Homeಮುಖಪುಟನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ "ಹಿಂದಿ ಗೊತ್ತಿಲ್ಲ ಹೋಗೋ, ನಾವು ಕನ್ನಡಿಗರು, ನಾವು ದ್ರಾವಿಡರು.." ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

- Advertisement -
- Advertisement -

ದಕ್ಷಿಣ ಭಾರತದಲ್ಲಿ ತೀವ್ರಗೊಂಡಿರುವ ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಬಹುಭಾಷ ನಟ ಪ್ರಕಾಶ್ ರಾಜ್ ದನಿಗೂಡಿಸಿದ್ದಾರೆ. ಕರ್ನಾಟಕದ ನಕ್ಷೆಯೊಳಗೆ ‘ನಂಗೆ ಹಿಂದಿ ಬರಲ್ಲ ಹೋಗ್ರಪ್ಪ’ ಎಂದು ಬರೆದಿರುವ ಟೀಶರ್ಟ್ ಧರಿಸಿರುವ ಫೋಟೊ ಟ್ವೀಟ್ ಮಾಡುವ ಮೂಲಕ ಅವರು ಸಂಚಲನ ಮೂಡಿಸಿದ್ದಾರೆ.

ಹಲವು ಭಾಷೆ ಬಲ್ಲೆ.. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ..ಆದರೆ ನನ್ನ ಕಲಿಕೆ..ನನ್ನ ಗ್ರಹಿಕೆ..ನನ್ನ ಬೇರು..ನನ್ನ ಶಕ್ತಿ…ನನ್ನ ಹೆಮ್ಮೆ..ನನ್ನ ಮಾತೃಭಾಷೆ ಕನ್ನಡ #ಹಿಂದಿ_ಹೇರಿಕೆ_ಬೇಡ ..NO #HindiImposition #justasking ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಳೆ ಸೆಪ್ಟಂಬರ್ 14 ಹಿಂದಿ ದಿವಸ್. ಕೇಂದ್ರದ ಮುತುವರ್ಜಿಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಬಹಳ ವರ್ಷಗಳಿಂದಲೂ ಕನ್ನಡಿಗರು, ದಕ್ಷಿಣ ಭಾರತೀಯರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಸಂವಿಧಾನ ಮಾನ್ಯಮಾಡಿರುವ 22 ಭಾಷೆಗಳಿಗೂ ಸಮಾನ ಆದ್ಯತೆ ನೀಡಬೇಕೆಂಬುದು ಅವರೆಲ್ಲರೂ ಆಗ್ರಹವಾಗಿದೆ.

ಈ ವರ್ಷವೂ ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

PC: Kanimozhi@twitter

ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ ಕೆಲ ಚಿತ್ರ ನಟರು ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದಾರೆ. ಆ ದಿನಗಳು ಖ್ಯಾತಿಯ ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ “ಹಿಂದಿ ಗೊತ್ತಿಲ್ಲ ಹೋಗೋ,
ನಾವು ಕನ್ನಡಿಗರು, ನಾವು ದ್ರಾವಿಡರು..” ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

ಕರ್ನಾಟಕದಲ್ಲಿ ಈ ಹಿಂದೆ ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...