Homeಅಂಕಣಗಳು“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” – ಥೂತ್ತೇರಿ ಯಾಹೂ

- Advertisement -
- Advertisement -

ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಯಡೂರಪ್ಪ ಸರಕಾರದ ಸಚಿವರು ಬರೋಬರಿ ಎರಡು ಸಾವಿರ ಕೋಟಿಯನ್ನು ಈಗಾಗಲೇ ಭರ್ತಿಯಾಗಿದ್ದ ತಮ್ಮ ಜೋಬುಗಳಿಗೆ ತುರುಕಿದ್ದಾರೆ ಎಂಬ ಸಿದ್ದರಾಮಯ್ಯನ ಆರೋಪಕ್ಕೆ ಸಂಬಂಧಿಸಿದಂತೆ, ಅವರನ್ನೆ ಕೇಳಿದರೆ ಹೇಗೆ ಅನ್ನಿಸಿ, ಯಾಹೂ ಬದಲಿಗೆ ಟಿವಿ ನಿರ್ವಾಹಕನ ಹೆಸರಲ್ಲಿ ಕೇಳಿದರೆ ಹೇಗೆ ಅನ್ನಿಸಿದ್ದರಿಂದ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್ ಠೊನ್ “ಕರಿಯ ಕಂಬಳಿ ಗದ್ದಿಗೆ ಮಾಡಿ ವೀರದೊಳ್ಳ ತಂದಿರಿಸಿದರೊ”………. “ಹಲೊ ಯಾರು”

“ನಾನು ಸಾರ್ ಟಿವಿ ಸಿಕ್ಸ್‍ನಿಂದ ಮಾತಾಡ್ತಯಿರೋದು.”

“ಟಿವಿ ಸಿಗಸೆ.”

“ಸಿಕ್ಸ್ ಸಾರ್ ಆರು.”

“ಅದ್ಯಾವುದ್ರೀ.”

“ನೈನ್ ಉಲ್ಟಾ ಬರದ್ರೆ ಸಿಕ್ಸು ಸಾರ್.”

“ಯರಡು ನಿಮ್ದೆಯಾ.”

“ಹೌದು ಸಾರ್ ಒಂದೆರಡು ಪ್ರಶ್ನೆ ಕೇಳ್ತಿನಿ ಸಾರ್.”

“ಏನ್ನಿನ್ನೆಸರು.”

“ಶ್ಯಾನುಭೊಗ್ ಹೆಮ್ಮಿಗನೂರು ಸಾರ್.”

“ಶ್ಯಾನುಭೊಗರ ಪೈಕಿನಾ.”

“ಹೌದು ಸಾರ್.”

“ಯಲ್ಲ ಊರು ಬುಟ್ಟು ಬಂದು ಟಿವಿವಳಿಕೆ ಸೇರ್ಕಂಡುಬುಟ್ಟಿದ್ದಿರಿ.”

“ಹೌದು ಸಾರ್.”

“ಅದೇನು ಪ್ರಶ್ನೆ ಕೇಳು.”

“ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಈ ಸರಕಾರ ಭ್ರಷ್ಟಾಚಾರ ಮಾಡಿದೆ ಅಂತ ತಾವು ಆಪಾದನೆ ಮಾಡಿದ್ದಿರಿ ಸಾರ್, ಇದು ನಿಮಗೆಂಗೆ ಗೊತ್ತಾಯ್ತು ಸಾರ್.”

“ನಾನು ಮುಖ್ಯಮಂತ್ರಿಯಾಗಿದ್ದೊನು ಐದು ವರ್ಷ ಸರಕಾರ ನಡೆಸಿದ್ದೀನಿ.”

“ಅಂದ್ರೆ ಭ್ರಷ್ಟಾಚಾರ ಹೇಗೆ ನಡೆಯುತ್ತೆ ಅಂತ ನಿಮಗೆ ಗೊತ್ತಲ್ಲವ ಸಾರ್.”

“ಹೌದು ಗೊತ್ತು.”

“ನೀವು ಆಪಾದನೆ ಮಾಡ್ತಾಯಿರೊ ಮಂತ್ರಿಗಳು ನಿಮ್ಮ ಜೊತೆಲೂ ಇದ್ರಲವ ಸಾರ್.”

“ಇದ್ರು ಈಗಿಲ್ಲ ಅಲ್ಲಿಗೋಗಿ ಮಂತ್ರಿಗಳಾಗ್ಯವುರೆ ಹಾಗಂತ ಸುಮ್ಮನಿರಕ್ಕಾಗಲ್ಲ.”

“ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿತ್ತಲವ್ ಸಾರ್.”

“ಯಾರು ಮಾಡಿದ್ರ್ರು.”

“ಅಂಜನೇಯರ ಮೇಲೆ ದೂರು ಬಂದಿತ್ತು.”

