Homeಮುಖಪುಟಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

- Advertisement -
- Advertisement -

ಭೂಪಾಲ್: ಮಹಿಳೆಯರು ಅಥವಾ ಹುಡುಗಿಯರು ಮೈಗಂಟಿದ ಬಟ್ಟೆಗಳನ್ನು ಧರಿಸುವುದನ್ನು ಇಷ್ಟಪಡುವುದಿಲ್ಲ, ನಾನು ಅಂತಹವರೊಂದಿಗೆ ಫೋಟೋಗಳನ್ನು ತೆಗೆದುಕೊಳ್ಳಲು ನಿರಾಕರಿಸುತ್ತೇನೆ ಎಂದು ಮಧ್ಯಪ್ರದೇಶದ ಬಿಜೆಪಿಯ ಗ್ರಾಮೀಣಾಭಿವೃದ್ಧಿ ಸಚಿವ ಕೈಲಾಶ್ ವಿಜಯವರ್ಗೀಯ ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.

ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿಜಯವರ್ಗೀಯ ಅವರು, ಮಹಿಳೆಯರನ್ನು “ದೇವತೆಯ ರೂಪ” ಎಂದು ಪರಿಗಣಿಸಿದ್ದೇನೆ ಎಂದು ಹೇಳಿದರು.

ಮಹಿಳೆಯರ ಉಡುಪುಗಳ ಕುರಿತು ವಿಜಯವರ್ಗೀಯ ಅವರ ಹೇಳಿಕೆಗಳ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗಿದೆ.

ನಮ್ಮ ದೇಶದಲ್ಲಿ ಒಬ್ಬ ಹುಡುಗಿ ಒಳ್ಳೆಯ ಮತ್ತು ಸುಂದರವಾದ ಬಟ್ಟೆಗಳನ್ನು ಧರಿಸಿದರೆ, ಉತ್ತಮ ಮೇಕಪ್ ಮಾಡಿದರೆ ಮತ್ತು ಉತ್ತಮ ಆಭರಣಗಳನ್ನು ಧರಿಸಿದರೆ ಜನರು ಅವಳನ್ನು ತುಂಬಾ ಸುಂದರ ಎಂದು ಪರಿಗಣಿಸುತ್ತಾರೆ. ಆದರೆ ವಿದೇಶಗಳಲ್ಲಿ ಒಬ್ಬ ಮಹಿಳೆ ಕಡಿಮೆ ಬಟ್ಟೆ ಧರಿಸಿದರೆ ಅದನ್ನು ಸುಂದರ ಎಂದು ಪರಿಗಣಿಸಲಾಗುತ್ತದೆ. ಮಹಿಳೆಯರು ಮೈಗಂಟಿದ ಬಟ್ಟೆ ಧರಿಸುವುದು ಅವರ [ವಿದೇಶಿಯರ] ಚಿಂತನೆ ಎಂದು ವಿಜಯವರ್ಗೀಯ ಹೇಳಿದರು.

ನೋಡಿ, ಒಳ್ಳೆಯದಲ್ಲದ ಪಾಶ್ಚಾತ್ಯ ಗಾದೆ ಇದೆ. ಅದನ್ನು ವಿದೇಶಗಳಲ್ಲಿ ಹೆಚ್ಚು ಚರ್ಚಿಸಲಾಗುತ್ತದೆ. ಕಡಿಮೆ ಬಟ್ಟೆ ಧರಿಸಿದ ಹುಡುಗಿ ಸುಂದರಿಯಂತೆ, ಸಣ್ಣ ಭಾಷಣ ಮಾಡುವ ನಾಯಕಿ ಕೂಡ ತುಂಬಾ ಸುಂದರ ಎಂದು ಅಲ್ಲಿ ಹೇಳಲಾಗುತ್ತದೆ. ವಿದೇಶಗಳಲ್ಲಿ ಅಂತಹ ಗಾದೆ ಇದೆ. ಆದರೆ ನಾನು ಅದನ್ನು ಒಪ್ಪವುದಿಲ್ಲ ಎಂದು ಮಧ್ಯಪ್ರದೇಶದ ಬಿಜೆಪಿ ಸಚಿವರು ತಿಳಿಸಿದರು.

ಪ್ರೇಕ್ಷಕರ ನಗು ಮತ್ತು ಚಪ್ಪಾಳೆಗಳ ನಡುವೆ, ಸಂಪುಟ ದರ್ಜೆಯ ಸಚಿವರು ಈ ವಿದೇಶಿ ಗಾದೆಯನ್ನು ಸೂಕ್ತವೆಂದು ಪರಿಗಣಿಸುವುದಿಲ್ಲ ಎಂದು ಹೇಳಿದರು. “ನಾನು ಈ ಮಾತನ್ನು ಒಪ್ಪುವುದಿಲ್ಲ. ನಮ್ಮ ದೇಶದಲ್ಲಿ ಮಹಿಳೆಯನ್ನು ದೇವತೆಯ ಒಂದು ರೂಪ ನಾನು ಭಾವಿಸಿದ್ದೇನೆ. ಅವರು ತುಂಬಾ ಒಳ್ಳೆಯ ಬಟ್ಟೆಗಳನ್ನು ಧರಿಸಬೇಕು” ಎಂದು ಅವರು ಸಭೆಯಲ್ಲಿ ತಿಳಿಸಿದರು.

