Homeಕರ್ನಾಟಕನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

- Advertisement -
- Advertisement -

ಮಥುರಾ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಆದರೆ ರಾಷ್ಟ್ರೀಯವಾದಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಶನಿವಾರ ಹೇಳಿದ್ದಾರೆ.

ಶ್ರೀಕೃಷ್ಣ ಜನನಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ, “ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ರಾಷ್ಟ್ರೀಯವಾದಿಗಳ ಪರ ನಾನು ಪ್ರಚಾರ ಮಾಡುತ್ತೇನೆ” ಎಂದು ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರೀಕೃಷ್ಣನ ನಿಜವಾದ ಜನ್ಮಸ್ಥಳವನ್ನು ಜನರು ವೀಕ್ಷಿಸಲು ಪ್ರಯತ್ನಗಳನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಈದ್ಗಾ ಇದೆ ಎಂದು ಅವರು ತಿಳಿಸಿದ್ದಾರೆ.

‘ನಿಮ್ಮ ಹೇಳಿಕೆಗಳು ಭಾವನೆಗಳಿಗೆ ಧಕ್ಕೆ ತಂದಿವೆ’ ಎಂದು ಜನರು ಆರೋಪಿಸಿದ್ದಾರೆ ಎಂದಾಗ, “ಪ್ರಾಮಾಣಿಕರು, ಧೈರ್ಯಶಾಲಿಗಳು, ರಾಷ್ಟ್ರೀಯವಾದಿಗಳು ಮತ್ತು ದೇಶದ ಬಗ್ಗೆ ಮಾತನಾಡುವವರಿಗೆ ನಾನು ಹೇಳುತ್ತಿರುವುದು ಸರಿ ಎಂದು ಅನಿಸುತ್ತದೆ” ಎಂದು ಕಂಗನಾ ಪ್ರತಿಪಾದಿಸಿದ್ದಾರೆ.

ಚಂಡೀಗಢದಲ್ಲಿ ತಮ್ಮ ಕಾರನ್ನು ರೈತರು ತಡೆದಿದ್ದಾರೆ ಎಂಬ ವರದಿಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು “ನಾನು ಎಂದಿಗೂ ಕ್ಷಮೆಯಾಚಿಸಲಿಲ್ಲ. ನಾನು ಅದನ್ನು ಪ್ರತಿಭಟಿಸಿದೆ” ಎಂದು ತಿಳಿಸಿದ್ದಾರೆ.

ಪದೇ ಪದೇ ರೈತ ವಿರೋಧಿ ಹೇಳಿಕೆಗಳನ್ನು ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೈತರು ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಪಂಜಾಬ್‌ನ ಕಿರಾತ್‌ಪುರ್‌ನಲ್ಲಿ ನಡೆದಿತ್ತು.


ಇದನ್ನೂ ಓದಿರಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ


ಸದಾ ಬಿಜೆಪಿ ಪರವಾಗಿ ವಾದಿಸುವ ಕಂಗನಾ ರಣಾವತ್‌ರವರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು ಇತ್ತೀಚೆಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ ನಂತರ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ಅವರನ್ನು ಕಾಲಡಿಯಲ್ಲಿ ಹೊಸಕಿ ಹಾಕಬೇಕೆಂಬ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಂಜಾಬ್‌ಗೆ ಅವರು ತೆರಳಿದ್ದ ವೇಳೆ ಘೇರಾವ್ ಹಾಕಿದ ರೈತರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದರು. ಬಾವುಟಗಳನ್ನು ಪ್ರದರ್ಶಿಸಿ ಕಾರು ಮುಂದೆ ಹೋಗದಂತೆ ತಡೆದಿದ್ದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಗನಾ ನಾನು ಮಾಬ್‌ನಿಂದ ಸುತ್ತವರಿಯಲ್ಪಟ್ಟಿದ್ದೇನೆ. ಅವರು ನನ್ನನ್ನು ನಿಂದಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ, ನನ್ನನ್ನು ಕೊಲ್ಲುತ್ತಾರೆ, ನನಗೆ ರಕ್ಷಣೆ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ನವೆಂಬರ್‌ನಲ್ಲಿ ಪೋಸ್ಟ್ ಹಾಕಿದ್ದರು.

ಕಂಗನಾ ಅವರು ಮೊದಲಿನಿಂದಲೂ ಬಿಜೆಪಿಯ ಪರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಂದರೆ ‘2014ರ ನಂತರ ಭಾರತಕ್ಕೆ ಸ್ವಾತಂತ್ರ್ಯ ಬಂದಿತು’ ಎಂದು ಹೇಳಿಕೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನವನ್ನು ಕಂಗನಾ ಅಣಕಿಸಿದ್ದಾರೆ ಎಂದು ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಕಂಗನಾ ಅವರು ‘ರಾಷ್ಟ್ರೀಯವಾದಿಗಳ ಪರವಾಗಿ ಪ್ರಚಾರ ಮಾಡುತ್ತೇನೆ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ’ ಎಂದಿದ್ದಾರೆ. ಅವರ ಹಿಂದಿನ ಹೇಳಿಕೆಗಳಿಗೂ, ಶನಿವಾರ ನೀಡಿದ ಹೇಳಿಕೆಗಳಿಗೂ ತಾಳೆ ಹಾಕಿ ನೋಡಿದರೆ, ‘ಬಿಜೆಪಿಯವರು ಮಾತ್ರ ನಿಜವಾದ ರಾಷ್ಟ್ರವಾದಿಗಳು’ ಎಂದು ಕಂಗನಾ ಪ್ರತಿಪಾದಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...