Homeಅಂಕಣಗಳು“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” – ಥೂತ್ತೇರಿ ಯಾಹೂ

- Advertisement -
- Advertisement -

ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಯಡೂರಪ್ಪ ಸರಕಾರದ ಸಚಿವರು ಬರೋಬರಿ ಎರಡು ಸಾವಿರ ಕೋಟಿಯನ್ನು ಈಗಾಗಲೇ ಭರ್ತಿಯಾಗಿದ್ದ ತಮ್ಮ ಜೋಬುಗಳಿಗೆ ತುರುಕಿದ್ದಾರೆ ಎಂಬ ಸಿದ್ದರಾಮಯ್ಯನ ಆರೋಪಕ್ಕೆ ಸಂಬಂಧಿಸಿದಂತೆ, ಅವರನ್ನೆ ಕೇಳಿದರೆ ಹೇಗೆ ಅನ್ನಿಸಿ, ಯಾಹೂ ಬದಲಿಗೆ ಟಿವಿ ನಿರ್ವಾಹಕನ ಹೆಸರಲ್ಲಿ ಕೇಳಿದರೆ ಹೇಗೆ ಅನ್ನಿಸಿದ್ದರಿಂದ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್ ಠೊನ್ “ಕರಿಯ ಕಂಬಳಿ ಗದ್ದಿಗೆ ಮಾಡಿ ವೀರದೊಳ್ಳ ತಂದಿರಿಸಿದರೊ”………. “ಹಲೊ ಯಾರು”

“ನಾನು ಸಾರ್ ಟಿವಿ ಸಿಕ್ಸ್‍ನಿಂದ ಮಾತಾಡ್ತಯಿರೋದು.”

“ಟಿವಿ ಸಿಗಸೆ.”

“ಸಿಕ್ಸ್ ಸಾರ್ ಆರು.”

“ಅದ್ಯಾವುದ್ರೀ.”

“ನೈನ್ ಉಲ್ಟಾ ಬರದ್ರೆ ಸಿಕ್ಸು ಸಾರ್.”

“ಯರಡು ನಿಮ್ದೆಯಾ.”

“ಹೌದು ಸಾರ್ ಒಂದೆರಡು ಪ್ರಶ್ನೆ ಕೇಳ್ತಿನಿ ಸಾರ್.”

“ಏನ್ನಿನ್ನೆಸರು.”

“ಶ್ಯಾನುಭೊಗ್ ಹೆಮ್ಮಿಗನೂರು ಸಾರ್.”

“ಶ್ಯಾನುಭೊಗರ ಪೈಕಿನಾ.”

“ಹೌದು ಸಾರ್.”

“ಯಲ್ಲ ಊರು ಬುಟ್ಟು ಬಂದು ಟಿವಿವಳಿಕೆ ಸೇರ್ಕಂಡುಬುಟ್ಟಿದ್ದಿರಿ.”

“ಹೌದು ಸಾರ್.”

“ಅದೇನು ಪ್ರಶ್ನೆ ಕೇಳು.”

“ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಈ ಸರಕಾರ ಭ್ರಷ್ಟಾಚಾರ ಮಾಡಿದೆ ಅಂತ ತಾವು ಆಪಾದನೆ ಮಾಡಿದ್ದಿರಿ ಸಾರ್, ಇದು ನಿಮಗೆಂಗೆ ಗೊತ್ತಾಯ್ತು ಸಾರ್.”

“ನಾನು ಮುಖ್ಯಮಂತ್ರಿಯಾಗಿದ್ದೊನು ಐದು ವರ್ಷ ಸರಕಾರ ನಡೆಸಿದ್ದೀನಿ.”

“ಅಂದ್ರೆ ಭ್ರಷ್ಟಾಚಾರ ಹೇಗೆ ನಡೆಯುತ್ತೆ ಅಂತ ನಿಮಗೆ ಗೊತ್ತಲ್ಲವ ಸಾರ್.”

“ಹೌದು ಗೊತ್ತು.”

“ನೀವು ಆಪಾದನೆ ಮಾಡ್ತಾಯಿರೊ ಮಂತ್ರಿಗಳು ನಿಮ್ಮ ಜೊತೆಲೂ ಇದ್ರಲವ ಸಾರ್.”

“ಇದ್ರು ಈಗಿಲ್ಲ ಅಲ್ಲಿಗೋಗಿ ಮಂತ್ರಿಗಳಾಗ್ಯವುರೆ ಹಾಗಂತ ಸುಮ್ಮನಿರಕ್ಕಾಗಲ್ಲ.”

“ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿತ್ತಲವ್ ಸಾರ್.”

“ಯಾರು ಮಾಡಿದ್ರ್ರು.”

“ಅಂಜನೇಯರ ಮೇಲೆ ದೂರು ಬಂದಿತ್ತು.”

