Homeಚಳವಳಿಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

- Advertisement -
- Advertisement -

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್ “ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ” ಎಂದು ಘೊಷಿಸಿದ್ದಾರೆ.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದಾರೆ.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಭೂಷಣ್ ಹೇಳಿದ್ದಾರೆ.

“ಸಾಂವಿಧಾನಿಕ ಕ್ರಮವನ್ನು ಕಾಪಾಡಲು ಯಾವುದೇ ಪ್ರಜಾಪ್ರಭುತ್ವದಲ್ಲಿ ಮುಕ್ತ ಟೀಕೆ ಅಗತ್ಯ ಎಂದು ನಾನು ನಂಬುತ್ತೇನೆ. ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇಂದು ಪ್ರಶಾಂತ್ ಭೂಷಣ್‌ ಪರ ಹಿರಿಯ ವಕೀಲ ರಾಜೀವ್ ಧವನ್‌ ವಾದ ಮಂಡನೆ ಮಾಡಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸಮಯಾವಕಾಶವಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು.

“ನೀವು ಮರುಪರಿಶೀಲನಾ ಅರ್ಜಿಯನ್ನು ಆಗಸ್ಟ್‌ 17ರಂದೇ ಸಲ್ಲಿಸಲಾಗುವುದು ಎಂದು ಹೇಳಿದ್ದಿರಿ. ಸಲ್ಲಿಸಿಲ್ಲವೇ, ಇಷ್ಟರಲ್ಲಾಗಲೇ ಸಲ್ಲಿಸಬೇಕಿತ್ತು” ಎಂಬ ನ್ಯಾಯಮೂರ್ತಿ ಗವಾಯಿಯವರ ಪ್ರಶ್ನೆಗೆ ಭೂಷಣ್ ಪರ ಮತ್ತೊಬ್ಬ ವಕೀಲ ದುಷ್ಯಂತ್ ದವೆ ಉತ್ತರಿಸಿ, “ಅಂದೇ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿರಲಿಲ್ಲ. ಶಾಸನಾತ್ಮಕವಾಗಿ 30 ದಿನಗಳ ಅವಕಾಶವಿದೆ ಎಂದಷ್ಟೆ ಹೇಳಿದ್ದೆವು” ಎಂದಿದ್ದಾರೆ.

ಇದಕ್ಕೆ “ಪೀಠದಲ್ಲಿರುವ ಒಬ್ಬರು ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಅರ್ಜಿ ಸಲ್ಲಿಸುತ್ತಿರೋ” ಎಂದು ಗವಾಯಿ ಕೇಳಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು 30 ದಿನದ ಒಳಗೆ ಸಲ್ಲಿಸಬಹುದಾಗಿದೆ. “ನ್ಯಾ.ಮಿಶ್ರಾ ಅವರು ನಿವೃತ್ತಿಯಾಗುವವರೆಗೆ ಅರ್ಜಿ ಸಲ್ಲಿಕೆಯಾಗುವುದಿಲ್ಲ” ಎನ್ನುವ ಅಭಿಪ್ರಾಯ ಹೊಂದುವುದು ಬೇಡ ಎಂದು ದವೆ ಉತ್ತರಿಸಿದ್ದಾರೆ.

ನ್ಯಾ.ಮಿಶ್ರಾರವರು “ವಿಚಾರಣೆಯನ್ನು ಮುಂದೂಡಲು ನಾವು ಸಮ್ಮತಿಸುವುದಿಲ್ಲ” ಎಂದಾಗ “ನಾವು ಮುಂದೂಡಿಕೆ ಅರ್ಜಿ ಸಲ್ಲಿಸಿದ್ದೆವು. ನೀವು ತಿರಸ್ಕರಿಸಬಹುದು. ನಾನು ನಿಮ್ಮ ನಿರ್ಧಾರಕ್ಕೆ ತಲೆಬಾಗುತ್ತೇನೆ. ಕಾನೂನನ್ನು ಮಾತ್ರವೇ ನಾನು ಹೇಳಬಹುದು” ಎಂದು ದವೆ ತಿಳಿಸಿದ್ದಾರೆ.

“ನ್ಯಾಯಾಂಗ ಪರಿಶೀಲನೆಯಲ್ಲಿ ಮೇಲ್ಮನವಿ ಸರಿಯಾಗಿದೆ ಮತ್ತು ಶಿಕ್ಷೆ ಘೋಷಿಸುವುದನ್ನು ಮುಂದೂಡಬಹುದು. ಶಿಕ್ಷೆ ಮುಂದೂಡಲ್ಪಟ್ಟರೆ ಸ್ವರ್ಗವೇನು ಬಿದ್ದೋಗುವುದಿಲ್ಲ” ಎಂದು ದವೆ ಹೇಳಿದ್ದಾರೆ.

ಕೊನೆಗೆ ನ್ಯಾಯಮೂರ್ತಿಗಳು “ವಿಚಾರಣೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮರುಪರಿಶೀಲನೆ ಕೋರುವ ನಿಮ್ಮ ಹಕ್ಕನ್ನು ಮನ್ನಿಸೋ‍ಣ. ಶಿಕ್ಷೆ ಬೇಕಾದರೆ ಆ ನಂತರವೇ ಜಾರಿಯಾಗಲಿ” ಎಂದಿದ್ದಾರೆ. ಶಿಕ್ಷೆ ಘೋಷಿಸುವ ವಾದ-ವಿವಾದ ಮುಂದುವರೆಯುತ್ತಿದೆ.


ಇದನ್ನೂ ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....