Homeಅಂಕಣಗಳು“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” - ಥೂತ್ತೇರಿ ಯಾಹೂ

“ನಿನ್ನ ಕಪಟತನ ಗೊತ್ತಿಲ್ಲ ಅನ್ನಕಂಡ್ಯಾ” – ಥೂತ್ತೇರಿ ಯಾಹೂ

- Advertisement -
- Advertisement -

ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಯಡೂರಪ್ಪ ಸರಕಾರದ ಸಚಿವರು ಬರೋಬರಿ ಎರಡು ಸಾವಿರ ಕೋಟಿಯನ್ನು ಈಗಾಗಲೇ ಭರ್ತಿಯಾಗಿದ್ದ ತಮ್ಮ ಜೋಬುಗಳಿಗೆ ತುರುಕಿದ್ದಾರೆ ಎಂಬ ಸಿದ್ದರಾಮಯ್ಯನ ಆರೋಪಕ್ಕೆ ಸಂಬಂಧಿಸಿದಂತೆ, ಅವರನ್ನೆ ಕೇಳಿದರೆ ಹೇಗೆ ಅನ್ನಿಸಿ, ಯಾಹೂ ಬದಲಿಗೆ ಟಿವಿ ನಿರ್ವಾಹಕನ ಹೆಸರಲ್ಲಿ ಕೇಳಿದರೆ ಹೇಗೆ ಅನ್ನಿಸಿದ್ದರಿಂದ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್ ಠೊನ್ “ಕರಿಯ ಕಂಬಳಿ ಗದ್ದಿಗೆ ಮಾಡಿ ವೀರದೊಳ್ಳ ತಂದಿರಿಸಿದರೊ”………. “ಹಲೊ ಯಾರು”

“ನಾನು ಸಾರ್ ಟಿವಿ ಸಿಕ್ಸ್‍ನಿಂದ ಮಾತಾಡ್ತಯಿರೋದು.”

“ಟಿವಿ ಸಿಗಸೆ.”

“ಸಿಕ್ಸ್ ಸಾರ್ ಆರು.”

“ಅದ್ಯಾವುದ್ರೀ.”

“ನೈನ್ ಉಲ್ಟಾ ಬರದ್ರೆ ಸಿಕ್ಸು ಸಾರ್.”

“ಯರಡು ನಿಮ್ದೆಯಾ.”

“ಹೌದು ಸಾರ್ ಒಂದೆರಡು ಪ್ರಶ್ನೆ ಕೇಳ್ತಿನಿ ಸಾರ್.”

“ಏನ್ನಿನ್ನೆಸರು.”

“ಶ್ಯಾನುಭೊಗ್ ಹೆಮ್ಮಿಗನೂರು ಸಾರ್.”

“ಶ್ಯಾನುಭೊಗರ ಪೈಕಿನಾ.”

“ಹೌದು ಸಾರ್.”

“ಯಲ್ಲ ಊರು ಬುಟ್ಟು ಬಂದು ಟಿವಿವಳಿಕೆ ಸೇರ್ಕಂಡುಬುಟ್ಟಿದ್ದಿರಿ.”

“ಹೌದು ಸಾರ್.”

“ಅದೇನು ಪ್ರಶ್ನೆ ಕೇಳು.”

“ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಈ ಸರಕಾರ ಭ್ರಷ್ಟಾಚಾರ ಮಾಡಿದೆ ಅಂತ ತಾವು ಆಪಾದನೆ ಮಾಡಿದ್ದಿರಿ ಸಾರ್, ಇದು ನಿಮಗೆಂಗೆ ಗೊತ್ತಾಯ್ತು ಸಾರ್.”

“ನಾನು ಮುಖ್ಯಮಂತ್ರಿಯಾಗಿದ್ದೊನು ಐದು ವರ್ಷ ಸರಕಾರ ನಡೆಸಿದ್ದೀನಿ.”

“ಅಂದ್ರೆ ಭ್ರಷ್ಟಾಚಾರ ಹೇಗೆ ನಡೆಯುತ್ತೆ ಅಂತ ನಿಮಗೆ ಗೊತ್ತಲ್ಲವ ಸಾರ್.”

“ಹೌದು ಗೊತ್ತು.”

“ನೀವು ಆಪಾದನೆ ಮಾಡ್ತಾಯಿರೊ ಮಂತ್ರಿಗಳು ನಿಮ್ಮ ಜೊತೆಲೂ ಇದ್ರಲವ ಸಾರ್.”

“ಇದ್ರು ಈಗಿಲ್ಲ ಅಲ್ಲಿಗೋಗಿ ಮಂತ್ರಿಗಳಾಗ್ಯವುರೆ ಹಾಗಂತ ಸುಮ್ಮನಿರಕ್ಕಾಗಲ್ಲ.”

“ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿತ್ತಲವ್ ಸಾರ್.”

“ಯಾರು ಮಾಡಿದ್ರ್ರು.”

