Homeಅಂಕಣಗಳು“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” – ಥೂತ್ತೇರಿ ಯಾಹೂ

- Advertisement -
- Advertisement -

ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಯಡೂರಪ್ಪ ಸರಕಾರದ ಸಚಿವರು ಬರೋಬರಿ ಎರಡು ಸಾವಿರ ಕೋಟಿಯನ್ನು ಈಗಾಗಲೇ ಭರ್ತಿಯಾಗಿದ್ದ ತಮ್ಮ ಜೋಬುಗಳಿಗೆ ತುರುಕಿದ್ದಾರೆ ಎಂಬ ಸಿದ್ದರಾಮಯ್ಯನ ಆರೋಪಕ್ಕೆ ಸಂಬಂಧಿಸಿದಂತೆ, ಅವರನ್ನೆ ಕೇಳಿದರೆ ಹೇಗೆ ಅನ್ನಿಸಿ, ಯಾಹೂ ಬದಲಿಗೆ ಟಿವಿ ನಿರ್ವಾಹಕನ ಹೆಸರಲ್ಲಿ ಕೇಳಿದರೆ ಹೇಗೆ ಅನ್ನಿಸಿದ್ದರಿಂದ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್ ಠೊನ್ “ಕರಿಯ ಕಂಬಳಿ ಗದ್ದಿಗೆ ಮಾಡಿ ವೀರದೊಳ್ಳ ತಂದಿರಿಸಿದರೊ”………. “ಹಲೊ ಯಾರು”

“ನಾನು ಸಾರ್ ಟಿವಿ ಸಿಕ್ಸ್‍ನಿಂದ ಮಾತಾಡ್ತಯಿರೋದು.”

“ಟಿವಿ ಸಿಗಸೆ.”

“ಸಿಕ್ಸ್ ಸಾರ್ ಆರು.”

“ಅದ್ಯಾವುದ್ರೀ.”

“ನೈನ್ ಉಲ್ಟಾ ಬರದ್ರೆ ಸಿಕ್ಸು ಸಾರ್.”

“ಯರಡು ನಿಮ್ದೆಯಾ.”

“ಹೌದು ಸಾರ್ ಒಂದೆರಡು ಪ್ರಶ್ನೆ ಕೇಳ್ತಿನಿ ಸಾರ್.”

“ಏನ್ನಿನ್ನೆಸರು.”

“ಶ್ಯಾನುಭೊಗ್ ಹೆಮ್ಮಿಗನೂರು ಸಾರ್.”

“ಶ್ಯಾನುಭೊಗರ ಪೈಕಿನಾ.”

“ಹೌದು ಸಾರ್.”

“ಯಲ್ಲ ಊರು ಬುಟ್ಟು ಬಂದು ಟಿವಿವಳಿಕೆ ಸೇರ್ಕಂಡುಬುಟ್ಟಿದ್ದಿರಿ.”

“ಹೌದು ಸಾರ್.”

“ಅದೇನು ಪ್ರಶ್ನೆ ಕೇಳು.”

“ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಈ ಸರಕಾರ ಭ್ರಷ್ಟಾಚಾರ ಮಾಡಿದೆ ಅಂತ ತಾವು ಆಪಾದನೆ ಮಾಡಿದ್ದಿರಿ ಸಾರ್, ಇದು ನಿಮಗೆಂಗೆ ಗೊತ್ತಾಯ್ತು ಸಾರ್.”

“ನಾನು ಮುಖ್ಯಮಂತ್ರಿಯಾಗಿದ್ದೊನು ಐದು ವರ್ಷ ಸರಕಾರ ನಡೆಸಿದ್ದೀನಿ.”

“ಅಂದ್ರೆ ಭ್ರಷ್ಟಾಚಾರ ಹೇಗೆ ನಡೆಯುತ್ತೆ ಅಂತ ನಿಮಗೆ ಗೊತ್ತಲ್ಲವ ಸಾರ್.”

“ಹೌದು ಗೊತ್ತು.”

“ನೀವು ಆಪಾದನೆ ಮಾಡ್ತಾಯಿರೊ ಮಂತ್ರಿಗಳು ನಿಮ್ಮ ಜೊತೆಲೂ ಇದ್ರಲವ ಸಾರ್.”

“ಇದ್ರು ಈಗಿಲ್ಲ ಅಲ್ಲಿಗೋಗಿ ಮಂತ್ರಿಗಳಾಗ್ಯವುರೆ ಹಾಗಂತ ಸುಮ್ಮನಿರಕ್ಕಾಗಲ್ಲ.”

“ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿತ್ತಲವ್ ಸಾರ್.”

“ಯಾರು ಮಾಡಿದ್ರ್ರು.”

“ಅಂಜನೇಯರ ಮೇಲೆ ದೂರು ಬಂದಿತ್ತು.”

