Homeಚಳವಳಿಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

- Advertisement -
- Advertisement -

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್ “ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ” ಎಂದು ಘೊಷಿಸಿದ್ದಾರೆ.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದಾರೆ.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಭೂಷಣ್ ಹೇಳಿದ್ದಾರೆ.

“ಸಾಂವಿಧಾನಿಕ ಕ್ರಮವನ್ನು ಕಾಪಾಡಲು ಯಾವುದೇ ಪ್ರಜಾಪ್ರಭುತ್ವದಲ್ಲಿ ಮುಕ್ತ ಟೀಕೆ ಅಗತ್ಯ ಎಂದು ನಾನು ನಂಬುತ್ತೇನೆ. ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇಂದು ಪ್ರಶಾಂತ್ ಭೂಷಣ್‌ ಪರ ಹಿರಿಯ ವಕೀಲ ರಾಜೀವ್ ಧವನ್‌ ವಾದ ಮಂಡನೆ ಮಾಡಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸಮಯಾವಕಾಶವಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು.

“ನೀವು ಮರುಪರಿಶೀಲನಾ ಅರ್ಜಿಯನ್ನು ಆಗಸ್ಟ್‌ 17ರಂದೇ ಸಲ್ಲಿಸಲಾಗುವುದು ಎಂದು ಹೇಳಿದ್ದಿರಿ. ಸಲ್ಲಿಸಿಲ್ಲವೇ, ಇಷ್ಟರಲ್ಲಾಗಲೇ ಸಲ್ಲಿಸಬೇಕಿತ್ತು” ಎಂಬ ನ್ಯಾಯಮೂರ್ತಿ ಗವಾಯಿಯವರ ಪ್ರಶ್ನೆಗೆ ಭೂಷಣ್ ಪರ ಮತ್ತೊಬ್ಬ ವಕೀಲ ದುಷ್ಯಂತ್ ದವೆ ಉತ್ತರಿಸಿ, “ಅಂದೇ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿರಲಿಲ್ಲ. ಶಾಸನಾತ್ಮಕವಾಗಿ 30 ದಿನಗಳ ಅವಕಾಶವಿದೆ ಎಂದಷ್ಟೆ ಹೇಳಿದ್ದೆವು” ಎಂದಿದ್ದಾರೆ.

ಇದಕ್ಕೆ “ಪೀಠದಲ್ಲಿರುವ ಒಬ್ಬರು ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಅರ್ಜಿ ಸಲ್ಲಿಸುತ್ತಿರೋ” ಎಂದು ಗವಾಯಿ ಕೇಳಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು 30 ದಿನದ ಒಳಗೆ ಸಲ್ಲಿಸಬಹುದಾಗಿದೆ. “ನ್ಯಾ.ಮಿಶ್ರಾ ಅವರು ನಿವೃತ್ತಿಯಾಗುವವರೆಗೆ ಅರ್ಜಿ ಸಲ್ಲಿಕೆಯಾಗುವುದಿಲ್ಲ” ಎನ್ನುವ ಅಭಿಪ್ರಾಯ ಹೊಂದುವುದು ಬೇಡ ಎಂದು ದವೆ ಉತ್ತರಿಸಿದ್ದಾರೆ.

ನ್ಯಾ.ಮಿಶ್ರಾರವರು “ವಿಚಾರಣೆಯನ್ನು ಮುಂದೂಡಲು ನಾವು ಸಮ್ಮತಿಸುವುದಿಲ್ಲ” ಎಂದಾಗ “ನಾವು ಮುಂದೂಡಿಕೆ ಅರ್ಜಿ ಸಲ್ಲಿಸಿದ್ದೆವು. ನೀವು ತಿರಸ್ಕರಿಸಬಹುದು. ನಾನು ನಿಮ್ಮ ನಿರ್ಧಾರಕ್ಕೆ ತಲೆಬಾಗುತ್ತೇನೆ. ಕಾನೂನನ್ನು ಮಾತ್ರವೇ ನಾನು ಹೇಳಬಹುದು” ಎಂದು ದವೆ ತಿಳಿಸಿದ್ದಾರೆ.

“ನ್ಯಾಯಾಂಗ ಪರಿಶೀಲನೆಯಲ್ಲಿ ಮೇಲ್ಮನವಿ ಸರಿಯಾಗಿದೆ ಮತ್ತು ಶಿಕ್ಷೆ ಘೋಷಿಸುವುದನ್ನು ಮುಂದೂಡಬಹುದು. ಶಿಕ್ಷೆ ಮುಂದೂಡಲ್ಪಟ್ಟರೆ ಸ್ವರ್ಗವೇನು ಬಿದ್ದೋಗುವುದಿಲ್ಲ” ಎಂದು ದವೆ ಹೇಳಿದ್ದಾರೆ.

ಕೊನೆಗೆ ನ್ಯಾಯಮೂರ್ತಿಗಳು “ವಿಚಾರಣೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮರುಪರಿಶೀಲನೆ ಕೋರುವ ನಿಮ್ಮ ಹಕ್ಕನ್ನು ಮನ್ನಿಸೋ‍ಣ. ಶಿಕ್ಷೆ ಬೇಕಾದರೆ ಆ ನಂತರವೇ ಜಾರಿಯಾಗಲಿ” ಎಂದಿದ್ದಾರೆ. ಶಿಕ್ಷೆ ಘೋಷಿಸುವ ವಾದ-ವಿವಾದ ಮುಂದುವರೆಯುತ್ತಿದೆ.


ಇದನ್ನೂ ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....