“ಅಂಜನೇಯರ ಮೇಲೆ ದೂರು ಬಂದಿತ್ತು.”

“ಆತ ಸದನದಲ್ಲೇ ಉತ್ತರ ಕೊಟ್ಟ.”

“ಭ್ರಷ್ಟಾಚಾರ ಆಪಾದನೆ ಆಮೇಲೆ ಮಾಡಿ ಬೇಕಾದ್ರೆ ಸದನದಲ್ಲಿ ಪ್ರಶ್ನೆ ಮಾಡಿ ಈಗ ವಿಪತ್ತು ನಿರ್ವಹಿಸಿ ಅಂತ ದೇವೇಗೌಡ್ರು ಹೇಳಿದಾರೆ ಸಾರ್.”

“ಸರಿಯಯ್ಯಾ ವಿಪ್ಪತ್ತು ನಿರ್ವಹಿಸುವವಾಗಲೇ ನಡೆದಿರೋ ಅಕ್ರಮ ಕೇಳಬಾರದಾ.”

“ಏನಾಧಾರ ಇಟಗಂಡು ಕೇಳ್ತಿರಿ ಅಂತಾಯಿದಾರೆ.”

“ನಾನು ವಿರೊಧಪಕ್ಷದ ನಾಯಕ. ಆಪಾದನೆ ಮಾಡಬೇಕಾದ್ರೆ ಸಾಕ್ಷಾಧಾರ ಇಟಗಂಡೇ ಕೇಳ್ತಿನಿ.”

“ನಿಮ್ಮ ಆಪಾದನೆಗಳಿಗೆ ಕಾಂಗ್ರೆಸ್ಸಲ್ಲೇ ಸಹಮತ ಇಲ್ಲವಂತಲ್ಲಾ ಸಾರ್.”

“ಈ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಸಹಮತ ಇದೆ.”

“ಡಿ.ಕೆಶಿವಕುಮಾರ್ ನಿಮ್ಮ ಸಂಬಂಧ ಹೇಗಿದೆ ಸಾರ್.”

“ಚನ್ನಾಗಿದ್ದಿವಿ.”

“ನೀವು ವಿರೊಧಪಕ್ಷದ ನಾಯಕರು, ಅವರು ಪಾರ್ಟಿ ಅಧ್ಯಕ್ಷರು. ಭ್ರಷ್ಟಾಚಾರ ಆಪಾದನೆಯಲ್ಲಿ ಸಹಮತ ಇಲ್ಲ ಅಂತ ಸುದ್ದಿ ಇದೆ ಸಾರ್.”

“ನೋಡೋ ಶಾನುಭೊಗ, ನೀನು ಫೋನ್ ಮಾಡಿದ್ದು ಎಡೂರಪ್ಪನ ಸರಕಾರದಲ್ಲಿ ಕೋವಿಡ್ ನಿರ್ವಹಣೆಗೆ ಖರೀದಿ ಮಾಡಿದ ಸಾಮಾಗ್ರಿ ವಿಷಯದಲ್ಲಿ ಎರಡು ಸಾವಿರ ಕೋಟಿ ಭ್ರಷ್ಟಾಚಾರದ ವಿಷಯ ಕೇಳಕ್ಕೆ, ಅದು ಬುಟ್ಟು ನಮ್ಮ ಪಾರ್ಟಿ ವಿಷಯ ಕೇಳ್ತಿಯಲ್ಲ ನಾವೇನು ಪವರಲಿದ್ದಿವಾ.”

“ಪವರಿಗೆ ಬರ್ತಿರ ಸಾರ್.”

“ಅದಾಮೇಲೆ ಕಣಯ್ಯ, ಈ ಕೋವಿಡ್‍ನಲ್ಲಿ ಉಳುದು ಬದುಕಿದ ಮೇಲಿನ ಮಾತಾಲ್ಲವಾ.”

“ಅಂತೂ ಮುಖ್ಯಮಂತ್ರಿ ಸ್ಪರ್ಧೆಲಿ ನೀವೂ ಇದೀರಿ.”

“ಲೇ ಶಾನುಭೊಗ, ಎಷ್ಟೇ ಆಗಲಿ ಹಳ್ಳಿ ಜನಗಳಿಗೆ ಮಂಕುಬೂದಿ ಎರಚಿ ನೂರಾರು ವರ್ಷ ಹಳ್ಳಿ ಆಳಿದೋನು ನೀನು ಅಂಗಂತ ಈಗ್ಲು ನನ್ನನ್ನ ಯಾಮಾರಸಕ್ಕೆ ಬರಬೇಡ.”

“ನಾನೇನು ತಪ್ಪು ಮಾತಾಡಿದ್ನ ಸಾರ್.”