“ಆತ ಸದನದಲ್ಲೇ ಉತ್ತರ ಕೊಟ್ಟ.”

“ಭ್ರಷ್ಟಾಚಾರ ಆಪಾದನೆ ಆಮೇಲೆ ಮಾಡಿ ಬೇಕಾದ್ರೆ ಸದನದಲ್ಲಿ ಪ್ರಶ್ನೆ ಮಾಡಿ ಈಗ ವಿಪತ್ತು ನಿರ್ವಹಿಸಿ ಅಂತ ದೇವೇಗೌಡ್ರು ಹೇಳಿದಾರೆ ಸಾರ್.”

“ಸರಿಯಯ್ಯಾ ವಿಪ್ಪತ್ತು ನಿರ್ವಹಿಸುವವಾಗಲೇ ನಡೆದಿರೋ ಅಕ್ರಮ ಕೇಳಬಾರದಾ.”

“ಏನಾಧಾರ ಇಟಗಂಡು ಕೇಳ್ತಿರಿ ಅಂತಾಯಿದಾರೆ.”

“ನಾನು ವಿರೊಧಪಕ್ಷದ ನಾಯಕ. ಆಪಾದನೆ ಮಾಡಬೇಕಾದ್ರೆ ಸಾಕ್ಷಾಧಾರ ಇಟಗಂಡೇ ಕೇಳ್ತಿನಿ.”

“ನಿಮ್ಮ ಆಪಾದನೆಗಳಿಗೆ ಕಾಂಗ್ರೆಸ್ಸಲ್ಲೇ ಸಹಮತ ಇಲ್ಲವಂತಲ್ಲಾ ಸಾರ್.”

“ಈ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಸಹಮತ ಇದೆ.”

“ಡಿ.ಕೆಶಿವಕುಮಾರ್ ನಿಮ್ಮ ಸಂಬಂಧ ಹೇಗಿದೆ ಸಾರ್.”

“ಚನ್ನಾಗಿದ್ದಿವಿ.”

“ನೀವು ವಿರೊಧಪಕ್ಷದ ನಾಯಕರು, ಅವರು ಪಾರ್ಟಿ ಅಧ್ಯಕ್ಷರು. ಭ್ರಷ್ಟಾಚಾರ ಆಪಾದನೆಯಲ್ಲಿ ಸಹಮತ ಇಲ್ಲ ಅಂತ ಸುದ್ದಿ ಇದೆ ಸಾರ್.”

“ನೋಡೋ ಶಾನುಭೊಗ, ನೀನು ಫೋನ್ ಮಾಡಿದ್ದು ಎಡೂರಪ್ಪನ ಸರಕಾರದಲ್ಲಿ ಕೋವಿಡ್ ನಿರ್ವಹಣೆಗೆ ಖರೀದಿ ಮಾಡಿದ ಸಾಮಾಗ್ರಿ ವಿಷಯದಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರದ ವಿಷಯ ಕೇಳಕ್ಕೆ, ಅದು ಬುಟ್ಟು ನಮ್ಮ ಪಾರ್ಟಿ ವಿಷಯ ಕೇಳ್ತಿಯಲ್ಲ ನಾವೇನು ಪವರಲಿದ್ದಿವಾ.”

“ಪವರಿಗೆ ಬರ್ತಿರ ಸಾರ್.”

“ಅದಾಮೇಲೆ ಕಣಯ್ಯ, ಈ ಕೋವಿಡ್‍ನಲ್ಲಿ ಉಳುದು ಬದುಕಿದ ಮೇಲಿನ ಮಾತಾಲ್ಲವಾ.”

“ಅಂತೂ ಮುಖ್ಯಮಂತ್ರಿ ಸ್ಪರ್ಧೆಲಿ ನೀವೂ ಇದೀರಿ.”

“ಲೇ ಶಾನುಭೊಗ, ಎಷ್ಟೇ ಆಗಲಿ ಹಳ್ಳಿ ಜನಗಳಿಗೆ ಮಂಕುಬೂದಿ ಎರಚಿ ನೂರಾರು ವರ್ಷ ಹಳ್ಳಿ ಆಳಿದೋನು ನೀನು ಅಂಗಂತ ಈಗ್ಲು ನನ್ನನ್ನ ಯಾಮಾರಸಕ್ಕೆ ಬರಬೇಡ.”

“ನಾನೇನು ತಪ್ಪು ಮಾತಾಡಿದ್ನ ಸಾರ್.”

