Homeಅಂಕಣಗಳು“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” – ಥೂತ್ತೇರಿ ಯಾಹೂ

- Advertisement -
- Advertisement -

ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಯಡೂರಪ್ಪ ಸರಕಾರದ ಸಚಿವರು ಬರೋಬರಿ ಎರಡು ಸಾವಿರ ಕೋಟಿಯನ್ನು ಈಗಾಗಲೇ ಭರ್ತಿಯಾಗಿದ್ದ ತಮ್ಮ ಜೋಬುಗಳಿಗೆ ತುರುಕಿದ್ದಾರೆ ಎಂಬ ಸಿದ್ದರಾಮಯ್ಯನ ಆರೋಪಕ್ಕೆ ಸಂಬಂಧಿಸಿದಂತೆ, ಅವರನ್ನೆ ಕೇಳಿದರೆ ಹೇಗೆ ಅನ್ನಿಸಿ, ಯಾಹೂ ಬದಲಿಗೆ ಟಿವಿ ನಿರ್ವಾಹಕನ ಹೆಸರಲ್ಲಿ ಕೇಳಿದರೆ ಹೇಗೆ ಅನ್ನಿಸಿದ್ದರಿಂದ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್ ಠೊನ್ “ಕರಿಯ ಕಂಬಳಿ ಗದ್ದಿಗೆ ಮಾಡಿ ವೀರದೊಳ್ಳ ತಂದಿರಿಸಿದರೊ”………. “ಹಲೊ ಯಾರು”

“ನಾನು ಸಾರ್ ಟಿವಿ ಸಿಕ್ಸ್‍ನಿಂದ ಮಾತಾಡ್ತಯಿರೋದು.”

“ಟಿವಿ ಸಿಗಸೆ.”

“ಸಿಕ್ಸ್ ಸಾರ್ ಆರು.”

“ಅದ್ಯಾವುದ್ರೀ.”

“ನೈನ್ ಉಲ್ಟಾ ಬರದ್ರೆ ಸಿಕ್ಸು ಸಾರ್.”

“ಯರಡು ನಿಮ್ದೆಯಾ.”

“ಹೌದು ಸಾರ್ ಒಂದೆರಡು ಪ್ರಶ್ನೆ ಕೇಳ್ತಿನಿ ಸಾರ್.”

“ಏನ್ನಿನ್ನೆಸರು.”

“ಶ್ಯಾನುಭೊಗ್ ಹೆಮ್ಮಿಗನೂರು ಸಾರ್.”

“ಶ್ಯಾನುಭೊಗರ ಪೈಕಿನಾ.”

“ಹೌದು ಸಾರ್.”

“ಯಲ್ಲ ಊರು ಬುಟ್ಟು ಬಂದು ಟಿವಿವಳಿಕೆ ಸೇರ್ಕಂಡುಬುಟ್ಟಿದ್ದಿರಿ.”

“ಹೌದು ಸಾರ್.”

“ಅದೇನು ಪ್ರಶ್ನೆ ಕೇಳು.”

“ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಈ ಸರಕಾರ ಭ್ರಷ್ಟಾಚಾರ ಮಾಡಿದೆ ಅಂತ ತಾವು ಆಪಾದನೆ ಮಾಡಿದ್ದಿರಿ ಸಾರ್, ಇದು ನಿಮಗೆಂಗೆ ಗೊತ್ತಾಯ್ತು ಸಾರ್.”

“ನಾನು ಮುಖ್ಯಮಂತ್ರಿಯಾಗಿದ್ದೊನು ಐದು ವರ್ಷ ಸರಕಾರ ನಡೆಸಿದ್ದೀನಿ.”

“ಅಂದ್ರೆ ಭ್ರಷ್ಟಾಚಾರ ಹೇಗೆ ನಡೆಯುತ್ತೆ ಅಂತ ನಿಮಗೆ ಗೊತ್ತಲ್ಲವ ಸಾರ್.”

“ಹೌದು ಗೊತ್ತು.”

“ನೀವು ಆಪಾದನೆ ಮಾಡ್ತಾಯಿರೊ ಮಂತ್ರಿಗಳು ನಿಮ್ಮ ಜೊತೆಲೂ ಇದ್ರಲವ ಸಾರ್.”

“ಇದ್ರು ಈಗಿಲ್ಲ ಅಲ್ಲಿಗೋಗಿ ಮಂತ್ರಿಗಳಾಗ್ಯವುರೆ ಹಾಗಂತ ಸುಮ್ಮನಿರಕ್ಕಾಗಲ್ಲ.”

“ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿತ್ತಲವ್ ಸಾರ್.”

“ಯಾರು ಮಾಡಿದ್ರ್ರು.”

“ಅಂಜನೇಯರ ಮೇಲೆ ದೂರು ಬಂದಿತ್ತು.”

