Homeಕರ್ನಾಟಕನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

- Advertisement -
- Advertisement -

“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ (ಜ.20) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷ, ಹೈಕಮಾಂಡ್ ಇದೆ. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಆಂತರಿಕ ಬೇಗುದಿ ಇಲ್ಲವೇ ಎಂಬ ಪ್ರಶ್ನೆಗೆ, “ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದು ಹೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೇ ಬದಲಾವಣೆ ಮಾಡಬೇಕು ಎಂದು ಕೆಲವು ಸಚಿವರು ರಾಹುಲ್ ಗಾಂಧಿ ಅವರಿಗೆ ದೂರು ನೀಡುತ್ತಿದ್ದಾರಂತೆ ಎಂಬ ಬಗ್ಗೆ ಕೇಳಿದಾಗ, “ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ. ನಾನು ಭಾನುವಾರ ಹಿರಿಯ ಶಾಸಕರ ಮನೆಗೆ ಭೇಟಿ ನೀಡಿದ್ದೆ. ಅವರಿಗೆ ಯಾರ ಜೊತೆಯೋ ಜಗಳ ಇತ್ತಂತೆ ಎಂದು ಒಂದಷ್ಟು ಟಿವಿ ಮಾಧ್ಯಮಗಳು ನೂತನ ಕಥೆಯನ್ನು ಸೃಷ್ಟಿಸಿದ್ದವು. ಫಿರೋಜ್ ಸೇಠ್ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಅವರನ್ನು ಈ ಸಮಾವೇಶದ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ಜೊತೆ ಹೋಗಿ ಭೇಟಿ ಮಾಡಿದ್ದೆ. ಆದರೆ, ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು. ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ತಮ್ಮ ಘನತೆಯನ್ನು ಹಾಳು ಮಾಡಿಕೊಳ್ಳಬಾರದು” ಎಂದರು.

ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್‌ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ” ಎಂದು ಹೇಳಿದರು.

2023ರ ಚುನಾವಣೆಯಲ್ಲಿ ಫಿರೋಜ್ ಸೇಠ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರು ಕಾರಣ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ” ಎಂದರು.

“ಪಕ್ಷಕ್ಕಾಗಿ ಮೊದಲಿನಿಂದಲೂ ಹಲವಾರು ತ್ಯಾಗಗಳನ್ನು ಮಾಡಿದ್ದೇನೆ. ಧರಂಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ” ಎಂದರು.

ಎಷ್ಟು ದಿನ ಶಿವಕುಮಾರ್ ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಕೇಳಿದಾಗ, “ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ” ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಂವಿಧಾನ ಉಳಿಸುವುದು ನಮ್ಮ ಮೂಲ ಮಂತ್ರ

“ಮಹಾತ್ಮ ಗಾಂಧಿ ಅವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ಧೇಶ. ಸಾಮಾಜಿಕ ನ್ಯಾಯವನ್ನು ಉಳಿಸುವುದೇ ನಮ್ಮ ಮೂಲ ಮಂತ್ರ. ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದಿವರೆಸಲಾಗುವುದು” ಎಂದು ಹೇಳಿದರು.

“ಸುಮಾರು 60ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ನಾಯಕರು, ಅತಿಥಿಗಳು, ಸಂಸದರು, ಕಾರ್ಯಕಾರಿ ಸಮಿತಿ ಸದಸ್ಯರು ಬೆಳಗಾವಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಸಚಿವರು, ಶಾಸಕರು, ಹಿರಿಯ ನಾಯಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದು, ಒಂದಷ್ಟು ನಾಯಕರಿಗೆ ಮುಖ್ಯ ವೇದಿಕೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ದೆಹಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಕೇಳಿದಾಗ, “ನಾನೇ ಖುದ್ದಾಗಿ ದೆಹಲಿಗೆ ಹೋಗಿ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ನೀಡುವ ಪ್ಯಾರಿ ದೀದಿ ಯೋಜನೆ ಪ್ರಕಟಣೆ ಮಾಡಿದ್ದೆ” ಎಂದರು.

ಎಲ್ಲಾ ರಾಜ್ಯಗಳ ಸಿಎಂಗಳಿದ್ದು ಸಿದ್ದರಾಮಯ್ಯ ಅವರನ್ನು ಕೈ ಬಿಟ್ಟಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿದ್ದಾರೆ. ಎಲ್ಲಾ ಮಂತ್ರಿಗಳು, ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಎಐಸಿಸಿ ಸಮಯ ನೀಡಿದೆ” ಎಂದರು.

ಸುವರ್ಣಸೌಧದ ಗಾಂಧಿ ಪ್ರತಿಮೆಯನ್ನು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ಕೇಳಿದಾಗ, “ಇದನ್ನು ನಿರ್ವಹಿಸಿದ್ದು ಲೋಕೋಪಯೋಗಿ ಇಲಾಖೆ, ಶಿಲ್ಪಿ ಯಾರು ಎಂದು ನಾನು ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...