“ತಪ್ಪಲ್ಲ ನಿಮ್ಮ ಕಪಟತನ ಜನಗಳಿಗೆ ಗೊತ್ತಿಲ್ಲ ಅಂತ ತಿಳಕೊಬ್ಯಾಡ ವಿರೊಧಪಕ್ಷದ ಕೆಲಸನ ನೀವೂಕೂಡ ಮಾಡಬೇಕಾಗಿತ್ತು. ಸರಕಾರನ ಪ್ರಶ್ನೆ ಮಾಡಬೇಕಾಗಿತ್ತು. ಖರೀದಿ ಮಾಡಿದ ಪದಾರ್ಥನ ತಂದು ಜನಗಳಿಗೆ ಕೊಡಬೇಕಾಗಿತ್ತು. ಅದನ್ಯಲ್ಲ ಬಿಟ್ಟು ದೇಶಾಗೃಹಗಳಿಗೆ ಕ್ಯಾಮರ ಹೊತ್ತುಗಂಡು ಹೋಗ್ತಾಯಿದ್ದಿರಿ. ಈ ಕಡೆ ರಾಮುಲು, ಸುಧಾಕರ, ಆಶೋಕನ್ನ ಪ್ರಶ್ನೆ ಮಾಡದು ಬುಟ್ಟು ನನ್ನನ್ನ ಕುರುತು ನನ್ನ ಪಾರ್ಟಿ ವಿಷಯ ಕೇಳ್ತಯಿದ್ದಿ, ಕೇಳಿದ ಜನಗಳು ನಗತಾಯಿಲ್ಲ ಅಂತ ತಿಳಕೊಂಡಿದ್ದಿಯಾ.”

“ಆಯ್ತು ಸಾರ್ ಭ್ರಷ್ಟಾಚಾರ ನಡೆದಿದೆ ಅಂತ ನೀವು ಹೇಳ್ತಿರ, ಅಂತದ್ದೇನು ಆಗಿಲ್ಲ ಅಂತ ಅವುರುಳ್ತಾಯಿದಾರೆ. ನೀವೆ ಪವರಲ್ಲಿದ್ರೆ ಏನು ಮಾಡತಿದ್ರೀ?”

“ಒಂದು ವೇಳೆ ನಾನೇ ಇದ್ರೆ ಸಮಸ್ಯೆ ಬಗ್ಗೆ ಚನ್ನಾಗಿ ತಿಳಕಂಡಿರೋರು ಜೊತೆ ಮಾತಾಡತಿದ್ದೆ. ಅವುರ ಅನುಭವನ ಬಳಸಿಕೊಳ್ತಿದ್ದೆ. ಅನಾಹುತಗಳಿಗೂ ಮೊದ್ಲು ತಯಾರಿ ನಡೆಸತಿದ್ದೆ. ನಮ್ಮ ತಪ್ಪುಗಳನ್ನ 24 ಗಂಟೆ ತೋರಸೊ ನಿಮ್ಮನ್ನ ವಿಶ್ವಾಸಕ್ಕೆ ತಗಳತಿದ್ದೆ. ಆದ್ರೆ ನಿಮ್ಮಂತ ಸುಳ್ಳು ಜನನ ನನ್ನ ಜನುಮದಲ್ಲಿ ನೋಡಿಲ್ಲ.”

“ಯಾಕ್ ಸಾರ್ ಹಾಗಂತಿರಿ.”

“ಇಂದಿರಾ ಕ್ಯಾಂಟೀನಲ್ಲಿ ಜಿರ್ಲೆ ಸಿಕ್ಕುತು ಅಂತ ಅದ ತಂದು ತೋರಿಸಿದ್ರ, ಸಿದ್ದರಾಮಯ್ಯ ಕೊಡ್ತಾಯಿರದು ನಿಜವಾದ ಅಕ್ಕಿಯಲ್ಲ ಪ್ಲಾಸ್ಟಿಕ್ ಅಕ್ಕಿ ಅಂತ ಚರ್ಚೆ ಮಾಡಿದ್ರಿ, ಇಲ್ಲದಕ್ಕೆ ಬಣ್ಣಕಟ್ಟಿ ಹೇಳತಿದ್ರಿ, ಆದ್ರೆ ಇವತ್ತು ನೀವ್ಯಲ್ಲ ಧ್ವನಿನೆ ಕಳಕಂಡಿದ್ದಿರಿ. ಒಂಥರ ಸತ್ತೊಗಿದ್ದಿರಿ, ಆದ್ರೆ ತಿಳಕಳಿ ನೀವಿಲ್ಲದೆನೂ ದೇಶ ನಡೆಯುತ್ತೆ. ಆದ್ರೆ ಸರಿಯಾಗಿ ನಡೆಯಕ್ಕೆ ನೀವು ಬುಡಲ್ಲ. ಅಲವೇನೂ ಶ್ಯಾನಭೋಗ.”

“ಸಾರಿ ಸಾರ್.”


ಇದನ್ನು ಓದಿ: ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...