“ಆತ ಸದನದಲ್ಲೇ ಉತ್ತರ ಕೊಟ್ಟ.”

“ಭ್ರಷ್ಟಾಚಾರ ಆಪಾದನೆ ಆಮೇಲೆ ಮಾಡಿ ಬೇಕಾದ್ರೆ ಸದನದಲ್ಲಿ ಪ್ರಶ್ನೆ ಮಾಡಿ ಈಗ ವಿಪತ್ತು ನಿರ್ವಹಿಸಿ ಅಂತ ದೇವೇಗೌಡ್ರು ಹೇಳಿದಾರೆ ಸಾರ್.”

“ಸರಿಯಯ್ಯಾ ವಿಪ್ಪತ್ತು ನಿರ್ವಹಿಸುವವಾಗಲೇ ನಡೆದಿರೋ ಅಕ್ರಮ ಕೇಳಬಾರದಾ.”

“ಏನಾಧಾರ ಇಟಗಂಡು ಕೇಳ್ತಿರಿ ಅಂತಾಯಿದಾರೆ.”

“ನಾನು ವಿರೊಧಪಕ್ಷದ ನಾಯಕ. ಆಪಾದನೆ ಮಾಡಬೇಕಾದ್ರೆ ಸಾಕ್ಷಾಧಾರ ಇಟಗಂಡೇ ಕೇಳ್ತಿನಿ.”

“ನಿಮ್ಮ ಆಪಾದನೆಗಳಿಗೆ ಕಾಂಗ್ರೆಸ್ಸಲ್ಲೇ ಸಹಮತ ಇಲ್ಲವಂತಲ್ಲಾ ಸಾರ್.”

“ಈ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಸಹಮತ ಇದೆ.”

“ಡಿ.ಕೆಶಿವಕುಮಾರ್ ನಿಮ್ಮ ಸಂಬಂಧ ಹೇಗಿದೆ ಸಾರ್.”

“ಚನ್ನಾಗಿದ್ದಿವಿ.”

“ನೀವು ವಿರೊಧಪಕ್ಷದ ನಾಯಕರು, ಅವರು ಪಾರ್ಟಿ ಅಧ್ಯಕ್ಷರು. ಭ್ರಷ್ಟಾಚಾರ ಆಪಾದನೆಯಲ್ಲಿ ಸಹಮತ ಇಲ್ಲ ಅಂತ ಸುದ್ದಿ ಇದೆ ಸಾರ್.”

“ನೋಡೋ ಶಾನುಭೊಗ, ನೀನು ಫೋನ್ ಮಾಡಿದ್ದು ಎಡೂರಪ್ಪನ ಸರಕಾರದಲ್ಲಿ ಕೋವಿಡ್ ನಿರ್ವಹಣೆಗೆ ಖರೀದಿ ಮಾಡಿದ ಸಾಮಾಗ್ರಿ ವಿಷಯದಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರದ ವಿಷಯ ಕೇಳಕ್ಕೆ, ಅದು ಬುಟ್ಟು ನಮ್ಮ ಪಾರ್ಟಿ ವಿಷಯ ಕೇಳ್ತಿಯಲ್ಲ ನಾವೇನು ಪವರಲಿದ್ದಿವಾ.”

“ಪವರಿಗೆ ಬರ್ತಿರ ಸಾರ್.”

“ಅದಾಮೇಲೆ ಕಣಯ್ಯ, ಈ ಕೋವಿಡ್‍ನಲ್ಲಿ ಉಳುದು ಬದುಕಿದ ಮೇಲಿನ ಮಾತಾಲ್ಲವಾ.”

“ಅಂತೂ ಮುಖ್ಯಮಂತ್ರಿ ಸ್ಪರ್ಧೆಲಿ ನೀವೂ ಇದೀರಿ.”

“ಲೇ ಶಾನುಭೊಗ, ಎಷ್ಟೇ ಆಗಲಿ ಹಳ್ಳಿ ಜನಗಳಿಗೆ ಮಂಕುಬೂದಿ ಎರಚಿ ನೂರಾರು ವರ್ಷ ಹಳ್ಳಿ ಆಳಿದೋನು ನೀನು ಅಂಗಂತ ಈಗ್ಲು ನನ್ನನ್ನ ಯಾಮಾರಸಕ್ಕೆ ಬರಬೇಡ.”

“ನಾನೇನು ತಪ್ಪು ಮಾತಾಡಿದ್ನ ಸಾರ್.”

