Homeಮುಖಪುಟನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ "ಹಿಂದಿ ಗೊತ್ತಿಲ್ಲ ಹೋಗೋ, ನಾವು ಕನ್ನಡಿಗರು, ನಾವು ದ್ರಾವಿಡರು.." ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

- Advertisement -
- Advertisement -

ದಕ್ಷಿಣ ಭಾರತದಲ್ಲಿ ತೀವ್ರಗೊಂಡಿರುವ ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಬಹುಭಾಷ ನಟ ಪ್ರಕಾಶ್ ರಾಜ್ ದನಿಗೂಡಿಸಿದ್ದಾರೆ. ಕರ್ನಾಟಕದ ನಕ್ಷೆಯೊಳಗೆ ‘ನಂಗೆ ಹಿಂದಿ ಬರಲ್ಲ ಹೋಗ್ರಪ್ಪ’ ಎಂದು ಬರೆದಿರುವ ಟೀಶರ್ಟ್ ಧರಿಸಿರುವ ಫೋಟೊ ಟ್ವೀಟ್ ಮಾಡುವ ಮೂಲಕ ಅವರು ಸಂಚಲನ ಮೂಡಿಸಿದ್ದಾರೆ.

ಹಲವು ಭಾಷೆ ಬಲ್ಲೆ.. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ..ಆದರೆ ನನ್ನ ಕಲಿಕೆ..ನನ್ನ ಗ್ರಹಿಕೆ..ನನ್ನ ಬೇರು..ನನ್ನ ಶಕ್ತಿ…ನನ್ನ ಹೆಮ್ಮೆ..ನನ್ನ ಮಾತೃಭಾಷೆ ಕನ್ನಡ #ಹಿಂದಿ_ಹೇರಿಕೆ_ಬೇಡ ..NO #HindiImposition #justasking ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಳೆ ಸೆಪ್ಟಂಬರ್ 14 ಹಿಂದಿ ದಿವಸ್. ಕೇಂದ್ರದ ಮುತುವರ್ಜಿಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಬಹಳ ವರ್ಷಗಳಿಂದಲೂ ಕನ್ನಡಿಗರು, ದಕ್ಷಿಣ ಭಾರತೀಯರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಸಂವಿಧಾನ ಮಾನ್ಯಮಾಡಿರುವ 22 ಭಾಷೆಗಳಿಗೂ ಸಮಾನ ಆದ್ಯತೆ ನೀಡಬೇಕೆಂಬುದು ಅವರೆಲ್ಲರೂ ಆಗ್ರಹವಾಗಿದೆ.

ಈ ವರ್ಷವೂ ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

PC: Kanimozhi@twitter

ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ ಕೆಲ ಚಿತ್ರ ನಟರು ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದಾರೆ. ಆ ದಿನಗಳು ಖ್ಯಾತಿಯ ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ “ಹಿಂದಿ ಗೊತ್ತಿಲ್ಲ ಹೋಗೋ,
ನಾವು ಕನ್ನಡಿಗರು, ನಾವು ದ್ರಾವಿಡರು..” ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

ಕರ್ನಾಟಕದಲ್ಲಿ ಈ ಹಿಂದೆ ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...