Homeಮುಖಪುಟಅನರ್ಹತೆ ಬಳಿಕ ಪ್ಯಾರಿಸ್‌ನಲ್ಲಿ ನನಗೆ ಯಾವುದೇ ಬೆಂಬಲ ಸಿಗಲಿಲ್ಲ: ವಿನೇಶಾ ಫೋಗಟ್

ಅನರ್ಹತೆ ಬಳಿಕ ಪ್ಯಾರಿಸ್‌ನಲ್ಲಿ ನನಗೆ ಯಾವುದೇ ಬೆಂಬಲ ಸಿಗಲಿಲ್ಲ: ವಿನೇಶಾ ಫೋಗಟ್

- Advertisement -
- Advertisement -

ಒಲಿಂಪಿಕ್ಸ್‌ನ 50 ಕೆಜಿ ತೂಕದ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಹೆಚ್ಚಿನ ತೂಕದ ಕಾರಣಕ್ಕೆ ಚಿನ್ನದ ಪದಕದ ಪಂದ್ಯದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ನಂತರ ಪ್ಯಾರಿಸ್‌ನಲ್ಲಿ ತನಗೆ ಯಾವುದೇ ಬೆಂಬಲವಿಲ್ಲ ಎಂದು ಕುಸ್ತಿಪಟು ವಿನೇಶಾ ಫೋಗಟ್ ಹೇಳಿದ್ದಾರೆ.

ಕುಸ್ತಿ ಪಂದ್ಯಕ್ಕೂ ಮುನ್ನ ತನ್ನ ತೂಕವನ್ನು ಕಡಿಮೆ ಮಾಡಲು ತೀವ್ರವಾದ ಪ್ರಯತ್ನಗಳು ವ್ಯರ್ಥವಾಯಿತು. ಆದರೆಮ ಅದು ನಿರ್ಜಲೀಕರಣಕ್ಕೆ ಕಾರಣವಾಗಿದ್ದರಿಂದ ಆಸ್ಪತ್ರೆಗೆ ಸೇರಬೇಕಾಯಿತು ಎಂದರು.

ವಿನೇಶಾ ಆಸ್ಪತ್ರೆ ಸೇರಿದ ಬಳಿಕ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​(ಐಒಎ) ಮುಖ್ಯಸ್ಥೆ ಪಿಟಿ ಉಷಾ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆದರೆ, ಪ್ಯಾರಿಸ್‌ನಲ್ಲಿ ತನಗೆ ಯಾವುದೇ ಬೆಂಬಲ ಸಿಗಲಿಲ್ಲ ಎಂದು ವಿನೇಶ್ ಈಗ ವಿನೇಶಾ  ಹೇಳಿದ್ದಾರೆ.

ಪಿಟಿ ಉಷಾ ಅವರೊಂದಿಗೆ ಚಿತ್ರ ಕ್ಲಿಕ್ಕಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು ರಾಜಕೀಯದ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ. “ನನಗೆ ಅಲ್ಲಿ ಏನು ಬೆಂಬಲ ಸಿಕ್ಕಿತು ಎಂದು ನನಗೆ ತಿಳಿದಿಲ್ಲ; ಪಿಟಿ ಉಷಾ ಮೇಡಂ ನನ್ನನ್ನು ಆಸ್ಪತ್ರೆಗೆ ಭೇಟಿ ಮಾಡಿದರು. ಒಂದು ಫೋಟೋ ಕ್ಲಿಕ್ ಮಾಡಲಾಗಿದೆ. ನೀವು ಹೇಳಿದಂತೆ, ರಾಜಕೀಯದಲ್ಲಿ ಮುಚ್ಚಿದ ಬಾಗಿಲುಗಳ ಹಿಂದೆ ಬಹಳಷ್ಟು ನಡೆಯುತ್ತದೆ. ಹಾಗೆಯೇ, ಪ್ಯಾರಿಸ್‌ನಲ್ಲಿ ಹಾಗೆಯೇ ರಾಜಕೀಯ ನಡೆಯಿತು” ಎಂದು ಆರೋಪಿಸಿದ್ದಾರೆ.

“ಅದಕ್ಕಾಗಿಯೇ ನಾನು ಎದೆಗುಂದಿದೆ. ಬಹಳಷ್ಟು ಜನರು ‘ಕುಸ್ತಿಯನ್ನು ಬಿಡಬೇಡಿ’ ಎಂದು ಹೇಳುತ್ತಿದ್ದಾರೆ. ನಾನು ಯಾವುದಕ್ಕಾಗಿ ಮುಂದುವರಿಯಬೇಕು? ಎಲ್ಲೆಡೆ ರಾಜಕೀಯವಿದೆ” ಎಂದು ಅವರು ಹೇಳಿದರು. “ಅವರು ತಮ್ಮ ಫೋಟೋವನ್ನು ಪಿಟಿ ಉಷಾ ಅವರೊಂದಿಗೆ ಕ್ಲಿಕ್ ಮಾಡಿರುವುದು ತನಗೆ ತಿಳಿದಿರಲಿಲ್ಲ; ಅದು ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆಯುವ ಪ್ರಹಸನ” ಎಂದು ಹೇಳಿದ್ದಾರೆ.

“ನೀವು ಆಸ್ಪತ್ರೆಯ ಹಾಸಿಗೆಯಲ್ಲಿದ್ದೀರಿ, ಹೊರಗೆ ಜೀವನದಲ್ಲಿ ಏನಾಗುತ್ತಿದೆ ಎಂದು ನಿಮಗೆ ತಿಳಿದಿಲ್ಲ, ನಿಮ್ಮ ಜೀವನದ ಅತ್ಯಂತ ಕೆಟ್ಟ ಹಂತಗಳಲ್ಲಿ ಒಂದನ್ನು ನೀವು ಎದುರಿಸುತ್ತಿರುವಿರಿ. ಆ ಸ್ಥಳದಲ್ಲಿ, ನೀವು ನನ್ನೊಂದಿಗೆ ನಿಂತಿರುವ ಎಲ್ಲರಿಗೂ ತೋರಿಸಲು, ನನಗೆ ಹೇಳದೆ ಫೋಟೋ ಕ್ಲಿಕ್ ಮಾಡಿ ನಂತರ ನೀವು ನನ್ನೊಂದಿಗೆ ನಿಂತಿದ್ದೀರಿ ಎಂದು ಜಗತ್ತಿಗೆ ತೋರಿಸಲು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೀರಿ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ; ವಿನೇಶಾ 2028ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ: ಮಹಾವೀರ್ ಫೋಗಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...