ನಾನು ಮಹಿಳೆಯರನ್ನು ದೇವತೆಗಳಂತೆ ನೋಡುತ್ತೇನೆ ಮತ್ತು ಅವರು ಉತ್ತಮ ಬಟ್ಟೆಗಳನ್ನು ಧರಿಸಬೇಕು. ಮೈಗಂಟಿದ ಬಟ್ಟೆಗಳನ್ನು ಧರಿಸುವ ಮಹಿಳೆಯರು ಅಥವಾ ಹುಡುಗಿಯರು ನನಗೆ ಇಷ್ಟವಿಲ್ಲ ಎಂದರು.

ಹುಡುಗಿಯರು ನನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಇಚ್ಛಿಸಿದಾಗ ಒಳ್ಳೆಯ ಬಟ್ಟೆ ಧರಿಸಿ ಬಂದು ನಂತರ ನನ್ನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಎಂದು ಅವರಿಗೆ ಹೇಳುತ್ತೇನೆ. ಮೈಗಂಟಿದ ಉಡುಪು ಧರಿಸಿ ಬಂದಾಗ  ಅವರೊಂದಿಗೆ ಫೋಟೋ ತೆಗೆದುಕೊಳ್ಳಲು ನಿರಾಕರಿಸುತ್ತೇನೆ ಎಂದು ಅವರು ಹೇಳಿದರು.

 

ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ವಿಜಯವರ್ಗಿಯ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಮಧ್ಯಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಭಾ ಪಟೇಲ್ ಅವರು, “ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಎಲ್ಲರ ಗಮನ ಸೆಳೆಯಲು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಕೈಲಾಶ್ ವಿಜಯವರ್ಗಿಯ ಅವರಿಗೆ ಎಚ್ಚರಿಕೆ ನೀಡಬೇಕು ಎಂದು ನಾನು ಬಿಜೆಪಿ ನಾಯಕತ್ವಕ್ಕೆ ಹೇಳಲು ಬಯಸುತ್ತೇನೆ. ಮಹಿಳೆಯರ, ಹುಡುಗಿಯರ ಬಟ್ಟೆಗಳ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಅವರಿಗೆ ಅಭ್ಯಾಸವಾಗಿದೆ. ಮಹಿಳೆಯರ ಬಟ್ಟೆಗಳ ಕುರಿತು ಕಾಮೆಂಟ್ ಮಾಡುವ ಮೂಲಕ ಅವರು ಬೆಳಕಿಗೆ ಬರಲು ಸಾಧ್ಯವಿಲ್ಲ, ಅವರು ತಮ್ಮ ನಡವಳಿಕೆಯನ್ನು ಬದಲಾಯಿಸಿಕೊಳ್ಳಬೇಕು” ಎಂದಿದ್ದಾರೆ.

ಏತನ್ಮಧ್ಯೆ, ತೃಣಮೂಲ ಕಾಂಗ್ರೆಸ್ ಕೈಲಾಶ್ ವಿಜಯವರ್ಗಿಯ ಅವರು ಪದೇ ಪದೇ “ದುಷ್ಕೃತ್ಯ, ಚಾವುವಿನಿಸ್ಟಿಕ್ ಮತ್ತು ಪಿತೃಪ್ರಧಾನ ಹೇಳಿಕೆಗಳನ್ನು” ನೀಡುತ್ತಿದ್ದಾರೆ ಎಂದು ಆರೋಪಿಸಿದೆ. ಪಕ್ಷವು ವಿಜಯವರ್ಗಿಯ ಯಾವುದೇ ಪರಿಣಾಮಗಳನ್ನು ಎದುರಿಸುವುದಿಲ್ಲ ಎಂದು ಹೇಳಿದೆ.

“ನಾವು ಪ್ರಧಾನಿ @narendramodi ಅವರಿಂದ ಉತ್ತರಗಳನ್ನು ಕೋರುತ್ತೇವೆ. ನೀವು ಅವರ ಅಭಿಪ್ರಾಯಗಳನ್ನು ಬೆಂಬಲಿಸುತ್ತೀರಾ? ಮಹಿಳೆಯರನ್ನು ಅವಹೇಳನ ಮಾಡುವುದು ಈಗ ನಿಮ್ಮ ಪಕ್ಷದ ಅನಧಿಕೃತ ನೀತಿಯೇ? ತಕ್ಷಣ ಕ್ರಮ ತೆಗೆದುಕೊಂಡು ಅವರ ರಾಜೀನಾಮೆಗೆ ಒತ್ತಾಯಿಸಿ” ಎಂದು ಟಿಎಂಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಮಂಗಳೂರು | ಮುಸ್ಲಿಂ ನಾಯಕರು ರಾಜೀನಾಮೆ ವಾಪಸ್ ಪಡೆಯಲು ಬಿ.ಕೆ. ಹರಿಪ್ರಸಾದ್ ವಿನಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...