Homeಚಳವಳಿಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

- Advertisement -
- Advertisement -

“ಮೂರು ದಶಕಗಳಿಂದ ಯಾವ ಘನ ನ್ಯಾಯಾಲಯದ ಗೌರವವನ್ನು ಎತ್ತಿ ಹಿಡಿಯಲು ಪ್ರಯತ್ನಿಸಿದೆನೊ ಅದೇ ನ್ಯಾಯಾಲಯ ನಿಂದನೆ ಪ್ರಕರಣದಲ್ಲಿ ನನ್ನನ್ನು ತಪ್ಪಿತಸ್ಥನೆಂದು ಘೋಷಿಸಲಾಗಿದೆ. ನನ್ನನ್ನು ನ್ಯಾಯಾಲಯವು ದೋಷಿ ಎಂದು ತೀರ್ಮಾನಿಸಿದ ಬಗ್ಗೆ ನನಗೆ ನೋವಿದೆ, ನನ್ನನ್ನು ಸಂಪೂರ್ಣವಾಗಿ ತಪ್ಪು ಅರ್ಥಮಾಡಿಕೊಂಡಿರುವುದಕ್ಕೆ ನನಗೆ ನೋವಿದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ಶಿಕ್ಷೆ ಘೋಷಿಸುವ ವಿಚಾರಣೆ ಮುಂದೂಡಲು ಸಲ್ಲಿಸಿದ್ದ ಪ್ರಶಾಂತ್ ಭೂಷಣ್‌ರವರ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್ “ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ” ಎಂದು ಘೊಷಿಸಿದ್ದಾರೆ.

“ನನ್ನ ಉದ್ದೇಶವನ್ನು ಅರಿಯದೇ, ಸ್ವಷ್ಟ ವಿಚಾರಣೆ ನಡೆಸದೆ ನ್ಯಾಯಾಲಯವು ಈ ತೀರ್ಮಾನಕ್ಕೆ ಬಂದು ತಲುಪಿದ ಬಗ್ಗೆ ನನಗೆ ಆಘಾತವಾಗಿದೆ. ನನ್ನ ಟ್ವೀಟ್‌ಗಳು ನಾಗರಿಕನಾಗಿ ನನ್ನ ಕರ್ತವ್ಯವನ್ನು ನಿಭಾಯಿಸುವ ಉತ್ತಮ ಪ್ರಯತ್ನದ ಭಾಗವಾಗಿವೆ. ಇತಿಹಾಸದ ಈ ಹಂತದಲ್ಲಿ ನಾನು ಮಾತನಾಡದಿದ್ದರೆ ನಾನು ನನ್ನ ಕರ್ತವ್ಯದಲ್ಲಿ ವಿಫಲವಾಗುತ್ತಿದ್ದೆ. ನ್ಯಾಯಾಲಯವು ವಿಧಿಸಬಹುದಾದ ಯಾವುದೇ ದಂಡವನ್ನು ನಾನು ಸಲ್ಲಿಸುತ್ತೇನೆ. ಕ್ಷಮೆಯಾಚಿಸುವುದಿಲ್ಲ” ಎಂದು ಭೂಷಣ್ ತಿಳಿಸಿದ್ದಾರೆ.

“ನಾನು ಯಾವುದೇ ಕ್ಷಮೆಯನ್ನು ಕೋರುವುದಿಲ್ಲ. ಯಾವ ಮನವಿ ಸಹ ಮಾಡುವುದಿಲ್ಲ. ನ್ಯಾಯಾಲಯವು ನೀಡುವ ಯಾವುದೇ ಶಿಕ್ಷೆಯನ್ನು ಹೆಮ್ಮೆಯಿಂದ ಸ್ವೀಕರಿಸುತ್ತೇನೆ” ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಭೂಷಣ್ ಹೇಳಿದ್ದಾರೆ.

“ಸಾಂವಿಧಾನಿಕ ಕ್ರಮವನ್ನು ಕಾಪಾಡಲು ಯಾವುದೇ ಪ್ರಜಾಪ್ರಭುತ್ವದಲ್ಲಿ ಮುಕ್ತ ಟೀಕೆ ಅಗತ್ಯ ಎಂದು ನಾನು ನಂಬುತ್ತೇನೆ. ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಅವರು ಹೇಳಿದ್ದಾರೆ.

ಇಂದು ಪ್ರಶಾಂತ್ ಭೂಷಣ್‌ ಪರ ಹಿರಿಯ ವಕೀಲ ರಾಜೀವ್ ಧವನ್‌ ವಾದ ಮಂಡನೆ ಮಾಡಿದ್ದು ಮರುಪರಿಶೀಲನಾ ಅರ್ಜಿ ಸಲ್ಲಿಕೆಗೆ ಸಮಯಾವಕಾಶವಿರುವ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು.

