Homeಕರ್ನಾಟಕನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

- Advertisement -
- Advertisement -

ಮಥುರಾ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಆದರೆ ರಾಷ್ಟ್ರೀಯವಾದಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಶನಿವಾರ ಹೇಳಿದ್ದಾರೆ.

ಶ್ರೀಕೃಷ್ಣ ಜನನಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ, “ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ರಾಷ್ಟ್ರೀಯವಾದಿಗಳ ಪರ ನಾನು ಪ್ರಚಾರ ಮಾಡುತ್ತೇನೆ” ಎಂದು ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರೀಕೃಷ್ಣನ ನಿಜವಾದ ಜನ್ಮಸ್ಥಳವನ್ನು ಜನರು ವೀಕ್ಷಿಸಲು ಪ್ರಯತ್ನಗಳನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಈದ್ಗಾ ಇದೆ ಎಂದು ಅವರು ತಿಳಿಸಿದ್ದಾರೆ.

‘ನಿಮ್ಮ ಹೇಳಿಕೆಗಳು ಭಾವನೆಗಳಿಗೆ ಧಕ್ಕೆ ತಂದಿವೆ’ ಎಂದು ಜನರು ಆರೋಪಿಸಿದ್ದಾರೆ ಎಂದಾಗ, “ಪ್ರಾಮಾಣಿಕರು, ಧೈರ್ಯಶಾಲಿಗಳು, ರಾಷ್ಟ್ರೀಯವಾದಿಗಳು ಮತ್ತು ದೇಶದ ಬಗ್ಗೆ ಮಾತನಾಡುವವರಿಗೆ ನಾನು ಹೇಳುತ್ತಿರುವುದು ಸರಿ ಎಂದು ಅನಿಸುತ್ತದೆ” ಎಂದು ಕಂಗನಾ ಪ್ರತಿಪಾದಿಸಿದ್ದಾರೆ.

ಚಂಡೀಗಢದಲ್ಲಿ ತಮ್ಮ ಕಾರನ್ನು ರೈತರು ತಡೆದಿದ್ದಾರೆ ಎಂಬ ವರದಿಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು “ನಾನು ಎಂದಿಗೂ ಕ್ಷಮೆಯಾಚಿಸಲಿಲ್ಲ. ನಾನು ಅದನ್ನು ಪ್ರತಿಭಟಿಸಿದೆ” ಎಂದು ತಿಳಿಸಿದ್ದಾರೆ.

ಪದೇ ಪದೇ ರೈತ ವಿರೋಧಿ ಹೇಳಿಕೆಗಳನ್ನು ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೈತರು ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಪಂಜಾಬ್‌ನ ಕಿರಾತ್‌ಪುರ್‌ನಲ್ಲಿ ನಡೆದಿತ್ತು.


ಇದನ್ನೂ ಓದಿರಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ


ಸದಾ ಬಿಜೆಪಿ ಪರವಾಗಿ ವಾದಿಸುವ ಕಂಗನಾ ರಣಾವತ್‌ರವರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು ಇತ್ತೀಚೆಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ ನಂತರ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ಅವರನ್ನು ಕಾಲಡಿಯಲ್ಲಿ ಹೊಸಕಿ ಹಾಕಬೇಕೆಂಬ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಂಜಾಬ್‌ಗೆ ಅವರು ತೆರಳಿದ್ದ ವೇಳೆ ಘೇರಾವ್ ಹಾಕಿದ ರೈತರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದರು. ಬಾವುಟಗಳನ್ನು ಪ್ರದರ್ಶಿಸಿ ಕಾರು ಮುಂದೆ ಹೋಗದಂತೆ ತಡೆದಿದ್ದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಗನಾ ನಾನು ಮಾಬ್‌ನಿಂದ ಸುತ್ತವರಿಯಲ್ಪಟ್ಟಿದ್ದೇನೆ. ಅವರು ನನ್ನನ್ನು ನಿಂದಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ, ನನ್ನನ್ನು ಕೊಲ್ಲುತ್ತಾರೆ, ನನಗೆ ರಕ್ಷಣೆ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ನವೆಂಬರ್‌ನಲ್ಲಿ ಪೋಸ್ಟ್ ಹಾಕಿದ್ದರು.

ಕಂಗನಾ ಅವರು ಮೊದಲಿನಿಂದಲೂ ಬಿಜೆಪಿಯ ಪರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಂದರೆ ‘2014ರ ನಂತರ ಭಾರತಕ್ಕೆ ಸ್ವಾತಂತ್ರ್ಯ ಬಂದಿತು’ ಎಂದು ಹೇಳಿಕೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನವನ್ನು ಕಂಗನಾ ಅಣಕಿಸಿದ್ದಾರೆ ಎಂದು ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಕಂಗನಾ ಅವರು ‘ರಾಷ್ಟ್ರೀಯವಾದಿಗಳ ಪರವಾಗಿ ಪ್ರಚಾರ ಮಾಡುತ್ತೇನೆ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ’ ಎಂದಿದ್ದಾರೆ. ಅವರ ಹಿಂದಿನ ಹೇಳಿಕೆಗಳಿಗೂ, ಶನಿವಾರ ನೀಡಿದ ಹೇಳಿಕೆಗಳಿಗೂ ತಾಳೆ ಹಾಕಿ ನೋಡಿದರೆ, ‘ಬಿಜೆಪಿಯವರು ಮಾತ್ರ ನಿಜವಾದ ರಾಷ್ಟ್ರವಾದಿಗಳು’ ಎಂದು ಕಂಗನಾ ಪ್ರತಿಪಾದಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...