ ಮತ್ತೆ ಛೇಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಲಕ್ಷಣ ಸವದಿ, ”ವಿರೋಧಪಕ್ಷದ ಸ್ಥಾನವನ್ನು ಬಿಜೆಪಿಯವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎರವಲು ಸೇವೆಯ ಮೇಲೆ ಬಿಟ್ಟುಕೊಡಲಿದ್ದಾರೆ” ಎಂದು ಲೇವಡಿ ಮಾಡಿದರು.

”ಕುಮಾರಸ್ವಾಮಿ ಅವರೇ, ಆರಂಭದಲ್ಲಿ ನೀವು ವಿರೋಧಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡಿ, ವಿರೋಧ ಪಕ್ಷದ ನಾಯಕನ ಸ್ಥಾನ ಕುಮಾರಸ್ವಾಮಿ ಅವರ ಮನೆ ಬಾಗಿಲಿಗೆ ಬರುತ್ತದೆ. ಹೀಗಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಬಿಜೆಪಿಯ ಯಾವುದೇ ನಾಯಕ ಕೂರುತ್ತಿಲ್ಲ. ಆ ಸ್ಥಾನಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ” ಎಂದೂ ಕುಟುಕಿದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜು.26, 27ರವರೆಗೆ ಅವಕಾಶ: ಸಚಿವ ಕೆಜೆ ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...