Homeಮುಖಪುಟಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

- Advertisement -
- Advertisement -

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್ 10) ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳ ಹಿನ್ನೆಲೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮ ವರದಿಗಳಿಂದ ನನಗೆ ‘ವೀರ ಸಾವರ್ಕರ್ ಪ್ರಶಸ್ತಿ’ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದನ್ನು ಇಂದು ದೆಹಲಿಯಲ್ಲಿ ಪ್ರಧಾನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿ ಘೋಷಣೆಯ ಬಗ್ಗೆ ನನಗೆ ನಿನ್ನೆ ಕೇರಳದಲ್ಲಿರುವಾಗ ಗೊತ್ತಾಯಿತು. ಅಲ್ಲಿ ನಾನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿದ್ದೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ನನಗೆ ಅಂತಹ ಪ್ರಶಸ್ತಿಯ ಬಗ್ಗೆ ತಿಳಿದಿಲ್ಲ. ನಾನು ಅದನ್ನು ಸ್ವೀಕರಿಸಲು ಒಪ್ಪದೆ ನನ್ನ ಹೆಸರನ್ನು ಘೋಷಿಸುವುದು ಆಯೋಜಕರ ಬೇಜವಾಬ್ದಾರಿಯಾಗಿದೆ ಎಂದಿದ್ದೆ”

“ಅದರ ಹೊರತಾಗಿಯೂ, ಇಂದು ದೆಹಲಿಯಲ್ಲಿ, ಕೆಲವು ಮಾಧ್ಯಮಗಳು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇವೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟವಾಗಿ ಸ್ಪಷ್ಟಪಡಿಸಲು ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.

“ಪ್ರಶಸ್ತಿಯ ಸ್ವರೂಪ, ಅದನ್ನು ನೀಡುವ ಸಂಸ್ಥೆ ಅಥವಾ ಯಾವುದೇ ಇತರ ಸಂದರ್ಭೋಚಿತ ವಿವರಗಳ ಬಗ್ಗೆ ಗೊತ್ತಿಲ್ಲದಿರುವಾಗ, ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗುವ ಅಥವಾ ಪ್ರಶಸ್ತಿಯನ್ನು ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈರೇಂಜ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ಹೆಚ್‌ಆರ್‌ಡಿಎಸ್‌) ಎಂಬ ಸರ್ಕಾರೇತರ ಸಂಸ್ಥೆ ಶಶಿ ತರೂರ್ ಅವರಿಗೆ ‘ವೀರ್ ಸಾವರ್ಕರ್ ಇಂಟರ್ನ್ಯಾಷನಲ್ ಇಂಪ್ಯಾಕ್ಟ್ ಅವಾರ್ಡ್ 2025’ ನೀಡಲು ಮುಂದಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುಧವಾರ ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಹಾಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಮಾನವೀಯ ಸಂಪರ್ಕದಲ್ಲಿ ಬದಲಾವಣೆಗಾಗಿ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುತ್ತದೆ ಎಂದು ವರದಿ ಹೇಳಿದೆ.

ತರೂರ್‌ಗೆ ಮಾಹಿತಿ ನೀಡಿದ್ದೆವು

ಹೆಚ್‌ಆರ್‌ಡಿಎಸ್‌ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯದರ್ಶಿ ಅಜಿ ಕೃಷ್ಣನ್, ‘ರಾಷ್ಟ್ರ ನಿರ್ಮಾಣಕ್ಕಾಗಿ ಮಾಡಿದ ಕೆಲಸ’ ಪರಿಗಣಿಸಿ ತರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತರೂರ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಒಂದು ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ನಾವು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಪ್ರಶಸ್ತಿಯ ಬಗ್ಗೆ ತಿಳಿಸಿದ್ದೆವು ಮತ್ತು ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದೆವು. ಇದಲ್ಲದೆ ಎರಡು ವಾರಗಳ ಹಿಂದೆ ನಮ್ಮ ತೀರ್ಪುಗಾರರ ಉಸ್ತುವಾರಿ ರವಿಕಾಂತ್ ಅವರು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿದ್ದರು. ಯಾವುದೇ ಸಮಸ್ಯೆ ಇಲ್ಲದೆ ತರೂರ್ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ಪ್ರಶಸ್ತಿ ಸ್ವೀಕರಿಸಲು ಒಪ್ಪಿಕೊಂಡಿದ್ದರು. ಈಗ ಕಾಂಗ್ರೆಸ್‌ನ ಒತ್ತಡದಿಂದ ಅವರು ಅಲ್ಲಗಳೆಯುತ್ತಿರಬಹುದು ಎಂದು ಅಜಿ ಕೃಷ್ಣನ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ.

ತರೂರ್ ಮತ್ತು ಕಾಂಗ್ರೆಸ್‌

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಏಕೆಂದರೆ ಆತ ಬ್ರಿಟಿಷರ ಮುಂದೆ ತಲೆಬಾಗಿದವರು ಎಂದು ಹೇಳಿದ್ದರು.

ತರೂರ್ ಆ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ, ಆ ಪ್ರಶಸ್ತಿ ಸ್ವೀಕರಿಸುವುದು ಕಾಂಗ್ರೆಸ್‌ಗೆ ಅವಮಾನ ಮತ್ತು ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತದೆ ಎಂದು ಮುರಳೀಧರನ್ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...