“ನೀವು ಮರುಪರಿಶೀಲನಾ ಅರ್ಜಿಯನ್ನು ಆಗಸ್ಟ್‌ 17ರಂದೇ ಸಲ್ಲಿಸಲಾಗುವುದು ಎಂದು ಹೇಳಿದ್ದಿರಿ. ಸಲ್ಲಿಸಿಲ್ಲವೇ, ಇಷ್ಟರಲ್ಲಾಗಲೇ ಸಲ್ಲಿಸಬೇಕಿತ್ತು” ಎಂಬ ನ್ಯಾಯಮೂರ್ತಿ ಗವಾಯಿಯವರ ಪ್ರಶ್ನೆಗೆ ಭೂಷಣ್ ಪರ ಮತ್ತೊಬ್ಬ ವಕೀಲ ದುಷ್ಯಂತ್ ದವೆ ಉತ್ತರಿಸಿ, “ಅಂದೇ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದು ಹೇಳಿರಲಿಲ್ಲ. ಶಾಸನಾತ್ಮಕವಾಗಿ 30 ದಿನಗಳ ಅವಕಾಶವಿದೆ ಎಂದಷ್ಟೆ ಹೇಳಿದ್ದೆವು” ಎಂದಿದ್ದಾರೆ.

ಇದಕ್ಕೆ “ಪೀಠದಲ್ಲಿರುವ ಒಬ್ಬರು ನ್ಯಾಯಮೂರ್ತಿಗಳು ನಿವೃತ್ತಿಯಾದ ನಂತರ ಅರ್ಜಿ ಸಲ್ಲಿಸುತ್ತಿರೋ” ಎಂದು ಗವಾಯಿ ಕೇಳಿದ್ದಾರೆ. ಮರುಪರಿಶೀಲನಾ ಅರ್ಜಿಯನ್ನು 30 ದಿನದ ಒಳಗೆ ಸಲ್ಲಿಸಬಹುದಾಗಿದೆ. “ನ್ಯಾ.ಮಿಶ್ರಾ ಅವರು ನಿವೃತ್ತಿಯಾಗುವವರೆಗೆ ಅರ್ಜಿ ಸಲ್ಲಿಕೆಯಾಗುವುದಿಲ್ಲ” ಎನ್ನುವ ಅಭಿಪ್ರಾಯ ಹೊಂದುವುದು ಬೇಡ ಎಂದು ದವೆ ಉತ್ತರಿಸಿದ್ದಾರೆ.

ನ್ಯಾ.ಮಿಶ್ರಾರವರು “ವಿಚಾರಣೆಯನ್ನು ಮುಂದೂಡಲು ನಾವು ಸಮ್ಮತಿಸುವುದಿಲ್ಲ” ಎಂದಾಗ “ನಾವು ಮುಂದೂಡಿಕೆ ಅರ್ಜಿ ಸಲ್ಲಿಸಿದ್ದೆವು. ನೀವು ತಿರಸ್ಕರಿಸಬಹುದು. ನಾನು ನಿಮ್ಮ ನಿರ್ಧಾರಕ್ಕೆ ತಲೆಬಾಗುತ್ತೇನೆ. ಕಾನೂನನ್ನು ಮಾತ್ರವೇ ನಾನು ಹೇಳಬಹುದು” ಎಂದು ದವೆ ತಿಳಿಸಿದ್ದಾರೆ.

“ನ್ಯಾಯಾಂಗ ಪರಿಶೀಲನೆಯಲ್ಲಿ ಮೇಲ್ಮನವಿ ಸರಿಯಾಗಿದೆ ಮತ್ತು ಶಿಕ್ಷೆ ಘೋಷಿಸುವುದನ್ನು ಮುಂದೂಡಬಹುದು. ಶಿಕ್ಷೆ ಮುಂದೂಡಲ್ಪಟ್ಟರೆ ಸ್ವರ್ಗವೇನು ಬಿದ್ದೋಗುವುದಿಲ್ಲ” ಎಂದು ದವೆ ಹೇಳಿದ್ದಾರೆ.

ಕೊನೆಗೆ ನ್ಯಾಯಮೂರ್ತಿಗಳು “ವಿಚಾರಣೆ ಯಾವುದೇ ಕಾರಣಕ್ಕೂ ಮುಂದೂಡುವುದಿಲ್ಲ. ಮರುಪರಿಶೀಲನೆ ಕೋರುವ ನಿಮ್ಮ ಹಕ್ಕನ್ನು ಮನ್ನಿಸೋ‍ಣ. ಶಿಕ್ಷೆ ಬೇಕಾದರೆ ಆ ನಂತರವೇ ಜಾರಿಯಾಗಲಿ” ಎಂದಿದ್ದಾರೆ. ಶಿಕ್ಷೆ ಘೋಷಿಸುವ ವಾದ-ವಿವಾದ ಮುಂದುವರೆಯುತ್ತಿದೆ.


ಇದನ್ನೂ ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...