“ಆತ ಸದನದಲ್ಲೇ ಉತ್ತರ ಕೊಟ್ಟ.”

“ಭ್ರಷ್ಟಾಚಾರ ಆಪಾದನೆ ಆಮೇಲೆ ಮಾಡಿ ಬೇಕಾದ್ರೆ ಸದನದಲ್ಲಿ ಪ್ರಶ್ನೆ ಮಾಡಿ ಈಗ ವಿಪತ್ತು ನಿರ್ವಹಿಸಿ ಅಂತ ದೇವೇಗೌಡ್ರು ಹೇಳಿದಾರೆ ಸಾರ್.”

“ಸರಿಯಯ್ಯಾ ವಿಪ್ಪತ್ತು ನಿರ್ವಹಿಸುವವಾಗಲೇ ನಡೆದಿರೋ ಅಕ್ರಮ ಕೇಳಬಾರದಾ.”

“ಏನಾಧಾರ ಇಟಗಂಡು ಕೇಳ್ತಿರಿ ಅಂತಾಯಿದಾರೆ.”

“ನಾನು ವಿರೊಧಪಕ್ಷದ ನಾಯಕ. ಆಪಾದನೆ ಮಾಡಬೇಕಾದ್ರೆ ಸಾಕ್ಷಾಧಾರ ಇಟಗಂಡೇ ಕೇಳ್ತಿನಿ.”

“ನಿಮ್ಮ ಆಪಾದನೆಗಳಿಗೆ ಕಾಂಗ್ರೆಸ್ಸಲ್ಲೇ ಸಹಮತ ಇಲ್ಲವಂತಲ್ಲಾ ಸಾರ್.”

“ಈ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಸಹಮತ ಇದೆ.”

“ಡಿ.ಕೆಶಿವಕುಮಾರ್ ನಿಮ್ಮ ಸಂಬಂಧ ಹೇಗಿದೆ ಸಾರ್.”

“ಚನ್ನಾಗಿದ್ದಿವಿ.”

“ನೀವು ವಿರೊಧಪಕ್ಷದ ನಾಯಕರು, ಅವರು ಪಾರ್ಟಿ ಅಧ್ಯಕ್ಷರು. ಭ್ರಷ್ಟಾಚಾರ ಆಪಾದನೆಯಲ್ಲಿ ಸಹಮತ ಇಲ್ಲ ಅಂತ ಸುದ್ದಿ ಇದೆ ಸಾರ್.”

“ನೋಡೋ ಶಾನುಭೊಗ, ನೀನು ಫೋನ್ ಮಾಡಿದ್ದು ಎಡೂರಪ್ಪನ ಸರಕಾರದಲ್ಲಿ ಕೋವಿಡ್ ನಿರ್ವಹಣೆಗೆ ಖರೀದಿ ಮಾಡಿದ ಸಾಮಾಗ್ರಿ ವಿಷಯದಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರದ ವಿಷಯ ಕೇಳಕ್ಕೆ, ಅದು ಬುಟ್ಟು ನಮ್ಮ ಪಾರ್ಟಿ ವಿಷಯ ಕೇಳ್ತಿಯಲ್ಲ ನಾವೇನು ಪವರಲಿದ್ದಿವಾ.”

“ಪವರಿಗೆ ಬರ್ತಿರ ಸಾರ್.”

“ಅದಾಮೇಲೆ ಕಣಯ್ಯ, ಈ ಕೋವಿಡ್‍ನಲ್ಲಿ ಉಳುದು ಬದುಕಿದ ಮೇಲಿನ ಮಾತಾಲ್ಲವಾ.”

“ಅಂತೂ ಮುಖ್ಯಮಂತ್ರಿ ಸ್ಪರ್ಧೆಲಿ ನೀವೂ ಇದೀರಿ.”

“ಲೇ ಶಾನುಭೊಗ, ಎಷ್ಟೇ ಆಗಲಿ ಹಳ್ಳಿ ಜನಗಳಿಗೆ ಮಂಕುಬೂದಿ ಎರಚಿ ನೂರಾರು ವರ್ಷ ಹಳ್ಳಿ ಆಳಿದೋನು ನೀನು ಅಂಗಂತ ಈಗ್ಲು ನನ್ನನ್ನ ಯಾಮಾರಸಕ್ಕೆ ಬರಬೇಡ.”

“ನಾನೇನು ತಪ್ಪು ಮಾತಾಡಿದ್ನ ಸಾರ್.”

