Homeಕರ್ನಾಟಕನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

- Advertisement -
- Advertisement -

“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ (ಜ.20) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷ, ಹೈಕಮಾಂಡ್ ಇದೆ. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಆಂತರಿಕ ಬೇಗುದಿ ಇಲ್ಲವೇ ಎಂಬ ಪ್ರಶ್ನೆಗೆ, “ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದು ಹೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೇ ಬದಲಾವಣೆ ಮಾಡಬೇಕು ಎಂದು ಕೆಲವು ಸಚಿವರು ರಾಹುಲ್ ಗಾಂಧಿ ಅವರಿಗೆ ದೂರು ನೀಡುತ್ತಿದ್ದಾರಂತೆ ಎಂಬ ಬಗ್ಗೆ ಕೇಳಿದಾಗ, “ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ. ನಾನು ಭಾನುವಾರ ಹಿರಿಯ ಶಾಸಕರ ಮನೆಗೆ ಭೇಟಿ ನೀಡಿದ್ದೆ. ಅವರಿಗೆ ಯಾರ ಜೊತೆಯೋ ಜಗಳ ಇತ್ತಂತೆ ಎಂದು ಒಂದಷ್ಟು ಟಿವಿ ಮಾಧ್ಯಮಗಳು ನೂತನ ಕಥೆಯನ್ನು ಸೃಷ್ಟಿಸಿದ್ದವು. ಫಿರೋಜ್ ಸೇಠ್ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಅವರನ್ನು ಈ ಸಮಾವೇಶದ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ಜೊತೆ ಹೋಗಿ ಭೇಟಿ ಮಾಡಿದ್ದೆ. ಆದರೆ, ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು. ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ತಮ್ಮ ಘನತೆಯನ್ನು ಹಾಳು ಮಾಡಿಕೊಳ್ಳಬಾರದು” ಎಂದರು.

ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್‌ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ” ಎಂದು ಹೇಳಿದರು.

2023ರ ಚುನಾವಣೆಯಲ್ಲಿ ಫಿರೋಜ್ ಸೇಠ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರು ಕಾರಣ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ” ಎಂದರು.

“ಪಕ್ಷಕ್ಕಾಗಿ ಮೊದಲಿನಿಂದಲೂ ಹಲವಾರು ತ್ಯಾಗಗಳನ್ನು ಮಾಡಿದ್ದೇನೆ. ಧರಂಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ” ಎಂದರು.

ಎಷ್ಟು ದಿನ ಶಿವಕುಮಾರ್ ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಕೇಳಿದಾಗ, “ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ” ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಂವಿಧಾನ ಉಳಿಸುವುದು ನಮ್ಮ ಮೂಲ ಮಂತ್ರ

“ಮಹಾತ್ಮ ಗಾಂಧಿ ಅವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ಧೇಶ. ಸಾಮಾಜಿಕ ನ್ಯಾಯವನ್ನು ಉಳಿಸುವುದೇ ನಮ್ಮ ಮೂಲ ಮಂತ್ರ. ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದಿವರೆಸಲಾಗುವುದು” ಎಂದು ಹೇಳಿದರು.

“ಸುಮಾರು 60ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ನಾಯಕರು, ಅತಿಥಿಗಳು, ಸಂಸದರು, ಕಾರ್ಯಕಾರಿ ಸಮಿತಿ ಸದಸ್ಯರು ಬೆಳಗಾವಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಸಚಿವರು, ಶಾಸಕರು, ಹಿರಿಯ ನಾಯಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದು, ಒಂದಷ್ಟು ನಾಯಕರಿಗೆ ಮುಖ್ಯ ವೇದಿಕೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ದೆಹಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಕೇಳಿದಾಗ, “ನಾನೇ ಖುದ್ದಾಗಿ ದೆಹಲಿಗೆ ಹೋಗಿ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ನೀಡುವ ಪ್ಯಾರಿ ದೀದಿ ಯೋಜನೆ ಪ್ರಕಟಣೆ ಮಾಡಿದ್ದೆ” ಎಂದರು.

ಎಲ್ಲಾ ರಾಜ್ಯಗಳ ಸಿಎಂಗಳಿದ್ದು ಸಿದ್ದರಾಮಯ್ಯ ಅವರನ್ನು ಕೈ ಬಿಟ್ಟಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿದ್ದಾರೆ. ಎಲ್ಲಾ ಮಂತ್ರಿಗಳು, ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಎಐಸಿಸಿ ಸಮಯ ನೀಡಿದೆ” ಎಂದರು.

ಸುವರ್ಣಸೌಧದ ಗಾಂಧಿ ಪ್ರತಿಮೆಯನ್ನು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ಕೇಳಿದಾಗ, “ಇದನ್ನು ನಿರ್ವಹಿಸಿದ್ದು ಲೋಕೋಪಯೋಗಿ ಇಲಾಖೆ, ಶಿಲ್ಪಿ ಯಾರು ಎಂದು ನಾನು ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...