Homeಮುಖಪುಟ‘ನನಗೇನು ಕೋವಿಡ್ ಲಸಿಕೆಯ ಅಗತ್ಯವಿಲ್ಲ’: ಹರಿಯಾಣ ಆರೋಗ್ಯ ಸಚಿವನ ವಿವರಣೆ!

‘ನನಗೇನು ಕೋವಿಡ್ ಲಸಿಕೆಯ ಅಗತ್ಯವಿಲ್ಲ’: ಹರಿಯಾಣ ಆರೋಗ್ಯ ಸಚಿವನ ವಿವರಣೆ!

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡನೆ ಹಂತದ ಲಸಿಕಾ ಅಭಿಯಾನದ ಮೊದಲ ಫಲಾನುಭವಿಯಾಗಿ ಇವತ್ತು ಚುಚ್ಚುಮದ್ದು ಪಡೆಯುತ್ತಿದ್ದಂತೆಯೇ, ಹರಿಯಾಣದ ಬಿಜೆಪಿ ಸರ್ಕಾರದ ಆರೋಗ್ಯ ಸಚಿವ ಅನಿಲ್ ವಿಜ್ ತಮಗೆ ಲಸಿಕೆಯ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

 

ಇಂದು ಬೆಳಿಗ್ಗೆ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆ (ಏಮ್ಸ್)ನಲ್ಲಿ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆಯನ್ನು ಪಿಎಂ ಮೋದಿ ಸ್ವೀಕರಿಸಿದರು ಮತ್ತು ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಂಡು ಭಾರತವನ್ನು ಕೋವಿಡ್ ಮುಕ್ತವಾಗಿಸಲು ಒತ್ತಾಯಿಸಿದರು.
ಅದೇ ಸಮಯದಲ್ಲಿ, ಹರಿಯಾಣ ಆರೋಗ್ಯ ಸಚಿವರು ಕೊವಿಡ್-ಶಾಟ್ ತೆಗೆದುಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

“ಇಂದು ಸಾಮಾನ್ಯ ಜನರಿಗೆ ಕೊರೋನಾ ಲಸಿಕೆ ಕಾರ್ಯಕ್ರಮ ಪ್ರಾರಂಭವಾಗುತ್ತಿದೆ. ಈಗ ಯಾವುದೇ ಹಿಂಜರಿಕೆ ಇರಬಾರದು. ಕೋವಿಡ್ ಸೋಂಕು ತಗುಲಿ ಆರಾಮಾದ ನಂತರ ನನಗೆ ಡೋಸೇಜ್ ಸ್ವೀಕರಿಸಲು ಸಾಧ್ಯವಾಗುವುದಿಲ್ಲ, ಏಕೆಂದರೆ, ನನ್ನ ಪ್ರತಿಕಾಯಗಳ ಸಂಖ್ಯೆ 300 ಇದ್ದು, ಇದು ಸಿಕ್ಕಾಪಟ್ಟೆ ಅನಿಸುತ್ತದೆ. ಬಹುಶಃ ನಾನು ಪಡೆದಿದ್ದ ಪ್ರಯೋಗ ಲಸಿಕೆ ( ಟ್ರಯಲ್ ವ್ಯಾಕ್ಸಿನ್) ಯಲ್ಲಿಯೇ ಈ ಪ್ರತಿರೋಧಕತೆ ಲಭಿಸಿದೆ. ನನಗೆ ಈಗ ಲಸಿಕೆ ಅಗತ್ಯವಿಲ್ಲ”ಎಂದು ಅನಿಲ್ ವಿಜ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಜ್ ಅವರನ್ನು ಡಿಸೆಂಬರ್‌ನಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನವೆಂಬರ್‌ನಲ್ಲಿ ಅವರಿಗೆ ಕೊವಾಕ್ಸಿನ್ ಲಸಿಕೆ ನೀಡಲಾಯಿತು, ಅದರ ಮೂರನೇ ಹಂತದ ಪ್ರಯೋಗದ ಭಾಗವಾಗಿ ಅವರು ಸ್ವಯಂಪ್ರೇರಿತ ಕಾರ್ಯಕರ್ತರಾಗಿದ್ದರು.

ವ್ಯಾಕ್ಸಿನೇಷನ್ ನಂತರ ಅವರು ಕೋವಿಡ್ ಸೋಂಕಿಗೆ ತುತ್ತಾದರು ಎಂಬುದು ಚರ್ಚೆಗೆ ಕಾರಣವಾಯಿತು, ಆದರೂ ಅವರು ಕೇವಲ ಒಂದು ಡೋಸ್ ಮಾತ್ರ ತೆಗೆದುಕೊಂಡಿದ್ದಾರೆ ಮತ್ತು ಎರಡನೆಯದು ಬಾಕಿ ಇದೆ ಎಂದು ಸ್ಪಷ್ಟಪಡಿಸಲಾಗಿತ್ತು.

ಭಾರತವು 11 ದಶಲಕ್ಷಕ್ಕೂ ಹೆಚ್ಚು ಕೊರೋನವೈರಸ್ ಸೋಂಕುಗಳು ಮತ್ತು 157,000 ಕ್ಕೂ ಹೆಚ್ಚು ಸಾವುಗಳನ್ನು ಕಂಡಿದೆ.

ಜನವರಿ 16 ರಂದು ಪ್ರಾರಂಭವಾದ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಸುಮಾರು 11 ಮಿಲಿಯನ್ ಜನರು ಒಂದು ಅಥವಾ ಎರಡು ಡೋಸ್ ಪಡೆದಿದ್ದಾರೆ. ಆಗಸ್ಟ್ ವೇಳೆಗೆ ಸರ್ಕಾರದ ಗುರಿ 300 ಮಿಲಿಯನ್ ಜನರಿಗೆ ಲಸಿಕೆ ನೀಡುವುದಾಗಿದೆ.

ಹರಿಯಾಣದಲ್ಲಿ ಭಾನುವಾರದ ಹೊತ್ತಿಗೆ ಒಟ್ಟು 2.4 ಲಕ್ಷ ಪ್ರಕರಣಗಳಿವೆ. ರಾಜ್ಯದಲ್ಲಿ 3,000 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...