Homeಮುಖಪುಟನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

ನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

- Advertisement -
- Advertisement -

ನಾನು ಎಲ್ಲಿಯೂ ‘ಬಾಂಬೆ ಬಾಯ್ಸ್’ ಎಂಬ ಪದ ಬಳಸಿಲ್ಲ. ಆದರೂ ತಪ್ಪಾಗಿ ಉಲ್ಲೇಖ ಮಾಡಿ ಪ್ರಸಾರ ಮಾಡಲಾಗಿದೆ ಎಂದು ‘ಸುವರ್ಣ ಚಾನೆಲ್’ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ’ ಎಂದು ಹೇಳಿದ್ದೆ. ಆದರೆ ‘ಸುವರ್ಣ ಚಾನೆಲ್’ನಲ್ಲಿ ‘ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಗರಂ’ ಎಂಬ ಸುದ್ದಿ ಪ್ರಸಾರವಾಗುವುದು ಗಮನಿಸಿದೆ. ಟಿವಿಗಳಲ್ಲಿ ಏನು ಬೇಕಾದರೂ ಬರೆಯಬಹುದು ಎಂಬುದು ನೋಡಿ ನನಗೆ ಆಶ್ವರ್ಯವಾಯಿತು. ನಾನು ಅಲ್ಲಿ ಬಾಂಬೆ ಬಾಯ್ಸ್ ಅಂತ ಪ್ರಸ್ತಾಪ ಮಾಡಿದ್ದನ್ನು ತೋರಿಸಲಿ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆ ಬಳಿಕ ಸಂಬಂಧಪಟ್ಟ ಹುಬ್ಬಳ್ಳಿಯ ವರದಿಗಾರನಿಗೆ ಕರೆ ಮಾಡಿ ಕೇಳಿದಾಗ, ನಾನು ಆ ಥರ ಕಳಿಸಿಲ್ಲ. ಮುಖ್ಯ ಕಚೇರಿಯಿಂದ ಹಾಗೆ ವರದಿ ಮಾಡುತ್ತಿದ್ದಾರೆ ಎಂದುತ್ತರಿಸಿದರು. ಆ ಬಳಿಕ ಸುವರ್ಣ ಚಾನೆಲ್‌ನ ಉನ್ನತ ಹುದ್ದೆಯಲ್ಲಿರುವವರಿಗೆ ತಿಳಿಸಿದಾಗ, ಬದಲಾವಣೆ ಮಾಡಿದ್ದೇವೆ ಎಂದು ಹೇಳಿದರು. ಅವರು ಬದಲಾವಣೆ ಮಾಡುವ ವೇಳೆಗೆ ಇಡೀ ರಾಜ್ಯದ ಜನ ನೋಡಿಯಾಗಿತ್ತು. ಅಲ್ಲದೇ, ‘ಬಾಂಬೆ ಬಾಯ್ಸ್’ ಸುದ್ದಿಯಿಂದ ಬಿಜೆಪಿಗೆ ಬಂದಂತಹಾ 17 ಜನ ಶಾಸಕರಿಗೂ ಕೂಡ ನೋವಾಗಿದೆ. ನನಗೂ ನೋವಾಯಿತು. ಅವರು ನಮಗೆ ಸಹಕಾರ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಕೂಡ ಬಂತು. ನಾನೂ ಕೂಡ ಮಂತ್ರಿಯಾದೆ. ಆದರೆ, ಅವರ ಬಗ್ಗೆ ಆಪಾದನೆ ಮಾಡಿ ಸುದ್ದಿ ಹರಡಿರುವುದು ನೋವಾಗಿದೆ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

ಈ ಸಂಬಂಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಪೋನ್ ಮಾಡಿ ತಿಳಿಸಿದೆ. ಬಳಿಕ ಪಕ್ಷದ ಕಾರ್ಯಕರ್ತರ ಸಭೆಗೆ ಹೋದಾಗ, ಅಲ್ಲಿ ಸುವರ್ಣ ಚಾನೆಲ್‌ನ ವರದಿಗಾರರಿದ್ದರು. ಅವರಲ್ಲಿ ನನ್ನ ಸ್ಪಷ್ಟೀಕರಣ ಹಾಕುವಂತೆ ವಿನಂತಿಸಿದೆ. ಆದರೆ ಅವರು ವಿಡಿಯೋ ಮಾಡಲಿಲ್ಲ. ನಾನು ಅಲ್ಲಿ ‘ಬಾಂಬೆ ಬಾಯ್ಸ್‌’ ಎಂದು ಪ್ರಸ್ತಾಪವೇ ಮಾಡಿಲ್ಲ. ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ ಎಂದಷ್ಟೇ ಹೇಳಿದ್ದೆ. ಆದ್ದರಿಂದ ಇಂತಹ ಸುದ್ದಿಗಳು ಪ್ರಸಾರ ಮಾಡುವುದರಿಂದ ನಮ್ಮೊಳಗಡೆ ಗೊಂದಲ ಉಂಟಾಗುತ್ತದೆ. ಆದ್ದರಿಂದ ಹೇಳದೇ ಇರುವ ಹೇಳಿಕೆಗಳನ್ನು ಪ್ರಸಾರ ಮಾಡಬೇಡಿ’ ಎಂದು ‘ಸುವರ್ಣ ಚಾನೆಲ್‌’ನ ಹೆಸರೇಳಿ ಮನವಿ ಮಾಡಿದರು.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...