Homeಕರ್ನಾಟಕಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

ಟಿಪ್ಪು v/s ಸಾವರ್ಕರ್‌ ಎಂಬುದಕ್ಕೆ ನನ್ನ ಒಪ್ಪಿಗೆ ಇಲ್ಲ: ಯಡಿಯೂರಪ್ಪ

- Advertisement -
- Advertisement -

“ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಚುನಾವಣಾ ರಾಜಕೀಯವನ್ನು ತೊರೆವುದಾಗಿ ತೆಗೆದುಕೊಂಡಿರುವ ನಿರ್ಧಾರದಿಂದ ನಾನು ಹಿಂದೆ ಸರಿಯುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದು, “ಇದು ನನ್ನ ನಿರ್ಧಾರವಾಗಿದ್ದು, ಯಾರ ಒತ್ತಾಯವೂ ಇಲ್ಲ” ಎಂದಿದ್ದಾರೆ.

ಎನ್‌ಡಿಟಿವಿ ಜೊತೆಯಲ್ಲಿ ಮಾತನಾಡಿರುವ ಅವರು, “ನಾನು ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ನಾನು ದಣಿದಿಲ್ಲ, ನಾನು ಪ್ರಚಾರ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ, ನಾನು ರಾಜ್ಯ ಪ್ರವಾಸ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

“ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತದೆ, ಚುನಾವಣಾ ರಾಜಕೀಯ ತ್ಯಜಿಸುವುದು ನನ್ನ ನಿರ್ಧಾರವಾಗಿತ್ತು. ಯಾರೂ ನನ್ನನ್ನು ಬಲವಂತಪಡಿಸಲಿಲ್ಲ. ನಾನು ಈ ನಿರ್ಧಾರವನ್ನು ಏಕೆ ತೆಗೆದುಕೊಂಡೆ ಎಂಬುದನ್ನು ನಾನು ಜನರಿಗೆ ಮನವರಿಕೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

“ಬಸವರಾಜ ಬೊಮ್ಮಾಯಿಯವರಿಗೆ ಅಧಿಕಾರವನ್ನು ನೀಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಚುನಾವಣಾ ರಾಜಕೀಯದಲ್ಲಿ ನನ್ನ ಅನುಪಸ್ಥಿತಿಯು ಒಂದು ಸವಾಲು. ಬಿಜೆಪಿ ಈ ಸವಾಲುಗಳನ್ನು ಎದುರಿಸಬೇಕಾಗಿದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ” ಎಂದು ಪುನರುಚ್ಚರಿಸಿದ್ದಾರೆ.

ಟಿಪ್ಪು ವರ್ಸಸ್‌ ಸಾವರ್ಕರ್‌ ನಡುವಿನ ಚುನಾವಣೆ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿಕೆ ನೀಡಿರುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಎಸ್‌ವೈ, “ಇದಕ್ಕೆ ನನ್ನ ಒಪ್ಪಿಗೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಟಿಪ್ಪು ವರ್ಸಸ್ ಸಾವರ್ಕರ್ ಎಂಬ ನಿರೂಪಣೆಗೆ ನನ್ನ ಒಪ್ಪಿಗೆ ಇಲ್ಲ. ಇದು ಟಿಪ್ಪು ವರ್ಸಸ್ ಸಾವರ್ಕರ್ ಎಂದಾಗಬಾರದು. ಬಿಜೆಪಿಯ ನೀತಿಗಳು ಮತ್ತು ಯೋಜನೆಗಳು ನಿರೂಪಣೆಗಳನ್ನು ಕಟ್ಟಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭ್ರಷ್ಟ ನಾಯಕರು, ಬಿಜೆಪಿ ವಿರುದ್ಧ ಅವರು ಮಾಡುವ ಭ್ರಷ್ಟಾಚಾರದ ಆರೋಪಗಳಿಗೆ ಅರ್ಥವಿಲ್ಲ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವುದಾಗಿ ಕರ್ನಾಟಕ ವಿಧಾನಸಭೆಯಲ್ಲಿ ‘ವಿದಾಯ ಭಾಷಣ’ ಮಾಡಿದ್ದ ಅವರು, “ಪಕ್ಷವನ್ನು ಕಟ್ಟಲು ಮತ್ತು ತನ್ನ ಕೊನೆಯ ಉಸಿರು ಇರುವವರೆಗೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ” ಎಂದಿದ್ದರು.

ಇದನ್ನೂ ಓದಿರಿ: 7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

ದಕ್ಷಿಣ ಭಾರತದ ಏಕೈಕ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಶ್ರಮಿಸಿರುವ ಬಿಎಸ್‌ವೈ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ‘ಪುರಸಭಾ’ ಅಧ್ಯಕ್ಷರಾಗಿ ಚುನಾವಣಾ ರಾಜಕೀಯ ಆರಂಭಿಸಿದ ಅವರು, 1983 ರಲ್ಲಿ ಶಿಕಾರಿಪುರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. ಮುಂದಿನ ಚುನಾವಣೆಗಳಲ್ಲಿ ಅಲ್ಲಿಂದ ಎಂಟು ಬಾರಿ ಆಯ್ಕೆಯಾಗಿದ್ದಾರೆ.

ಯಡಿಯೂರಪ್ಪ ಅವರು ಜುಲೈ 26, 2021 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಟ್ಟರು.

ವಿಧಾನಸಭಾ ಚುನಾವಣೆಗೆ ಮುನ್ನ ಹೊಸ ನಾಯಕತ್ವಕ್ಕೆ ದಾರಿ ಮಾಡಿಕೊಡಲು ಬಿಜೆಪಿಯ ಉನ್ನತ ನಾಯಕರು ಇಟ್ಟಿರುವ ಹೆಜ್ಜೆಯಾಗಿಯೂ ಈ ಬೆಳವಣಿಗೆಯನ್ನು ನೋಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...