“ತಪ್ಪಲ್ಲ ನಿಮ್ಮ ಕಪಟತನ ಜನಗಳಿಗೆ ಗೊತ್ತಿಲ್ಲ ಅಂತ ತಿಳಕೊಬ್ಯಾಡ ವಿರೊಧಪಕ್ಷದ ಕೆಲಸನ ನೀವೂಕೂಡ ಮಾಡಬೇಕಾಗಿತ್ತು. ಸರಕಾರನ ಪ್ರಶ್ನೆ ಮಾಡಬೇಕಾಗಿತ್ತು. ಖರೀದಿ ಮಾಡಿದ ಪದಾರ್ಥನ ತಂದು ಜನಗಳಿಗೆ ಕೊಡಬೇಕಾಗಿತ್ತು. ಅದನ್ಯಲ್ಲ ಬಿಟ್ಟು ದೇಶಾಗೃಹಗಳಿಗೆ ಕ್ಯಾಮರ ಹೊತ್ತುಗಂಡು ಹೋಗ್ತಾಯಿದ್ದಿರಿ. ಈ ಕಡೆ ರಾಮುಲು, ಸುಧಾಕರ, ಆಶೋಕನ್ನ ಪ್ರಶ್ನೆ ಮಾಡದು ಬುಟ್ಟು ನನ್ನನ್ನ ಕುರುತು ನನ್ನ ಪಾರ್ಟಿ ವಿಷಯ ಕೇಳ್ತಯಿದ್ದಿ, ಕೇಳಿದ ಜನಗಳು ನಗತಾಯಿಲ್ಲ ಅಂತ ತಿಳಕೊಂಡಿದ್ದಿಯಾ.”

“ಆಯ್ತು ಸಾರ್ ಭ್ರಷ್ಟಾಚಾರ ನಡೆದಿದೆ ಅಂತ ನೀವು ಹೇಳ್ತಿರ, ಅಂತದ್ದೇನು ಆಗಿಲ್ಲ ಅಂತ ಅವುರುಳ್ತಾಯಿದಾರೆ. ನೀವೆ ಪವರಲ್ಲಿದ್ರೆ ಏನು ಮಾಡತಿದ್ರೀ?”

“ಒಂದು ವೇಳೆ ನಾನೇ ಇದ್ರೆ ಸಮಸ್ಯೆ ಬಗ್ಗೆ ಚನ್ನಾಗಿ ತಿಳಕಂಡಿರೋರು ಜೊತೆ ಮಾತಾಡತಿದ್ದೆ. ಅವುರ ಅನುಭವನ ಬಳಸಿಕೊಳ್ತಿದ್ದೆ. ಅನಾಹುತಗಳಿಗೂ ಮೊದ್ಲು ತಯಾರಿ ನಡೆಸತಿದ್ದೆ. ನಮ್ಮ ತಪ್ಪುಗಳನ್ನ 24 ಗಂಟೆ ತೋರಸೊ ನಿಮ್ಮನ್ನ ವಿಶ್ವಾಸಕ್ಕೆ ತಗಳತಿದ್ದೆ. ಆದ್ರೆ ನಿಮ್ಮಂತ ಸುಳ್ಳು ಜನನ ನನ್ನ ಜನುಮದಲ್ಲಿ ನೋಡಿಲ್ಲ.”

“ಯಾಕ್ ಸಾರ್ ಹಾಗಂತಿರಿ.”

“ಇಂದಿರಾ ಕ್ಯಾಂಟೀನಲ್ಲಿ ಜಿರ್ಲೆ ಸಿಕ್ಕುತು ಅಂತ ಅದ ತಂದು ತೋರಿಸಿದ್ರ, ಸಿದ್ದರಾಮಯ್ಯ ಕೊಡ್ತಾಯಿರದು ನಿಜವಾದ ಅಕ್ಕಿಯಲ್ಲ ಪ್ಲಾಸ್ಟಿಕ್ ಅಕ್ಕಿ ಅಂತ ಚರ್ಚೆ ಮಾಡಿದ್ರಿ, ಇಲ್ಲದಕ್ಕೆ ಬಣ್ಣಕಟ್ಟಿ ಹೇಳತಿದ್ರಿ, ಆದ್ರೆ ಇವತ್ತು ನೀವ್ಯಲ್ಲ ಧ್ವನಿನೆ ಕಳಕಂಡಿದ್ದಿರಿ. ಒಂಥರ ಸತ್ತೊಗಿದ್ದಿರಿ, ಆದ್ರೆ ತಿಳಕಳಿ ನೀವಿಲ್ಲದೆನೂ ದೇಶ ನಡೆಯುತ್ತೆ. ಆದ್ರೆ ಸರಿಯಾಗಿ ನಡೆಯಕ್ಕೆ ನೀವು ಬುಡಲ್ಲ. ಅಲವೇನೂ ಶ್ಯಾನಭೋಗ.”

“ಸಾರಿ ಸಾರ್.”


ಇದನ್ನು ಓದಿ: ನಿನಗೆ ಬ್ಲಡ್ ಕ್ಯಾನ್ಸರ್ ಇರಬೇಕು ಕಣೋ : ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...