Homeಮುಖಪುಟನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ "ಹಿಂದಿ ಗೊತ್ತಿಲ್ಲ ಹೋಗೋ, ನಾವು ಕನ್ನಡಿಗರು, ನಾವು ದ್ರಾವಿಡರು.." ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

- Advertisement -
- Advertisement -

ದಕ್ಷಿಣ ಭಾರತದಲ್ಲಿ ತೀವ್ರಗೊಂಡಿರುವ ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಬಹುಭಾಷ ನಟ ಪ್ರಕಾಶ್ ರಾಜ್ ದನಿಗೂಡಿಸಿದ್ದಾರೆ. ಕರ್ನಾಟಕದ ನಕ್ಷೆಯೊಳಗೆ ‘ನಂಗೆ ಹಿಂದಿ ಬರಲ್ಲ ಹೋಗ್ರಪ್ಪ’ ಎಂದು ಬರೆದಿರುವ ಟೀಶರ್ಟ್ ಧರಿಸಿರುವ ಫೋಟೊ ಟ್ವೀಟ್ ಮಾಡುವ ಮೂಲಕ ಅವರು ಸಂಚಲನ ಮೂಡಿಸಿದ್ದಾರೆ.

ಹಲವು ಭಾಷೆ ಬಲ್ಲೆ.. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ..ಆದರೆ ನನ್ನ ಕಲಿಕೆ..ನನ್ನ ಗ್ರಹಿಕೆ..ನನ್ನ ಬೇರು..ನನ್ನ ಶಕ್ತಿ…ನನ್ನ ಹೆಮ್ಮೆ..ನನ್ನ ಮಾತೃಭಾಷೆ ಕನ್ನಡ #ಹಿಂದಿ_ಹೇರಿಕೆ_ಬೇಡ ..NO #HindiImposition #justasking ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಳೆ ಸೆಪ್ಟಂಬರ್ 14 ಹಿಂದಿ ದಿವಸ್. ಕೇಂದ್ರದ ಮುತುವರ್ಜಿಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಬಹಳ ವರ್ಷಗಳಿಂದಲೂ ಕನ್ನಡಿಗರು, ದಕ್ಷಿಣ ಭಾರತೀಯರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಸಂವಿಧಾನ ಮಾನ್ಯಮಾಡಿರುವ 22 ಭಾಷೆಗಳಿಗೂ ಸಮಾನ ಆದ್ಯತೆ ನೀಡಬೇಕೆಂಬುದು ಅವರೆಲ್ಲರೂ ಆಗ್ರಹವಾಗಿದೆ.

ಈ ವರ್ಷವೂ ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

PC: Kanimozhi@twitter

ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ ಕೆಲ ಚಿತ್ರ ನಟರು ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದಾರೆ. ಆ ದಿನಗಳು ಖ್ಯಾತಿಯ ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ “ಹಿಂದಿ ಗೊತ್ತಿಲ್ಲ ಹೋಗೋ,
ನಾವು ಕನ್ನಡಿಗರು, ನಾವು ದ್ರಾವಿಡರು..” ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

ಕರ್ನಾಟಕದಲ್ಲಿ ಈ ಹಿಂದೆ ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...