“ತಪ್ಪಲ್ಲ ನಿಮ್ಮ ಕಪಟತನ ಜನಗಳಿಗೆ ಗೊತ್ತಿಲ್ಲ ಅಂತ ತಿಳಕೊಬ್ಯಾಡ ವಿರೊಧಪಕ್ಷದ ಕೆಲಸನ ನೀವೂಕೂಡ ಮಾಡಬೇಕಾಗಿತ್ತು. ಸರಕಾರನ ಪ್ರಶ್ನೆ ಮಾಡಬೇಕಾಗಿತ್ತು. ಖರೀದಿ ಮಾಡಿದ ಪದಾರ್ಥನ ತಂದು ಜನಗಳಿಗೆ ಕೊಡಬೇಕಾಗಿತ್ತು. ಅದನ್ಯಲ್ಲ ಬಿಟ್ಟು ದೇಶಾಗೃಹಗಳಿಗೆ ಕ್ಯಾಮರ ಹೊತ್ತುಗಂಡು ಹೋಗ್ತಾಯಿದ್ದಿರಿ. ಈ ಕಡೆ ರಾಮುಲು, ಸುಧಾಕರ, ಆಶೋಕನ್ನ ಪ್ರಶ್ನೆ ಮಾಡದು ಬುಟ್ಟು ನನ್ನನ್ನ ಕುರುತು ನನ್ನ ಪಾರ್ಟಿ ವಿಷಯ ಕೇಳ್ತಯಿದ್ದಿ, ಕೇಳಿದ ಜನಗಳು ನಗತಾಯಿಲ್ಲ ಅಂತ ತಿಳಕೊಂಡಿದ್ದಿಯಾ.”

“ಆಯ್ತು ಸಾರ್ ಭ್ರಷ್ಟಾಚಾರ ನಡೆದಿದೆ ಅಂತ ನೀವು ಹೇಳ್ತಿರ, ಅಂತದ್ದೇನು ಆಗಿಲ್ಲ ಅಂತ ಅವುರುಳ್ತಾಯಿದಾರೆ. ನೀವೆ ಪವರಲ್ಲಿದ್ರೆ ಏನು ಮಾಡತಿದ್ರೀ?”

“ಒಂದು ವೇಳೆ ನಾನೇ ಇದ್ರೆ ಸಮಸ್ಯೆ ಬಗ್ಗೆ ಚನ್ನಾಗಿ ತಿಳಕಂಡಿರೋರು ಜೊತೆ ಮಾತಾಡತಿದ್ದೆ. ಅವುರ ಅನುಭವನ ಬಳಸಿಕೊಳ್ತಿದ್ದೆ. ಅನಾಹುತಗಳಿಗೂ ಮೊದ್ಲು ತಯಾರಿ ನಡೆಸತಿದ್ದೆ. ನಮ್ಮ ತಪ್ಪುಗಳನ್ನ 24 ಗಂಟೆ ತೋರಸೊ ನಿಮ್ಮನ್ನ ವಿಶ್ವಾಸಕ್ಕೆ ತಗಳತಿದ್ದೆ. ಆದ್ರೆ ನಿಮ್ಮಂತ ಸುಳ್ಳು ಜನನ ನನ್ನ ಜನುಮದಲ್ಲಿ ನೋಡಿಲ್ಲ.”

“ಯಾಕ್ ಸಾರ್ ಹಾಗಂತಿರಿ.”

“ಇಂದಿರಾ ಕ್ಯಾಂಟೀನಲ್ಲಿ ಜಿರ್ಲೆ ಸಿಕ್ಕುತು ಅಂತ ಅದ ತಂದು ತೋರಿಸಿದ್ರ, ಸಿದ್ದರಾಮಯ್ಯ ಕೊಡ್ತಾಯಿರದು ನಿಜವಾದ ಅಕ್ಕಿಯಲ್ಲ ಪ್ಲಾಸ್ಟಿಕ್ ಅಕ್ಕಿ ಅಂತ ಚರ್ಚೆ ಮಾಡಿದ್ರಿ, ಇಲ್ಲದಕ್ಕೆ ಬಣ್ಣಕಟ್ಟಿ ಹೇಳತಿದ್ರಿ, ಆದ್ರೆ ಇವತ್ತು ನೀವ್ಯಲ್ಲ ಧ್ವನಿನೆ ಕಳಕಂಡಿದ್ದಿರಿ. ಒಂಥರ ಸತ್ತೊಗಿದ್ದಿರಿ, ಆದ್ರೆ ತಿಳಕಳಿ ನೀವಿಲ್ಲದೆನೂ ದೇಶ ನಡೆಯುತ್ತೆ. ಆದ್ರೆ ಸರಿಯಾಗಿ ನಡೆಯಕ್ಕೆ ನೀವು ಬುಡಲ್ಲ. ಅಲವೇನೂ ಶ್ಯಾನಭೋಗ.”

“ಸಾರಿ ಸಾರ್.”


ಇದನ್ನು ಓದಿ: ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...