Homeಮುಖಪುಟಚುನಾವಣಾ ಬಾಂಡ್ ಕುರಿತ ಎಸ್‌ಬಿಐ ಅರ್ಜಿ ಹಾಸ್ಯಾಸ್ಪದವಾಗಿದೆ: ಸುಪ್ರೀಂಕೋರ್ಟ್‌ ಮಾಜಿ ನ್ಯಾಯಮೂರ್ತಿ

ಚುನಾವಣಾ ಬಾಂಡ್ ಕುರಿತ ಎಸ್‌ಬಿಐ ಅರ್ಜಿ ಹಾಸ್ಯಾಸ್ಪದವಾಗಿದೆ: ಸುಪ್ರೀಂಕೋರ್ಟ್‌ ಮಾಜಿ ನ್ಯಾಯಮೂರ್ತಿ

- Advertisement -
- Advertisement -

ಸಾರ್ವಜನಿಕ ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಜೂನ್ 30ರವರೆಗೆ ಮೂರುವರೆ ತಿಂಗಳಿಗಿಂತ ಹೆಚ್ಚು ಹೆಚ್ಚುವರಿ ಸಮಯವನ್ನು ಕೋರಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ, ಚುನಾವಣಾ ಬಾಂಡ್ ಕುರಿತ ಎಸ್‌ಬಿಐ ವಿವರಣೆಯನ್ನು ನಾನು ನಂಬುವುದಿಲ್ಲ, ಇದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರು 2019ರಲ್ಲಿ ಎಸ್‌ಬಿಐಗೆ ಚುನಾವಣಾ ಬಾಂಡ್ ಯೋಜನೆಯ ಸಂಬಂಧಿತ ವಿವರಗಳನ್ನು ಅಂದರೆ ದಾಖಲೆಗಳನ್ನು ಸಂಗ್ರಹಿಸಲು ಮತ್ತು ಇರಿಸಿಕೊಳ್ಳಲು ತಿಳಿಸಿದ್ದ ಪೀಠದ ಭಾಗವಾಗಿದ್ದರು ಎಂದು ಹೇಳಿದ್ದು, ಚುನಾವಣಾ ಆಯೋಗಕ್ಕೆ ವಿವರಣೆಯನ್ನು ಕೊಡಲು ಮೂರೂವರೆ ತಿಂಗಳು ಹೆಚ್ಚುವರಿ ಅಗತ್ಯವಿದೆ ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

SBIನ ನಿಲುವು ಸಂಪೂರ್ಣವಾಗಿ ಹಾಸ್ಯಾಸ್ಪದವಾಗಿದೆ. ಈ ವಿವರಣೆಯು ಹೆಚ್ಚು ಮೌಲ್ಯಯುತವಾಗಿಲ್ಲ ಎಂದು ಹೇಳಿದ್ದಾರೆ. ಪೀಠದ ಭಾಗವಾಗಿದ್ದಾಗಿನ ಏಪ್ರಿಲ್ 2019ರ ಆದೇಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ದೀಪಕ್ ಗುಪ್ತಾ, ಒಮ್ಮೆ ನ್ಯಾಯಾಲಯವು ಈ ಮಾಹಿತಿಯನ್ನು ಇರಿಸಿಕೊಳ್ಳಲು ನಿರ್ದೇಶಿಸಿದಾಗ ಅದನ್ನು ಇಟ್ಟುಕೊಳ್ಳುವುದು ಅವರ ಬದ್ಧ ಕರ್ತವ್ಯವಾಗಿದೆ. ಅವರು ಸಾಧ್ಯವಾದಷ್ಟು ಬೇಗ ಅದನ್ನು ಬಹಿರಂಗಪಡಿಸಬೇಕು. ಮೂರು ತಿಂಗಳವರೆಗೆ ಕಾಲಾವಕಾಶ ಕೋರುವುದಲ್ಲ ಎಂದು ಹೇಳಿದ್ದಾರೆ.

ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನ್ಯಾಯಮೂರ್ತಿ ದೀಪಕ್ ಗುಪ್ತಾ, ಎಲ್ಲಾ ವಿವರಗಳನ್ನು ಒಟ್ಟುಗೂಡಿಸಲು ಕೆಲವು ಗಂಟೆಗಳು ಅಥವಾ ಕೆಲವು ದಿನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  44,434 ಸೆಟ್‌ಗಳ ಮಾಹಿತಿಯನ್ನು ಒಟ್ಟುಗೂಡಿಸುವಲ್ಲಿ ಈ ಸಮಸ್ಯೆ ಇದೆ ಎಂದು ಏಕೆ ಊಹಿಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಅವರು ತಮ್ಮ ಅಭಿಪ್ರಾಯದಲ್ಲಿ ಚುನಾವಣಾ ಬಾಂಡ್ ವಿವರಗಳನ್ನು ಮತದಾನ ಪ್ರಾರಂಭವಾಗುವ ಕನಿಷ್ಠ ಐದು ಅಥವಾ ಆರು ದಿನಗಳ ಮೊದಲು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಎಸ್‌ಬಿಐ ಅರ್ಜಿಯನ್ನು ತಿರಸ್ಕರಿಸಲು ಮತ್ತು ಮಾಹಿತಿ ಲಭ್ಯವಾದಾಗ ಹೊಸ ಗಡುವನ್ನು ನಿಗದಿಪಡಿಸಲು ಸುಪ್ರೀಂಕೋರ್ಟ್‌ಗೆ ಎಲ್ಲ ಹಕ್ಕಿದೆ ಎಂದು ಹೇಳಿದರು. ಏಪ್ರಿಲ್ ಮಧ್ಯದಲ್ಲಿ ಅಂದರೆ ಮತದಾನ ಪ್ರಾರಂಭವಾಗುವ ಸಾಧ್ಯತೆಯಿರುವಾಗ ಮಾಹಿತಿಯು ಇತ್ತೀಚಿನ ದಿನಗಳಲ್ಲಿ ಲಭ್ಯವಿರಬೇಕು ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್:

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದಿತ್ತು. ಈ ಬಾಂಡ್​ಗಳು ಅನಾಮಧೇಯವಾಗಿತ್ತು. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗಗೊಳ್ಳುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುತ್ತಿರಲಿಲ್ಲ.

ಜನವರಿ 2,2018ರಂದು ಅಂದಿನ ಮೋದಿ ಸರ್ಕಾರ ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ತಿದ್ದುಪಡಿ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತಿತ್ತು. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌: SBI ಕಾಲಾವಕಾಶ ಕೋರಿರುವುದರ ವಿರುದ್ಧ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...