Homeಚಳವಳಿಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

- Advertisement -
- Advertisement -

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್ “ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ” ಎಂದು ಘೊಷಿಸಿದ್ದಾರೆ.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದಾರೆ.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಭೂಷಣ್ ಹೇಳಿದ್ದಾರೆ.

“ಸಾಂವಿಧಾನಿಕ ಕ್ರಮವನ್ನು ಕಾಪಾಡಲು ಯಾವುದೇ ಪ್ರಜಾಪ್ರಭುತ್ವದಲ್ಲಿ ಮುಕ್ತ ಟೀಕೆ ಅಗತ್ಯ ಎಂದು ನಾನು ನಂಬುತ್ತೇನೆ. ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇಂದು ಪ್ರಶಾಂತ್ ಭೂಷಣ್‌ ಪರ ಹಿರಿಯ ವಕೀಲ ರಾಜೀವ್ ಧವನ್‌ ವಾದ ಮಂಡನೆ ಮಾಡಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸಮಯಾವಕಾಶವಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು.

“ನೀವು ಮರುಪರಿಶೀಲನಾ ಅರ್ಜಿಯನ್ನು ಆಗಸ್ಟ್‌ 17ರಂದೇ ಸಲ್ಲಿಸಲಾಗುವುದು ಎಂದು ಹೇಳಿದ್ದಿರಿ. ಸಲ್ಲಿಸಿಲ್ಲವೇ, ಇಷ್ಟರಲ್ಲಾಗಲೇ ಸಲ್ಲಿಸಬೇಕಿತ್ತು” ಎಂಬ ನ್ಯಾಯಮೂರ್ತಿ ಗವಾಯಿಯವರ ಪ್ರಶ್ನೆಗೆ ಭೂಷಣ್ ಪರ ಮತ್ತೊಬ್ಬ ವಕೀಲ ದುಷ್ಯಂತ್ ದವೆ ಉತ್ತರಿಸಿ, “ಅಂದೇ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿರಲಿಲ್ಲ. ಶಾಸನಾತ್ಮಕವಾಗಿ 30 ದಿನಗಳ ಅವಕಾಶವಿದೆ ಎಂದಷ್ಟೆ ಹೇಳಿದ್ದೆವು” ಎಂದಿದ್ದಾರೆ.

ಇದಕ್ಕೆ “ಪೀಠದಲ್ಲಿರುವ ಒಬ್ಬರು ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಅರ್ಜಿ ಸಲ್ಲಿಸುತ್ತಿರೋ” ಎಂದು ಗವಾಯಿ ಕೇಳಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು 30 ದಿನದ ಒಳಗೆ ಸಲ್ಲಿಸಬಹುದಾಗಿದೆ. “ನ್ಯಾ.ಮಿಶ್ರಾ ಅವರು ನಿವೃತ್ತಿಯಾಗುವವರೆಗೆ ಅರ್ಜಿ ಸಲ್ಲಿಕೆಯಾಗುವುದಿಲ್ಲ” ಎನ್ನುವ ಅಭಿಪ್ರಾಯ ಹೊಂದುವುದು ಬೇಡ ಎಂದು ದವೆ ಉತ್ತರಿಸಿದ್ದಾರೆ.

ನ್ಯಾ.ಮಿಶ್ರಾರವರು “ವಿಚಾರಣೆಯನ್ನು ಮುಂದೂಡಲು ನಾವು ಸಮ್ಮತಿಸುವುದಿಲ್ಲ” ಎಂದಾಗ “ನಾವು ಮುಂದೂಡಿಕೆ ಅರ್ಜಿ ಸಲ್ಲಿಸಿದ್ದೆವು. ನೀವು ತಿರಸ್ಕರಿಸಬಹುದು. ನಾನು ನಿಮ್ಮ ನಿರ್ಧಾರಕ್ಕೆ ತಲೆಬಾಗುತ್ತೇನೆ. ಕಾನೂನನ್ನು ಮಾತ್ರವೇ ನಾನು ಹೇಳಬಹುದು” ಎಂದು ದವೆ ತಿಳಿಸಿದ್ದಾರೆ.

“ನ್ಯಾಯಾಂಗ ಪರಿಶೀಲನೆಯಲ್ಲಿ ಮೇಲ್ಮನವಿ ಸರಿಯಾಗಿದೆ ಮತ್ತು ಶಿಕ್ಷೆ ಘೋಷಿಸುವುದನ್ನು ಮುಂದೂಡಬಹುದು. ಶಿಕ್ಷೆ ಮುಂದೂಡಲ್ಪಟ್ಟರೆ ಸ್ವರ್ಗವೇನು ಬಿದ್ದೋಗುವುದಿಲ್ಲ” ಎಂದು ದವೆ ಹೇಳಿದ್ದಾರೆ.

ಕೊನೆಗೆ ನ್ಯಾಯಮೂರ್ತಿಗಳು “ವಿಚಾರಣೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮರುಪರಿಶೀಲನೆ ಕೋರುವ ನಿಮ್ಮ ಹಕ್ಕನ್ನು ಮನ್ನಿಸೋ‍ಣ. ಶಿಕ್ಷೆ ಬೇಕಾದರೆ ಆ ನಂತರವೇ ಜಾರಿಯಾಗಲಿ” ಎಂದಿದ್ದಾರೆ. ಶಿಕ್ಷೆ ಘೋಷಿಸುವ ವಾದ-ವಿವಾದ ಮುಂದುವರೆಯುತ್ತಿದೆ.


ಇದನ್ನೂ ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...