Homeಕರ್ನಾಟಕಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ: ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಅಡ್ಡೆಸ್ಟ್‌ಮೆಂಟ್ ಪಾಲಿಟಿಕ್ಸ್ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಅಧಿವೇಶನದಲ್ಲೂ  ಆ ಬಗ್ಗೆ ಚರ್ಚೆಯಾಗುತ್ತಿದೆ. ನಾನು ಯಾರ ಜತೆಗಾದರೂ ಅಡ್ಡೆಸ್ಟ್‌ಮೆಂಟ್ ಮಾಡಿಕೊಂಡಿದ್ದೇನೆ ಎಂಬುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳುವು ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಅವರು, ”ನೀವು ಪದೇ ಪದೇ ವಿರೋಧ ಪಕ್ಷ ನಾಯಕ ಆಗಲ್ಲ ಎಂದು ಹೇಳುತ್ತೀರಿ, ಹಾಗಿದ್ದರೆ ನೀವು ಯಾರ ಜೊತೆಗೂ ಅಡ್ವಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ” ಎಂದು ಸಿದ್ದರಾಮಯ್ಯ ಅವರನ್ನು ಕೆಣಕಿದರು.

ಯತ್ನಾಳ ಅವರ ಈ ಮಾತಿಗೆ ಗರಂ ಆದ ಸಿಎಂ ಸಿದ್ದರಾಮಯ್ಯ ಅವರು, ”ನಾನು ಯಾರ ಜೊತೆಗೂ ನನ್ನ ಜೀವನದಲ್ಲಿ ಅಡ್ಡೆಸ್ಟ್‌ಮೆಂಟ್ ರಾಜಕೀಯ ಮಾಡಿಲ್ಲ, ಅಂತಹ ಜಾಯಮಾನವೇ ನನ್ನದಲ್ಲ” ಎಂದು ಗುಡುಗಿದರು.

”ನೀವು ಪದೇ ಪದೇ ಮಾತನಾಡುವುದರಿಂದ ಸಂಸದೀಯ ಪಟು ಆಗಲ್ಲ. ನೀವು ಎಷ್ಟೇ ಕಿರುಚಾಡಿದರೂ ನನಗೆ ಇರುವ ಮಾಹಿತಿ ಪ್ರಕಾರ ನಿಮಗೆ ವಿಪಕ್ಷ ನಾಯಕ ಮಾಡುವುದಿಲ್ಲ. ಅರಗ ಜ್ಞಾನೇಂದ್ರ ಆಕಾಂಕ್ಷಿ ಅಲ್ಲ, ಅಶ್ವತ್ಥ ನಾರಾಯಣ, ಬೊಮ್ಮಾಯಿ, ಆಶೋಕ್ ಆಕಾಂಕ್ಷಿಗಳಾಗಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಅರಗ, ಅಶೋಕ ಮತ್ತು ಅಶ್ವತ್ಥನಾರಾಯಣ ಅವರುತಾವು ಆಕಾಂಕ್ಷಿ ಅಲ್ಲ ಎಂದರು.

ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಿದ ಯತ್ನಾಳ, ”ಹಿಂದೆ ನೀವು ಕುಮಾರಸ್ವಾಮಿ ಅವರಿಗೆ ಅಪ್ಪನಾಣೆಗೂ ಸಿಎಂ ಆಗಲ್ಲ ಎಂದು ಹೇಳಿದ್ದೀರಿ. ಆದರೆ, ಅವರು ಸಿಎಂ ಆದರು. ಈಗ ನೀವು ನನಗೆ ವಿಪಕ್ಷ ನಾಯಕ ಆಗಲ್ಲ ಎನ್ನುತ್ತಿದ್ದೀರಿ. ಹಾಗಾಗಿ ನಾನೇ ವಿಪಕ್ಷ ನಾಯಕ ಆಗುತ್ತೇನೆ” ಎಂದರು.

”ನೀವೆಷ್ಟೇ ಬೆಂಕಿ ಹಚ್ಚಿದರೂ ಹೊತ್ತಿಕೊಳ್ಳಲ್ಲ. ಪದೇ ಪದೇ ವಿಪಕ್ಷ ನಾಯಕ ಆಗಲ್ಲ ಎನ್ನುತ್ತಿದ್ದೀರಿ. ಹೀಗಾಗಿ ನೀವು ಯಾರ ಜೊತೆಗೋ ಅಡ್ಡೆಸ್ಟ್‌ಮೆಂಟ್ ಮಾಡಿಕೊಂಡಿರಬೇಕು” ಎಂದು ಯತ್ನಾಳ ಮತ್ತೆ ಛೇಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಲಕ್ಷಣ ಸವದಿ, ”ವಿರೋಧಪಕ್ಷದ ಸ್ಥಾನವನ್ನು ಬಿಜೆಪಿಯವರು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎರವಲು ಸೇವೆಯ ಮೇಲೆ ಬಿಟ್ಟುಕೊಡಲಿದ್ದಾರೆ” ಎಂದು ಲೇವಡಿ ಮಾಡಿದರು.

”ಕುಮಾರಸ್ವಾಮಿ ಅವರೇ, ಆರಂಭದಲ್ಲಿ ನೀವು ವಿರೋಧಪಕ್ಷದ ನಾಯಕರಾಗಿ ಸಮರ್ಥವಾಗಿ ಕೆಲಸ ಮಾಡಿ, ವಿರೋಧ ಪಕ್ಷದ ನಾಯಕನ ಸ್ಥಾನ ಕುಮಾರಸ್ವಾಮಿ ಅವರ ಮನೆ ಬಾಗಿಲಿಗೆ ಬರುತ್ತದೆ. ಹೀಗಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಬಿಜೆಪಿಯ ಯಾವುದೇ ನಾಯಕ ಕೂರುತ್ತಿಲ್ಲ. ಆ ಸ್ಥಾನಕ್ಕಾಗಿ ಪರಸ್ಪರ ಕಚ್ಚಾಡುತ್ತಿದ್ದಾರೆ” ಎಂದೂ ಕುಟುಕಿದರು.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜು.26, 27ರವರೆಗೆ ಅವಕಾಶ: ಸಚಿವ ಕೆಜೆ ಜಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...