Homeಕರ್ನಾಟಕನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

- Advertisement -
- Advertisement -

“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ (ಜ.20) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷ, ಹೈಕಮಾಂಡ್ ಇದೆ. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಆಂತರಿಕ ಬೇಗುದಿ ಇಲ್ಲವೇ ಎಂಬ ಪ್ರಶ್ನೆಗೆ, “ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದು ಹೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೇ ಬದಲಾವಣೆ ಮಾಡಬೇಕು ಎಂದು ಕೆಲವು ಸಚಿವರು ರಾಹುಲ್ ಗಾಂಧಿ ಅವರಿಗೆ ದೂರು ನೀಡುತ್ತಿದ್ದಾರಂತೆ ಎಂಬ ಬಗ್ಗೆ ಕೇಳಿದಾಗ, “ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ. ನಾನು ಭಾನುವಾರ ಹಿರಿಯ ಶಾಸಕರ ಮನೆಗೆ ಭೇಟಿ ನೀಡಿದ್ದೆ. ಅವರಿಗೆ ಯಾರ ಜೊತೆಯೋ ಜಗಳ ಇತ್ತಂತೆ ಎಂದು ಒಂದಷ್ಟು ಟಿವಿ ಮಾಧ್ಯಮಗಳು ನೂತನ ಕಥೆಯನ್ನು ಸೃಷ್ಟಿಸಿದ್ದವು. ಫಿರೋಜ್ ಸೇಠ್ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಅವರನ್ನು ಈ ಸಮಾವೇಶದ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ಜೊತೆ ಹೋಗಿ ಭೇಟಿ ಮಾಡಿದ್ದೆ. ಆದರೆ, ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು. ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ತಮ್ಮ ಘನತೆಯನ್ನು ಹಾಳು ಮಾಡಿಕೊಳ್ಳಬಾರದು” ಎಂದರು.

ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್‌ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ” ಎಂದು ಹೇಳಿದರು.

2023ರ ಚುನಾವಣೆಯಲ್ಲಿ ಫಿರೋಜ್ ಸೇಠ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರು ಕಾರಣ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ” ಎಂದರು.

“ಪಕ್ಷಕ್ಕಾಗಿ ಮೊದಲಿನಿಂದಲೂ ಹಲವಾರು ತ್ಯಾಗಗಳನ್ನು ಮಾಡಿದ್ದೇನೆ. ಧರಂಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ” ಎಂದರು.

ಎಷ್ಟು ದಿನ ಶಿವಕುಮಾರ್ ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಕೇಳಿದಾಗ, “ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ” ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಂವಿಧಾನ ಉಳಿಸುವುದು ನಮ್ಮ ಮೂಲ ಮಂತ್ರ

“ಮಹಾತ್ಮ ಗಾಂಧಿ ಅವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ಧೇಶ. ಸಾಮಾಜಿಕ ನ್ಯಾಯವನ್ನು ಉಳಿಸುವುದೇ ನಮ್ಮ ಮೂಲ ಮಂತ್ರ. ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದಿವರೆಸಲಾಗುವುದು” ಎಂದು ಹೇಳಿದರು.

“ಸುಮಾರು 60ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ನಾಯಕರು, ಅತಿಥಿಗಳು, ಸಂಸದರು, ಕಾರ್ಯಕಾರಿ ಸಮಿತಿ ಸದಸ್ಯರು ಬೆಳಗಾವಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಸಚಿವರು, ಶಾಸಕರು, ಹಿರಿಯ ನಾಯಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದು, ಒಂದಷ್ಟು ನಾಯಕರಿಗೆ ಮುಖ್ಯ ವೇದಿಕೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ದೆಹಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಕೇಳಿದಾಗ, “ನಾನೇ ಖುದ್ದಾಗಿ ದೆಹಲಿಗೆ ಹೋಗಿ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ನೀಡುವ ಪ್ಯಾರಿ ದೀದಿ ಯೋಜನೆ ಪ್ರಕಟಣೆ ಮಾಡಿದ್ದೆ” ಎಂದರು.

ಎಲ್ಲಾ ರಾಜ್ಯಗಳ ಸಿಎಂಗಳಿದ್ದು ಸಿದ್ದರಾಮಯ್ಯ ಅವರನ್ನು ಕೈ ಬಿಟ್ಟಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿದ್ದಾರೆ. ಎಲ್ಲಾ ಮಂತ್ರಿಗಳು, ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಎಐಸಿಸಿ ಸಮಯ ನೀಡಿದೆ” ಎಂದರು.

ಸುವರ್ಣಸೌಧದ ಗಾಂಧಿ ಪ್ರತಿಮೆಯನ್ನು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ಕೇಳಿದಾಗ, “ಇದನ್ನು ನಿರ್ವಹಿಸಿದ್ದು ಲೋಕೋಪಯೋಗಿ ಇಲಾಖೆ, ಶಿಲ್ಪಿ ಯಾರು ಎಂದು ನಾನು ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...