Homeಮುಖಪುಟ‘ನನಗೇನು ಕೋವಿಡ್ ಲಸಿಕೆಯ ಅಗತ್ಯವಿಲ್ಲ’: ಹರಿಯಾಣ ಆರೋಗ್ಯ ಸಚಿವನ ವಿವರಣೆ!

‘ನನಗೇನು ಕೋವಿಡ್ ಲಸಿಕೆಯ ಅಗತ್ಯವಿಲ್ಲ’: ಹರಿಯಾಣ ಆರೋಗ್ಯ ಸಚಿವನ ವಿವರಣೆ!

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡನೆ ಹಂತದ ಲಸಿಕಾ ಅಭಿಯಾನದ ಮೊದಲ ಫಲಾನುಭವಿಯಾಗಿ ಇವತ್ತು ಚುಚ್ಚುಮದ್ದು ಪಡೆಯುತ್ತಿದ್ದಂತೆಯೇ, ಹರಿಯಾಣದ ಬಿಜೆಪಿ ಸರ್ಕಾರದ ಆರೋಗ್ಯ ಸಚಿವ ಅನಿಲ್ ವಿಜ್ ತಮಗೆ ಲಸಿಕೆಯ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

 

ಇಂದು ಬೆಳಿಗ್ಗೆ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆ (ಏಮ್ಸ್)ನಲ್ಲಿ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆಯನ್ನು ಪಿಎಂ ಮೋದಿ ಸ್ವೀಕರಿಸಿದರು ಮತ್ತು ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಂಡು ಭಾರತವನ್ನು ಕೋವಿಡ್ ಮುಕ್ತವಾಗಿಸಲು ಒತ್ತಾಯಿಸಿದರು.
ಅದೇ ಸಮಯದಲ್ಲಿ, ಹರಿಯಾಣ ಆರೋಗ್ಯ ಸಚಿವರು ಕೊವಿಡ್-ಶಾಟ್ ತೆಗೆದುಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

“ಇಂದು ಸಾಮಾನ್ಯ ಜನರಿಗೆ ಕೊರೋನಾ ಲಸಿಕೆ ಕಾರ್ಯಕ್ರಮ ಪ್ರಾರಂಭವಾಗುತ್ತಿದೆ. ಈಗ ಯಾವುದೇ ಹಿಂಜರಿಕೆ ಇರಬಾರದು. ಕೋವಿಡ್ ಸೋಂಕು ತಗುಲಿ ಆರಾಮಾದ ನಂತರ ನನಗೆ ಡೋಸೇಜ್ ಸ್ವೀಕರಿಸಲು ಸಾಧ್ಯವಾಗುವುದಿಲ್ಲ, ಏಕೆಂದರೆ, ನನ್ನ ಪ್ರತಿಕಾಯಗಳ ಸಂಖ್ಯೆ 300 ಇದ್ದು, ಇದು ಸಿಕ್ಕಾಪಟ್ಟೆ ಅನಿಸುತ್ತದೆ. ಬಹುಶಃ ನಾನು ಪಡೆದಿದ್ದ ಪ್ರಯೋಗ ಲಸಿಕೆ ( ಟ್ರಯಲ್ ವ್ಯಾಕ್ಸಿನ್) ಯಲ್ಲಿಯೇ ಈ ಪ್ರತಿರೋಧಕತೆ ಲಭಿಸಿದೆ. ನನಗೆ ಈಗ ಲಸಿಕೆ ಅಗತ್ಯವಿಲ್ಲ”ಎಂದು ಅನಿಲ್ ವಿಜ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಜ್ ಅವರನ್ನು ಡಿಸೆಂಬರ್‌ನಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನವೆಂಬರ್‌ನಲ್ಲಿ ಅವರಿಗೆ ಕೊವಾಕ್ಸಿನ್ ಲಸಿಕೆ ನೀಡಲಾಯಿತು, ಅದರ ಮೂರನೇ ಹಂತದ ಪ್ರಯೋಗದ ಭಾಗವಾಗಿ ಅವರು ಸ್ವಯಂಪ್ರೇರಿತ ಕಾರ್ಯಕರ್ತರಾಗಿದ್ದರು.

ವ್ಯಾಕ್ಸಿನೇಷನ್ ನಂತರ ಅವರು ಕೋವಿಡ್ ಸೋಂಕಿಗೆ ತುತ್ತಾದರು ಎಂಬುದು ಚರ್ಚೆಗೆ ಕಾರಣವಾಯಿತು, ಆದರೂ ಅವರು ಕೇವಲ ಒಂದು ಡೋಸ್ ಮಾತ್ರ ತೆಗೆದುಕೊಂಡಿದ್ದಾರೆ ಮತ್ತು ಎರಡನೆಯದು ಬಾಕಿ ಇದೆ ಎಂದು ಸ್ಪಷ್ಟಪಡಿಸಲಾಗಿತ್ತು.

ಭಾರತವು 11 ದಶಲಕ್ಷಕ್ಕೂ ಹೆಚ್ಚು ಕೊರೋನವೈರಸ್ ಸೋಂಕುಗಳು ಮತ್ತು 157,000 ಕ್ಕೂ ಹೆಚ್ಚು ಸಾವುಗಳನ್ನು ಕಂಡಿದೆ.

ಜನವರಿ 16 ರಂದು ಪ್ರಾರಂಭವಾದ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಸುಮಾರು 11 ಮಿಲಿಯನ್ ಜನರು ಒಂದು ಅಥವಾ ಎರಡು ಡೋಸ್ ಪಡೆದಿದ್ದಾರೆ. ಆಗಸ್ಟ್ ವೇಳೆಗೆ ಸರ್ಕಾರದ ಗುರಿ 300 ಮಿಲಿಯನ್ ಜನರಿಗೆ ಲಸಿಕೆ ನೀಡುವುದಾಗಿದೆ.

ಹರಿಯಾಣದಲ್ಲಿ ಭಾನುವಾರದ ಹೊತ್ತಿಗೆ ಒಟ್ಟು 2.4 ಲಕ್ಷ ಪ್ರಕರಣಗಳಿವೆ. ರಾಜ್ಯದಲ್ಲಿ 3,000 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರದ ಅಸಲಿ ಪಿತೂರಿಗಾರರು ಯಾರು? ದೆಹಲಿ ಪೊಲೀಸ್ ನೋಡಲೊಲ್ಲದ ಭೀಕರ ಸತ್ಯಗಳನ್ನು ತೆರೆದಿಟ್ಟ ದಿ ವೈರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...