Homeಮುಖಪುಟನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

ನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

- Advertisement -
- Advertisement -

ನಾನು ಎಲ್ಲಿಯೂ ‘ಬಾಂಬೆ ಬಾಯ್ಸ್’ ಎಂಬ ಪದ ಬಳಸಿಲ್ಲ. ಆದರೂ ತಪ್ಪಾಗಿ ಉಲ್ಲೇಖ ಮಾಡಿ ಪ್ರಸಾರ ಮಾಡಲಾಗಿದೆ ಎಂದು ‘ಸುವರ್ಣ ಚಾನೆಲ್’ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ’ ಎಂದು ಹೇಳಿದ್ದೆ. ಆದರೆ ‘ಸುವರ್ಣ ಚಾನೆಲ್’ನಲ್ಲಿ ‘ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಗರಂ’ ಎಂಬ ಸುದ್ದಿ ಪ್ರಸಾರವಾಗುವುದು ಗಮನಿಸಿದೆ. ಟಿವಿಗಳಲ್ಲಿ ಏನು ಬೇಕಾದರೂ ಬರೆಯಬಹುದು ಎಂಬುದು ನೋಡಿ ನನಗೆ ಆಶ್ವರ್ಯವಾಯಿತು. ನಾನು ಅಲ್ಲಿ ಬಾಂಬೆ ಬಾಯ್ಸ್ ಅಂತ ಪ್ರಸ್ತಾಪ ಮಾಡಿದ್ದನ್ನು ತೋರಿಸಲಿ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆ ಬಳಿಕ ಸಂಬಂಧಪಟ್ಟ ಹುಬ್ಬಳ್ಳಿಯ ವರದಿಗಾರನಿಗೆ ಕರೆ ಮಾಡಿ ಕೇಳಿದಾಗ, ನಾನು ಆ ಥರ ಕಳಿಸಿಲ್ಲ. ಮುಖ್ಯ ಕಚೇರಿಯಿಂದ ಹಾಗೆ ವರದಿ ಮಾಡುತ್ತಿದ್ದಾರೆ ಎಂದುತ್ತರಿಸಿದರು. ಆ ಬಳಿಕ ಸುವರ್ಣ ಚಾನೆಲ್‌ನ ಉನ್ನತ ಹುದ್ದೆಯಲ್ಲಿರುವವರಿಗೆ ತಿಳಿಸಿದಾಗ, ಬದಲಾವಣೆ ಮಾಡಿದ್ದೇವೆ ಎಂದು ಹೇಳಿದರು. ಅವರು ಬದಲಾವಣೆ ಮಾಡುವ ವೇಳೆಗೆ ಇಡೀ ರಾಜ್ಯದ ಜನ ನೋಡಿಯಾಗಿತ್ತು. ಅಲ್ಲದೇ, ‘ಬಾಂಬೆ ಬಾಯ್ಸ್’ ಸುದ್ದಿಯಿಂದ ಬಿಜೆಪಿಗೆ ಬಂದಂತಹಾ 17 ಜನ ಶಾಸಕರಿಗೂ ಕೂಡ ನೋವಾಗಿದೆ. ನನಗೂ ನೋವಾಯಿತು. ಅವರು ನಮಗೆ ಸಹಕಾರ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಕೂಡ ಬಂತು. ನಾನೂ ಕೂಡ ಮಂತ್ರಿಯಾದೆ. ಆದರೆ, ಅವರ ಬಗ್ಗೆ ಆಪಾದನೆ ಮಾಡಿ ಸುದ್ದಿ ಹರಡಿರುವುದು ನೋವಾಗಿದೆ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

ಈ ಸಂಬಂಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಪೋನ್ ಮಾಡಿ ತಿಳಿಸಿದೆ. ಬಳಿಕ ಪಕ್ಷದ ಕಾರ್ಯಕರ್ತರ ಸಭೆಗೆ ಹೋದಾಗ, ಅಲ್ಲಿ ಸುವರ್ಣ ಚಾನೆಲ್‌ನ ವರದಿಗಾರರಿದ್ದರು. ಅವರಲ್ಲಿ ನನ್ನ ಸ್ಪಷ್ಟೀಕರಣ ಹಾಕುವಂತೆ ವಿನಂತಿಸಿದೆ. ಆದರೆ ಅವರು ವಿಡಿಯೋ ಮಾಡಲಿಲ್ಲ. ನಾನು ಅಲ್ಲಿ ‘ಬಾಂಬೆ ಬಾಯ್ಸ್‌’ ಎಂದು ಪ್ರಸ್ತಾಪವೇ ಮಾಡಿಲ್ಲ. ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ ಎಂದಷ್ಟೇ ಹೇಳಿದ್ದೆ. ಆದ್ದರಿಂದ ಇಂತಹ ಸುದ್ದಿಗಳು ಪ್ರಸಾರ ಮಾಡುವುದರಿಂದ ನಮ್ಮೊಳಗಡೆ ಗೊಂದಲ ಉಂಟಾಗುತ್ತದೆ. ಆದ್ದರಿಂದ ಹೇಳದೇ ಇರುವ ಹೇಳಿಕೆಗಳನ್ನು ಪ್ರಸಾರ ಮಾಡಬೇಡಿ’ ಎಂದು ‘ಸುವರ್ಣ ಚಾನೆಲ್‌’ನ ಹೆಸರೇಳಿ ಮನವಿ ಮಾಡಿದರು.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...