Homeಚಳವಳಿಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

- Advertisement -
- Advertisement -

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್ “ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ” ಎಂದು ಘೊಷಿಸಿದ್ದಾರೆ.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದಾರೆ.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಭೂಷಣ್ ಹೇಳಿದ್ದಾರೆ.

“ಸಾಂವಿಧಾನಿಕ ಕ್ರಮವನ್ನು ಕಾಪಾಡಲು ಯಾವುದೇ ಪ್ರಜಾಪ್ರಭುತ್ವದಲ್ಲಿ ಮುಕ್ತ ಟೀಕೆ ಅಗತ್ಯ ಎಂದು ನಾನು ನಂಬುತ್ತೇನೆ. ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇಂದು ಪ್ರಶಾಂತ್ ಭೂಷಣ್‌ ಪರ ಹಿರಿಯ ವಕೀಲ ರಾಜೀವ್ ಧವನ್‌ ವಾದ ಮಂಡನೆ ಮಾಡಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸಮಯಾವಕಾಶವಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು.

“ನೀವು ಮರುಪರಿಶೀಲನಾ ಅರ್ಜಿಯನ್ನು ಆಗಸ್ಟ್‌ 17ರಂದೇ ಸಲ್ಲಿಸಲಾಗುವುದು ಎಂದು ಹೇಳಿದ್ದಿರಿ. ಸಲ್ಲಿಸಿಲ್ಲವೇ, ಇಷ್ಟರಲ್ಲಾಗಲೇ ಸಲ್ಲಿಸಬೇಕಿತ್ತು” ಎಂಬ ನ್ಯಾಯಮೂರ್ತಿ ಗವಾಯಿಯವರ ಪ್ರಶ್ನೆಗೆ ಭೂಷಣ್ ಪರ ಮತ್ತೊಬ್ಬ ವಕೀಲ ದುಷ್ಯಂತ್ ದವೆ ಉತ್ತರಿಸಿ, “ಅಂದೇ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿರಲಿಲ್ಲ. ಶಾಸನಾತ್ಮಕವಾಗಿ 30 ದಿನಗಳ ಅವಕಾಶವಿದೆ ಎಂದಷ್ಟೆ ಹೇಳಿದ್ದೆವು” ಎಂದಿದ್ದಾರೆ.

ಇದಕ್ಕೆ “ಪೀಠದಲ್ಲಿರುವ ಒಬ್ಬರು ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಅರ್ಜಿ ಸಲ್ಲಿಸುತ್ತಿರೋ” ಎಂದು ಗವಾಯಿ ಕೇಳಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು 30 ದಿನದ ಒಳಗೆ ಸಲ್ಲಿಸಬಹುದಾಗಿದೆ. “ನ್ಯಾ.ಮಿಶ್ರಾ ಅವರು ನಿವೃತ್ತಿಯಾಗುವವರೆಗೆ ಅರ್ಜಿ ಸಲ್ಲಿಕೆಯಾಗುವುದಿಲ್ಲ” ಎನ್ನುವ ಅಭಿಪ್ರಾಯ ಹೊಂದುವುದು ಬೇಡ ಎಂದು ದವೆ ಉತ್ತರಿಸಿದ್ದಾರೆ.

ನ್ಯಾ.ಮಿಶ್ರಾರವರು “ವಿಚಾರಣೆಯನ್ನು ಮುಂದೂಡಲು ನಾವು ಸಮ್ಮತಿಸುವುದಿಲ್ಲ” ಎಂದಾಗ “ನಾವು ಮುಂದೂಡಿಕೆ ಅರ್ಜಿ ಸಲ್ಲಿಸಿದ್ದೆವು. ನೀವು ತಿರಸ್ಕರಿಸಬಹುದು. ನಾನು ನಿಮ್ಮ ನಿರ್ಧಾರಕ್ಕೆ ತಲೆಬಾಗುತ್ತೇನೆ. ಕಾನೂನನ್ನು ಮಾತ್ರವೇ ನಾನು ಹೇಳಬಹುದು” ಎಂದು ದವೆ ತಿಳಿಸಿದ್ದಾರೆ.

“ನ್ಯಾಯಾಂಗ ಪರಿಶೀಲನೆಯಲ್ಲಿ ಮೇಲ್ಮನವಿ ಸರಿಯಾಗಿದೆ ಮತ್ತು ಶಿಕ್ಷೆ ಘೋಷಿಸುವುದನ್ನು ಮುಂದೂಡಬಹುದು. ಶಿಕ್ಷೆ ಮುಂದೂಡಲ್ಪಟ್ಟರೆ ಸ್ವರ್ಗವೇನು ಬಿದ್ದೋಗುವುದಿಲ್ಲ” ಎಂದು ದವೆ ಹೇಳಿದ್ದಾರೆ.

ಕೊನೆಗೆ ನ್ಯಾಯಮೂರ್ತಿಗಳು “ವಿಚಾರಣೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮರುಪರಿಶೀಲನೆ ಕೋರುವ ನಿಮ್ಮ ಹಕ್ಕನ್ನು ಮನ್ನಿಸೋ‍ಣ. ಶಿಕ್ಷೆ ಬೇಕಾದರೆ ಆ ನಂತರವೇ ಜಾರಿಯಾಗಲಿ” ಎಂದಿದ್ದಾರೆ. ಶಿಕ್ಷೆ ಘೋಷಿಸುವ ವಾದ-ವಿವಾದ ಮುಂದುವರೆಯುತ್ತಿದೆ.


ಇದನ್ನೂ ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...