Homeಕರ್ನಾಟಕನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

- Advertisement -
- Advertisement -

ಮಥುರಾ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಆದರೆ ರಾಷ್ಟ್ರೀಯವಾದಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಶನಿವಾರ ಹೇಳಿದ್ದಾರೆ.

ಶ್ರೀಕೃಷ್ಣ ಜನನಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ, “ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ರಾಷ್ಟ್ರೀಯವಾದಿಗಳ ಪರ ನಾನು ಪ್ರಚಾರ ಮಾಡುತ್ತೇನೆ” ಎಂದು ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರೀಕೃಷ್ಣನ ನಿಜವಾದ ಜನ್ಮಸ್ಥಳವನ್ನು ಜನರು ವೀಕ್ಷಿಸಲು ಪ್ರಯತ್ನಗಳನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಈದ್ಗಾ ಇದೆ ಎಂದು ಅವರು ತಿಳಿಸಿದ್ದಾರೆ.

‘ನಿಮ್ಮ ಹೇಳಿಕೆಗಳು ಭಾವನೆಗಳಿಗೆ ಧಕ್ಕೆ ತಂದಿವೆ’ ಎಂದು ಜನರು ಆರೋಪಿಸಿದ್ದಾರೆ ಎಂದಾಗ, “ಪ್ರಾಮಾಣಿಕರು, ಧೈರ್ಯಶಾಲಿಗಳು, ರಾಷ್ಟ್ರೀಯವಾದಿಗಳು ಮತ್ತು ದೇಶದ ಬಗ್ಗೆ ಮಾತನಾಡುವವರಿಗೆ ನಾನು ಹೇಳುತ್ತಿರುವುದು ಸರಿ ಎಂದು ಅನಿಸುತ್ತದೆ” ಎಂದು ಕಂಗನಾ ಪ್ರತಿಪಾದಿಸಿದ್ದಾರೆ.

ಚಂಡೀಗಢದಲ್ಲಿ ತಮ್ಮ ಕಾರನ್ನು ರೈತರು ತಡೆದಿದ್ದಾರೆ ಎಂಬ ವರದಿಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು “ನಾನು ಎಂದಿಗೂ ಕ್ಷಮೆಯಾಚಿಸಲಿಲ್ಲ. ನಾನು ಅದನ್ನು ಪ್ರತಿಭಟಿಸಿದೆ” ಎಂದು ತಿಳಿಸಿದ್ದಾರೆ.

ಪದೇ ಪದೇ ರೈತ ವಿರೋಧಿ ಹೇಳಿಕೆಗಳನ್ನು ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೈತರು ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಪಂಜಾಬ್‌ನ ಕಿರಾತ್‌ಪುರ್‌ನಲ್ಲಿ ನಡೆದಿತ್ತು.


ಇದನ್ನೂ ಓದಿರಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ


ಸದಾ ಬಿಜೆಪಿ ಪರವಾಗಿ ವಾದಿಸುವ ಕಂಗನಾ ರಣಾವತ್‌ರವರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು ಇತ್ತೀಚೆಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ ನಂತರ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ಅವರನ್ನು ಕಾಲಡಿಯಲ್ಲಿ ಹೊಸಕಿ ಹಾಕಬೇಕೆಂಬ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಂಜಾಬ್‌ಗೆ ಅವರು ತೆರಳಿದ್ದ ವೇಳೆ ಘೇರಾವ್ ಹಾಕಿದ ರೈತರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದರು. ಬಾವುಟಗಳನ್ನು ಪ್ರದರ್ಶಿಸಿ ಕಾರು ಮುಂದೆ ಹೋಗದಂತೆ ತಡೆದಿದ್ದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಗನಾ ನಾನು ಮಾಬ್‌ನಿಂದ ಸುತ್ತವರಿಯಲ್ಪಟ್ಟಿದ್ದೇನೆ. ಅವರು ನನ್ನನ್ನು ನಿಂದಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ, ನನ್ನನ್ನು ಕೊಲ್ಲುತ್ತಾರೆ, ನನಗೆ ರಕ್ಷಣೆ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ನವೆಂಬರ್‌ನಲ್ಲಿ ಪೋಸ್ಟ್ ಹಾಕಿದ್ದರು.

ಕಂಗನಾ ಅವರು ಮೊದಲಿನಿಂದಲೂ ಬಿಜೆಪಿಯ ಪರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಂದರೆ ‘2014ರ ನಂತರ ಭಾರತಕ್ಕೆ ಸ್ವಾತಂತ್ರ್ಯ ಬಂದಿತು’ ಎಂದು ಹೇಳಿಕೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನವನ್ನು ಕಂಗನಾ ಅಣಕಿಸಿದ್ದಾರೆ ಎಂದು ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಕಂಗನಾ ಅವರು ‘ರಾಷ್ಟ್ರೀಯವಾದಿಗಳ ಪರವಾಗಿ ಪ್ರಚಾರ ಮಾಡುತ್ತೇನೆ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ’ ಎಂದಿದ್ದಾರೆ. ಅವರ ಹಿಂದಿನ ಹೇಳಿಕೆಗಳಿಗೂ, ಶನಿವಾರ ನೀಡಿದ ಹೇಳಿಕೆಗಳಿಗೂ ತಾಳೆ ಹಾಕಿ ನೋಡಿದರೆ, ‘ಬಿಜೆಪಿಯವರು ಮಾತ್ರ ನಿಜವಾದ ರಾಷ್ಟ್ರವಾದಿಗಳು’ ಎಂದು ಕಂಗನಾ ಪ್ರತಿಪಾದಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...