Homeಮುಖಪುಟಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

- Advertisement -
- Advertisement -

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್ 10) ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳ ಹಿನ್ನೆಲೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮ ವರದಿಗಳಿಂದ ನನಗೆ ‘ವೀರ ಸಾವರ್ಕರ್ ಪ್ರಶಸ್ತಿ’ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದನ್ನು ಇಂದು ದೆಹಲಿಯಲ್ಲಿ ಪ್ರಧಾನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿ ಘೋಷಣೆಯ ಬಗ್ಗೆ ನನಗೆ ನಿನ್ನೆ ಕೇರಳದಲ್ಲಿರುವಾಗ ಗೊತ್ತಾಯಿತು. ಅಲ್ಲಿ ನಾನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿದ್ದೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ನನಗೆ ಅಂತಹ ಪ್ರಶಸ್ತಿಯ ಬಗ್ಗೆ ತಿಳಿದಿಲ್ಲ. ನಾನು ಅದನ್ನು ಸ್ವೀಕರಿಸಲು ಒಪ್ಪದೆ ನನ್ನ ಹೆಸರನ್ನು ಘೋಷಿಸುವುದು ಆಯೋಜಕರ ಬೇಜವಾಬ್ದಾರಿಯಾಗಿದೆ ಎಂದಿದ್ದೆ”

“ಅದರ ಹೊರತಾಗಿಯೂ, ಇಂದು ದೆಹಲಿಯಲ್ಲಿ, ಕೆಲವು ಮಾಧ್ಯಮಗಳು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇವೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟವಾಗಿ ಸ್ಪಷ್ಟಪಡಿಸಲು ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.

“ಪ್ರಶಸ್ತಿಯ ಸ್ವರೂಪ, ಅದನ್ನು ನೀಡುವ ಸಂಸ್ಥೆ ಅಥವಾ ಯಾವುದೇ ಇತರ ಸಂದರ್ಭೋಚಿತ ವಿವರಗಳ ಬಗ್ಗೆ ಗೊತ್ತಿಲ್ಲದಿರುವಾಗ, ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗುವ ಅಥವಾ ಪ್ರಶಸ್ತಿಯನ್ನು ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈರೇಂಜ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ಹೆಚ್‌ಆರ್‌ಡಿಎಸ್‌) ಎಂಬ ಸರ್ಕಾರೇತರ ಸಂಸ್ಥೆ ಶಶಿ ತರೂರ್ ಅವರಿಗೆ ‘ವೀರ್ ಸಾವರ್ಕರ್ ಇಂಟರ್ನ್ಯಾಷನಲ್ ಇಂಪ್ಯಾಕ್ಟ್ ಅವಾರ್ಡ್ 2025’ ನೀಡಲು ಮುಂದಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುಧವಾರ ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಹಾಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಮಾನವೀಯ ಸಂಪರ್ಕದಲ್ಲಿ ಬದಲಾವಣೆಗಾಗಿ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುತ್ತದೆ ಎಂದು ವರದಿ ಹೇಳಿದೆ.

ತರೂರ್‌ಗೆ ಮಾಹಿತಿ ನೀಡಿದ್ದೆವು

ಹೆಚ್‌ಆರ್‌ಡಿಎಸ್‌ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯದರ್ಶಿ ಅಜಿ ಕೃಷ್ಣನ್, ‘ರಾಷ್ಟ್ರ ನಿರ್ಮಾಣಕ್ಕಾಗಿ ಮಾಡಿದ ಕೆಲಸ’ ಪರಿಗಣಿಸಿ ತರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತರೂರ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಒಂದು ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ನಾವು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಪ್ರಶಸ್ತಿಯ ಬಗ್ಗೆ ತಿಳಿಸಿದ್ದೆವು ಮತ್ತು ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದೆವು. ಇದಲ್ಲದೆ ಎರಡು ವಾರಗಳ ಹಿಂದೆ ನಮ್ಮ ತೀರ್ಪುಗಾರರ ಉಸ್ತುವಾರಿ ರವಿಕಾಂತ್ ಅವರು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿದ್ದರು. ಯಾವುದೇ ಸಮಸ್ಯೆ ಇಲ್ಲದೆ ತರೂರ್ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ಪ್ರಶಸ್ತಿ ಸ್ವೀಕರಿಸಲು ಒಪ್ಪಿಕೊಂಡಿದ್ದರು. ಈಗ ಕಾಂಗ್ರೆಸ್‌ನ ಒತ್ತಡದಿಂದ ಅವರು ಅಲ್ಲಗಳೆಯುತ್ತಿರಬಹುದು ಎಂದು ಅಜಿ ಕೃಷ್ಣನ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ.

ತರೂರ್ ಮತ್ತು ಕಾಂಗ್ರೆಸ್‌

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಏಕೆಂದರೆ ಆತ ಬ್ರಿಟಿಷರ ಮುಂದೆ ತಲೆಬಾಗಿದವರು ಎಂದು ಹೇಳಿದ್ದರು.

