Homeಮುಖಪುಟನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

ನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

- Advertisement -
- Advertisement -

ನಾನು ಎಲ್ಲಿಯೂ ‘ಬಾಂಬೆ ಬಾಯ್ಸ್’ ಎಂಬ ಪದ ಬಳಸಿಲ್ಲ. ಆದರೂ ತಪ್ಪಾಗಿ ಉಲ್ಲೇಖ ಮಾಡಿ ಪ್ರಸಾರ ಮಾಡಲಾಗಿದೆ ಎಂದು ‘ಸುವರ್ಣ ಚಾನೆಲ್’ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ’ ಎಂದು ಹೇಳಿದ್ದೆ. ಆದರೆ ‘ಸುವರ್ಣ ಚಾನೆಲ್’ನಲ್ಲಿ ‘ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಗರಂ’ ಎಂಬ ಸುದ್ದಿ ಪ್ರಸಾರವಾಗುವುದು ಗಮನಿಸಿದೆ. ಟಿವಿಗಳಲ್ಲಿ ಏನು ಬೇಕಾದರೂ ಬರೆಯಬಹುದು ಎಂಬುದು ನೋಡಿ ನನಗೆ ಆಶ್ವರ್ಯವಾಯಿತು. ನಾನು ಅಲ್ಲಿ ಬಾಂಬೆ ಬಾಯ್ಸ್ ಅಂತ ಪ್ರಸ್ತಾಪ ಮಾಡಿದ್ದನ್ನು ತೋರಿಸಲಿ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆ ಬಳಿಕ ಸಂಬಂಧಪಟ್ಟ ಹುಬ್ಬಳ್ಳಿಯ ವರದಿಗಾರನಿಗೆ ಕರೆ ಮಾಡಿ ಕೇಳಿದಾಗ, ನಾನು ಆ ಥರ ಕಳಿಸಿಲ್ಲ. ಮುಖ್ಯ ಕಚೇರಿಯಿಂದ ಹಾಗೆ ವರದಿ ಮಾಡುತ್ತಿದ್ದಾರೆ ಎಂದುತ್ತರಿಸಿದರು. ಆ ಬಳಿಕ ಸುವರ್ಣ ಚಾನೆಲ್‌ನ ಉನ್ನತ ಹುದ್ದೆಯಲ್ಲಿರುವವರಿಗೆ ತಿಳಿಸಿದಾಗ, ಬದಲಾವಣೆ ಮಾಡಿದ್ದೇವೆ ಎಂದು ಹೇಳಿದರು. ಅವರು ಬದಲಾವಣೆ ಮಾಡುವ ವೇಳೆಗೆ ಇಡೀ ರಾಜ್ಯದ ಜನ ನೋಡಿಯಾಗಿತ್ತು. ಅಲ್ಲದೇ, ‘ಬಾಂಬೆ ಬಾಯ್ಸ್’ ಸುದ್ದಿಯಿಂದ ಬಿಜೆಪಿಗೆ ಬಂದಂತಹಾ 17 ಜನ ಶಾಸಕರಿಗೂ ಕೂಡ ನೋವಾಗಿದೆ. ನನಗೂ ನೋವಾಯಿತು. ಅವರು ನಮಗೆ ಸಹಕಾರ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಕೂಡ ಬಂತು. ನಾನೂ ಕೂಡ ಮಂತ್ರಿಯಾದೆ. ಆದರೆ, ಅವರ ಬಗ್ಗೆ ಆಪಾದನೆ ಮಾಡಿ ಸುದ್ದಿ ಹರಡಿರುವುದು ನೋವಾಗಿದೆ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

ಈ ಸಂಬಂಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಪೋನ್ ಮಾಡಿ ತಿಳಿಸಿದೆ. ಬಳಿಕ ಪಕ್ಷದ ಕಾರ್ಯಕರ್ತರ ಸಭೆಗೆ ಹೋದಾಗ, ಅಲ್ಲಿ ಸುವರ್ಣ ಚಾನೆಲ್‌ನ ವರದಿಗಾರರಿದ್ದರು. ಅವರಲ್ಲಿ ನನ್ನ ಸ್ಪಷ್ಟೀಕರಣ ಹಾಕುವಂತೆ ವಿನಂತಿಸಿದೆ. ಆದರೆ ಅವರು ವಿಡಿಯೋ ಮಾಡಲಿಲ್ಲ. ನಾನು ಅಲ್ಲಿ ‘ಬಾಂಬೆ ಬಾಯ್ಸ್‌’ ಎಂದು ಪ್ರಸ್ತಾಪವೇ ಮಾಡಿಲ್ಲ. ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ ಎಂದಷ್ಟೇ ಹೇಳಿದ್ದೆ. ಆದ್ದರಿಂದ ಇಂತಹ ಸುದ್ದಿಗಳು ಪ್ರಸಾರ ಮಾಡುವುದರಿಂದ ನಮ್ಮೊಳಗಡೆ ಗೊಂದಲ ಉಂಟಾಗುತ್ತದೆ. ಆದ್ದರಿಂದ ಹೇಳದೇ ಇರುವ ಹೇಳಿಕೆಗಳನ್ನು ಪ್ರಸಾರ ಮಾಡಬೇಡಿ’ ಎಂದು ‘ಸುವರ್ಣ ಚಾನೆಲ್‌’ನ ಹೆಸರೇಳಿ ಮನವಿ ಮಾಡಿದರು.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...