“ತಪ್ಪಲ್ಲ ನಿಮ್ಮ ಕಪಟತನ ಜನಗಳಿಗೆ ಗೊತ್ತಿಲ್ಲ ಅಂತ ತಿಳಕೊಬ್ಯಾಡ ವಿರೊಧಪಕ್ಷದ ಕೆಲಸನ ನೀವೂಕೂಡ ಮಾಡಬೇಕಾಗಿತ್ತು. ಸರಕಾರನ ಪ್ರಶ್ನೆ ಮಾಡಬೇಕಾಗಿತ್ತು. ಖರೀದಿ ಮಾಡಿದ ಪದಾರ್ಥನ ತಂದು ಜನಗಳಿಗೆ ಕೊಡಬೇಕಾಗಿತ್ತು. ಅದನ್ಯಲ್ಲ ಬಿಟ್ಟು ದೇಶಾಗೃಹಗಳಿಗೆ ಕ್ಯಾಮರ ಹೊತ್ತುಗಂಡು ಹೋಗ್ತಾಯಿದ್ದಿರಿ. ಈ ಕಡೆ ರಾಮುಲು, ಸುಧಾಕರ, ಆಶೋಕನ್ನ ಪ್ರಶ್ನೆ ಮಾಡದು ಬುಟ್ಟು ನನ್ನನ್ನ ಕುರುತು ನನ್ನ ಪಾರ್ಟಿ ವಿಷಯ ಕೇಳ್ತಯಿದ್ದಿ, ಕೇಳಿದ ಜನಗಳು ನಗತಾಯಿಲ್ಲ ಅಂತ ತಿಳಕೊಂಡಿದ್ದಿಯಾ.”

“ಆಯ್ತು ಸಾರ್ ಭ್ರಷ್ಟಾಚಾರ ನಡೆದಿದೆ ಅಂತ ನೀವು ಹೇಳ್ತಿರ, ಅಂತದ್ದೇನು ಆಗಿಲ್ಲ ಅಂತ ಅವುರುಳ್ತಾಯಿದಾರೆ. ನೀವೆ ಪವರಲ್ಲಿದ್ರೆ ಏನು ಮಾಡತಿದ್ರೀ?”

“ಒಂದು ವೇಳೆ ನಾನೇ ಇದ್ರೆ ಸಮಸ್ಯೆ ಬಗ್ಗೆ ಚನ್ನಾಗಿ ತಿಳಕಂಡಿರೋರು ಜೊತೆ ಮಾತಾಡತಿದ್ದೆ. ಅವುರ ಅನುಭವನ ಬಳಸಿಕೊಳ್ತಿದ್ದೆ. ಅನಾಹುತಗಳಿಗೂ ಮೊದ್ಲು ತಯಾರಿ ನಡೆಸತಿದ್ದೆ. ನಮ್ಮ ತಪ್ಪುಗಳನ್ನ 24 ಗಂಟೆ ತೋರಸೊ ನಿಮ್ಮನ್ನ ವಿಶ್ವಾಸಕ್ಕೆ ತಗಳತಿದ್ದೆ. ಆದ್ರೆ ನಿಮ್ಮಂತ ಸುಳ್ಳು ಜನನ ನನ್ನ ಜನುಮದಲ್ಲಿ ನೋಡಿಲ್ಲ.”

“ಯಾಕ್ ಸಾರ್ ಹಾಗಂತಿರಿ.”

“ಇಂದಿರಾ ಕ್ಯಾಂಟೀನಲ್ಲಿ ಜಿರ್ಲೆ ಸಿಕ್ಕುತು ಅಂತ ಅದ ತಂದು ತೋರಿಸಿದ್ರ, ಸಿದ್ದರಾಮಯ್ಯ ಕೊಡ್ತಾಯಿರದು ನಿಜವಾದ ಅಕ್ಕಿಯಲ್ಲ ಪ್ಲಾಸ್ಟಿಕ್ ಅಕ್ಕಿ ಅಂತ ಚರ್ಚೆ ಮಾಡಿದ್ರಿ, ಇಲ್ಲದಕ್ಕೆ ಬಣ್ಣಕಟ್ಟಿ ಹೇಳತಿದ್ರಿ, ಆದ್ರೆ ಇವತ್ತು ನೀವ್ಯಲ್ಲ ಧ್ವನಿನೆ ಕಳಕಂಡಿದ್ದಿರಿ. ಒಂಥರ ಸತ್ತೊಗಿದ್ದಿರಿ, ಆದ್ರೆ ತಿಳಕಳಿ ನೀವಿಲ್ಲದೆನೂ ದೇಶ ನಡೆಯುತ್ತೆ. ಆದ್ರೆ ಸರಿಯಾಗಿ ನಡೆಯಕ್ಕೆ ನೀವು ಬುಡಲ್ಲ. ಅಲವೇನೂ ಶ್ಯಾನಭೋಗ.”

“ಸಾರಿ ಸಾರ್.”


ಇದನ್ನು ಓದಿ: ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...