ತರೂರ್ ಆ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ, ಆ ಪ್ರಶಸ್ತಿ ಸ್ವೀಕರಿಸುವುದು ಕಾಂಗ್ರೆಸ್‌ಗೆ ಅವಮಾನ ಮತ್ತು ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತದೆ ಎಂದು ಮುರಳೀಧರನ್ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ

ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ...

ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಝಿಯಾ ಅಂತ್ಯಕ್ರಿಯೆ : ಭಾರತದಿಂದ ಸಚಿವ ಜೈಶಂಕರ್ ಭಾಗಿ

ಮಂಗಳವಾರ (ಡಿ.30) ನಿಧನರಾದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ಢಾಕಾದಲ್ಲಿ ನಡೆಯಿತು. ಭಾರತದಿಂದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್ ಪಾಲ್ಗೊಂಡು ಪ್ರಧಾನಿ ಮೋದಿ...

ಇಂದೋರ್| ಕಲುಷಿತ ನೀರು ಸೇವಿಸಿ ಏಳು ಜನರು ಸಾವು; ದೃಢಪಡಿಸಿದ ಮೇಯರ್

ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ಬುಧವಾರ ದೃಢಪಡಿಸಿದರು. "ಭಾಗೀರಥಪುರ ಪ್ರದೇಶದಲ್ಲಿ ಅತಿಸಾರದಿಂದ ಮೂರು ಸಾವುಗಳು...

ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು...

ಚಲಿಸುತ್ತಿದ್ದ ವ್ಯಾನ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ರಸ್ತೆಗೆ ಎಸೆದ ಪ್ರಕರಣ : ಇಬ್ಬರ ಬಂಧನ

ಚಲಿಸುತ್ತಿದ್ದ ವ್ಯಾನ್‌ನಲ್ಲಿ 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಆಕೆಯನ್ನು ರಸ್ತೆಗೆ ಎಸೆದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್‌ನಲ್ಲಿ ನಡೆದಿದ್ದು, ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು...

ವಶಪಡಿಸಿಕೊಂಡ 200 ಕೆ.ಜಿ ಗಾಂಜಾ ಇಲಿಗಳು ತಿಂದಿವೆ ಎಂದ ಪೊಲೀಸರು : ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮೂರು ವರ್ಷಗಳ ಹಿಂದೆ ಜಾರ್ಖಂಡ್ ಪೊಲೀಸರು ವಾಹನವೊಂದನ್ನು ತಡೆದು, ಅದರಿಂದ ಭಾರೀ ಪ್ರಮಾಣದ ಮಾದಕ ವಸ್ತು ಗಾಂಜಾ ವಶಪಡಿಸಿಕೊಂಡಿದ್ದರು. 2024ರಲ್ಲಿ ಈ ಪ್ರಕರಣದ ವಿಚಾರಣೆ ನಡೆಯುವಾಗ, ವಶಪಡಿಸಿಕೊಂಡ ಗಾಂಜಾವನ್ನು ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿತ್ತು....

ಗಿಗ್ ಕಾರ್ಮಿಕರಿಂದ ಮತ್ತೆ ಮುಷ್ಕರ : ಹೊಸ ವರ್ಷದ ಸಂಜೆ ಆಹಾರ, ದಿನಸಿ ವಿತರಣೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ದೇಶದ ವಿವಿಧ ನಗರಗಳಲ್ಲಿ ಮುಷ್ಕರ ನಡೆಸಿರುವ ಗಿಗ್‌ ಕಾರ್ಮಿಕರು, ಹೊಸ ವರ್ಷದ ಸಂಜೆಯಾದ ಇಂದು (ಡಿ.31) ಮತ್ತೊಮ್ಮೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ನ್ಯಾಯಯುತ ಮತ್ತು...

ಉತ್ತರಾಖಂಡ: ಜಲವಿದ್ಯುತ್ ಯೋಜನೆಯ ಸುರಂಗದೊಳಗೆ ಎರಡು ಲೋಕೋ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು, ಸರಕು ರೈಲಿಗೆ ಡಿಕ್ಕಿ ಹೊಡೆದು ಸುಮಾರು...

ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ಧ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ : ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಲು ಆಗ್ರಹ

ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆಯ ಕುರಿತು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಅನುಷ್ಠಾನ ತಡೆ ಹಿಡಿಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳವಾರ (ಡಿ.30)...

ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ; ಧಾರವಾಡ ಕೃಷಿ ವಿವಿ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ರದ್ದು

ಧಾರವಾಡದ ಕೃಷಿ ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮಕ್ಕೆ ಹಿಂದುತ್ವ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ದಲಿತ ಸಂಘಟನೆ ಹಾಗೂ ಕೃಷಿ ವಿವಿ ಬೋರ್ಡ್ ಸದಸ್ಯರು ವಿವಿ...