“ಆತ ಸದನದಲ್ಲೇ ಉತ್ತರ ಕೊಟ್ಟ.”

“ಭ್ರಷ್ಟಾಚಾರ ಆಪಾದನೆ ಆಮೇಲೆ ಮಾಡಿ ಬೇಕಾದ್ರೆ ಸದನದಲ್ಲಿ ಪ್ರಶ್ನೆ ಮಾಡಿ ಈಗ ವಿಪತ್ತು ನಿರ್ವಹಿಸಿ ಅಂತ ದೇವೇಗೌಡ್ರು ಹೇಳಿದಾರೆ ಸಾರ್.”

“ಸರಿಯಯ್ಯಾ ವಿಪ್ಪತ್ತು ನಿರ್ವಹಿಸುವವಾಗಲೇ ನಡೆದಿರೋ ಅಕ್ರಮ ಕೇಳಬಾರದಾ.”

“ಏನಾಧಾರ ಇಟಗಂಡು ಕೇಳ್ತಿರಿ ಅಂತಾಯಿದಾರೆ.”

“ನಾನು ವಿರೊಧಪಕ್ಷದ ನಾಯಕ. ಆಪಾದನೆ ಮಾಡಬೇಕಾದ್ರೆ ಸಾಕ್ಷಾಧಾರ ಇಟಗಂಡೇ ಕೇಳ್ತಿನಿ.”

“ನಿಮ್ಮ ಆಪಾದನೆಗಳಿಗೆ ಕಾಂಗ್ರೆಸ್ಸಲ್ಲೇ ಸಹಮತ ಇಲ್ಲವಂತಲ್ಲಾ ಸಾರ್.”

“ಈ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಸಹಮತ ಇದೆ.”

“ಡಿ.ಕೆಶಿವಕುಮಾರ್ ನಿಮ್ಮ ಸಂಬಂಧ ಹೇಗಿದೆ ಸಾರ್.”

“ಚನ್ನಾಗಿದ್ದಿವಿ.”

“ನೀವು ವಿರೊಧಪಕ್ಷದ ನಾಯಕರು, ಅವರು ಪಾರ್ಟಿ ಅಧ್ಯಕ್ಷರು. ಭ್ರಷ್ಟಾಚಾರ ಆಪಾದನೆಯಲ್ಲಿ ಸಹಮತ ಇಲ್ಲ ಅಂತ ಸುದ್ದಿ ಇದೆ ಸಾರ್.”

“ನೋಡೋ ಶಾನುಭೊಗ, ನೀನು ಫೋನ್ ಮಾಡಿದ್ದು ಎಡೂರಪ್ಪನ ಸರಕಾರದಲ್ಲಿ ಕೋವಿಡ್ ನಿರ್ವಹಣೆಗೆ ಖರೀದಿ ಮಾಡಿದ ಸಾಮಾಗ್ರಿ ವಿಷಯದಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರದ ವಿಷಯ ಕೇಳಕ್ಕೆ, ಅದು ಬುಟ್ಟು ನಮ್ಮ ಪಾರ್ಟಿ ವಿಷಯ ಕೇಳ್ತಿಯಲ್ಲ ನಾವೇನು ಪವರಲಿದ್ದಿವಾ.”

“ಪವರಿಗೆ ಬರ್ತಿರ ಸಾರ್.”

“ಅದಾಮೇಲೆ ಕಣಯ್ಯ, ಈ ಕೋವಿಡ್‍ನಲ್ಲಿ ಉಳುದು ಬದುಕಿದ ಮೇಲಿನ ಮಾತಾಲ್ಲವಾ.”

“ಅಂತೂ ಮುಖ್ಯಮಂತ್ರಿ ಸ್ಪರ್ಧೆಲಿ ನೀವೂ ಇದೀರಿ.”

“ಲೇ ಶಾನುಭೊಗ, ಎಷ್ಟೇ ಆಗಲಿ ಹಳ್ಳಿ ಜನಗಳಿಗೆ ಮಂಕುಬೂದಿ ಎರಚಿ ನೂರಾರು ವರ್ಷ ಹಳ್ಳಿ ಆಳಿದೋನು ನೀನು ಅಂಗಂತ ಈಗ್ಲು ನನ್ನನ್ನ ಯಾಮಾರಸಕ್ಕೆ ಬರಬೇಡ.”

“ನಾನೇನು ತಪ್ಪು ಮಾತಾಡಿದ್ನ ಸಾರ್.”

