Homeಕರ್ನಾಟಕನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

- Advertisement -
- Advertisement -

ಮಥುರಾ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಆದರೆ ರಾಷ್ಟ್ರೀಯವಾದಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಶನಿವಾರ ಹೇಳಿದ್ದಾರೆ.

ಶ್ರೀಕೃಷ್ಣ ಜನನಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ, “ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ರಾಷ್ಟ್ರೀಯವಾದಿಗಳ ಪರ ನಾನು ಪ್ರಚಾರ ಮಾಡುತ್ತೇನೆ” ಎಂದು ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರೀಕೃಷ್ಣನ ನಿಜವಾದ ಜನ್ಮಸ್ಥಳವನ್ನು ಜನರು ವೀಕ್ಷಿಸಲು ಪ್ರಯತ್ನಗಳನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಈದ್ಗಾ ಇದೆ ಎಂದು ಅವರು ತಿಳಿಸಿದ್ದಾರೆ.

‘ನಿಮ್ಮ ಹೇಳಿಕೆಗಳು ಭಾವನೆಗಳಿಗೆ ಧಕ್ಕೆ ತಂದಿವೆ’ ಎಂದು ಜನರು ಆರೋಪಿಸಿದ್ದಾರೆ ಎಂದಾಗ, “ಪ್ರಾಮಾಣಿಕರು, ಧೈರ್ಯಶಾಲಿಗಳು, ರಾಷ್ಟ್ರೀಯವಾದಿಗಳು ಮತ್ತು ದೇಶದ ಬಗ್ಗೆ ಮಾತನಾಡುವವರಿಗೆ ನಾನು ಹೇಳುತ್ತಿರುವುದು ಸರಿ ಎಂದು ಅನಿಸುತ್ತದೆ” ಎಂದು ಕಂಗನಾ ಪ್ರತಿಪಾದಿಸಿದ್ದಾರೆ.

ಚಂಡೀಗಢದಲ್ಲಿ ತಮ್ಮ ಕಾರನ್ನು ರೈತರು ತಡೆದಿದ್ದಾರೆ ಎಂಬ ವರದಿಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು “ನಾನು ಎಂದಿಗೂ ಕ್ಷಮೆಯಾಚಿಸಲಿಲ್ಲ. ನಾನು ಅದನ್ನು ಪ್ರತಿಭಟಿಸಿದೆ” ಎಂದು ತಿಳಿಸಿದ್ದಾರೆ.

ಪದೇ ಪದೇ ರೈತ ವಿರೋಧಿ ಹೇಳಿಕೆಗಳನ್ನು ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೈತರು ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಪಂಜಾಬ್‌ನ ಕಿರಾತ್‌ಪುರ್‌ನಲ್ಲಿ ನಡೆದಿತ್ತು.


ಇದನ್ನೂ ಓದಿರಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ


ಸದಾ ಬಿಜೆಪಿ ಪರವಾಗಿ ವಾದಿಸುವ ಕಂಗನಾ ರಣಾವತ್‌ರವರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು ಇತ್ತೀಚೆಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ ನಂತರ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ಅವರನ್ನು ಕಾಲಡಿಯಲ್ಲಿ ಹೊಸಕಿ ಹಾಕಬೇಕೆಂಬ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಂಜಾಬ್‌ಗೆ ಅವರು ತೆರಳಿದ್ದ ವೇಳೆ ಘೇರಾವ್ ಹಾಕಿದ ರೈತರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದರು. ಬಾವುಟಗಳನ್ನು ಪ್ರದರ್ಶಿಸಿ ಕಾರು ಮುಂದೆ ಹೋಗದಂತೆ ತಡೆದಿದ್ದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಗನಾ ನಾನು ಮಾಬ್‌ನಿಂದ ಸುತ್ತವರಿಯಲ್ಪಟ್ಟಿದ್ದೇನೆ. ಅವರು ನನ್ನನ್ನು ನಿಂದಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ, ನನ್ನನ್ನು ಕೊಲ್ಲುತ್ತಾರೆ, ನನಗೆ ರಕ್ಷಣೆ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ನವೆಂಬರ್‌ನಲ್ಲಿ ಪೋಸ್ಟ್ ಹಾಕಿದ್ದರು.

ಕಂಗನಾ ಅವರು ಮೊದಲಿನಿಂದಲೂ ಬಿಜೆಪಿಯ ಪರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಂದರೆ ‘2014ರ ನಂತರ ಭಾರತಕ್ಕೆ ಸ್ವಾತಂತ್ರ್ಯ ಬಂದಿತು’ ಎಂದು ಹೇಳಿಕೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನವನ್ನು ಕಂಗನಾ ಅಣಕಿಸಿದ್ದಾರೆ ಎಂದು ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಕಂಗನಾ ಅವರು ‘ರಾಷ್ಟ್ರೀಯವಾದಿಗಳ ಪರವಾಗಿ ಪ್ರಚಾರ ಮಾಡುತ್ತೇನೆ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ’ ಎಂದಿದ್ದಾರೆ. ಅವರ ಹಿಂದಿನ ಹೇಳಿಕೆಗಳಿಗೂ, ಶನಿವಾರ ನೀಡಿದ ಹೇಳಿಕೆಗಳಿಗೂ ತಾಳೆ ಹಾಕಿ ನೋಡಿದರೆ, ‘ಬಿಜೆಪಿಯವರು ಮಾತ್ರ ನಿಜವಾದ ರಾಷ್ಟ್ರವಾದಿಗಳು’ ಎಂದು ಕಂಗನಾ ಪ್ರತಿಪಾದಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...