“ತಪ್ಪಲ್ಲ ನಿಮ್ಮ ಕಪಟತನ ಜನಗಳಿಗೆ ಗೊತ್ತಿಲ್ಲ ಅಂತ ತಿಳಕೊಬ್ಯಾಡ ವಿರೊಧಪಕ್ಷದ ಕೆಲಸನ ನೀವೂಕೂಡ ಮಾಡಬೇಕಾಗಿತ್ತು. ಸರಕಾರನ ಪ್ರಶ್ನೆ ಮಾಡಬೇಕಾಗಿತ್ತು. ಖರೀದಿ ಮಾಡಿದ ಪದಾರ್ಥನ ತಂದು ಜನಗಳಿಗೆ ಕೊಡಬೇಕಾಗಿತ್ತು. ಅದನ್ಯಲ್ಲ ಬಿಟ್ಟು ದೇಶಾಗೃಹಗಳಿಗೆ ಕ್ಯಾಮರ ಹೊತ್ತುಗಂಡು ಹೋಗ್ತಾಯಿದ್ದಿರಿ. ಈ ಕಡೆ ರಾಮುಲು, ಸುಧಾಕರ, ಆಶೋಕನ್ನ ಪ್ರಶ್ನೆ ಮಾಡದು ಬುಟ್ಟು ನನ್ನನ್ನ ಕುರುತು ನನ್ನ ಪಾರ್ಟಿ ವಿಷಯ ಕೇಳ್ತಯಿದ್ದಿ, ಕೇಳಿದ ಜನಗಳು ನಗತಾಯಿಲ್ಲ ಅಂತ ತಿಳಕೊಂಡಿದ್ದಿಯಾ.”

“ಆಯ್ತು ಸಾರ್ ಭ್ರಷ್ಟಾಚಾರ ನಡೆದಿದೆ ಅಂತ ನೀವು ಹೇಳ್ತಿರ, ಅಂತದ್ದೇನು ಆಗಿಲ್ಲ ಅಂತ ಅವುರುಳ್ತಾಯಿದಾರೆ. ನೀವೆ ಪವರಲ್ಲಿದ್ರೆ ಏನು ಮಾಡತಿದ್ರೀ?”

“ಒಂದು ವೇಳೆ ನಾನೇ ಇದ್ರೆ ಸಮಸ್ಯೆ ಬಗ್ಗೆ ಚನ್ನಾಗಿ ತಿಳಕಂಡಿರೋರು ಜೊತೆ ಮಾತಾಡತಿದ್ದೆ. ಅವುರ ಅನುಭವನ ಬಳಸಿಕೊಳ್ತಿದ್ದೆ. ಅನಾಹುತಗಳಿಗೂ ಮೊದ್ಲು ತಯಾರಿ ನಡೆಸತಿದ್ದೆ. ನಮ್ಮ ತಪ್ಪುಗಳನ್ನ 24 ಗಂಟೆ ತೋರಸೊ ನಿಮ್ಮನ್ನ ವಿಶ್ವಾಸಕ್ಕೆ ತಗಳತಿದ್ದೆ. ಆದ್ರೆ ನಿಮ್ಮಂತ ಸುಳ್ಳು ಜನನ ನನ್ನ ಜನುಮದಲ್ಲಿ ನೋಡಿಲ್ಲ.”

“ಯಾಕ್ ಸಾರ್ ಹಾಗಂತಿರಿ.”

“ಇಂದಿರಾ ಕ್ಯಾಂಟೀನಲ್ಲಿ ಜಿರ್ಲೆ ಸಿಕ್ಕುತು ಅಂತ ಅದ ತಂದು ತೋರಿಸಿದ್ರ, ಸಿದ್ದರಾಮಯ್ಯ ಕೊಡ್ತಾಯಿರದು ನಿಜವಾದ ಅಕ್ಕಿಯಲ್ಲ ಪ್ಲಾಸ್ಟಿಕ್ ಅಕ್ಕಿ ಅಂತ ಚರ್ಚೆ ಮಾಡಿದ್ರಿ, ಇಲ್ಲದಕ್ಕೆ ಬಣ್ಣಕಟ್ಟಿ ಹೇಳತಿದ್ರಿ, ಆದ್ರೆ ಇವತ್ತು ನೀವ್ಯಲ್ಲ ಧ್ವನಿನೆ ಕಳಕಂಡಿದ್ದಿರಿ. ಒಂಥರ ಸತ್ತೊಗಿದ್ದಿರಿ, ಆದ್ರೆ ತಿಳಕಳಿ ನೀವಿಲ್ಲದೆನೂ ದೇಶ ನಡೆಯುತ್ತೆ. ಆದ್ರೆ ಸರಿಯಾಗಿ ನಡೆಯಕ್ಕೆ ನೀವು ಬುಡಲ್ಲ. ಅಲವೇನೂ ಶ್ಯಾನಭೋಗ.”

“ಸಾರಿ ಸಾರ್.”


ಇದನ್ನು ಓದಿ: ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...