Homeಮುಖಪುಟನಮ್ಮ ಮನೆಯನ್ನು ವಿಭಜಿಸುವ ಸಿಎಎ, ಎನ್‌ಆರ್‌ಸಿ ನಮಗೆ ಬೇಡ: ಪೂಜಾ ಭಟ್‌

ನಮ್ಮ ಮನೆಯನ್ನು ವಿಭಜಿಸುವ ಸಿಎಎ, ಎನ್‌ಆರ್‌ಸಿ ನಮಗೆ ಬೇಡ: ಪೂಜಾ ಭಟ್‌

- Advertisement -
- Advertisement -

ಸಿಎಎ ಮತ್ತು ಎನ್‌ಆರ್‌ಸಿ ನನ್ನ ಮನೆಯನ್ನು ವಿಭಜಿಸುವ ಕಾರಣ ನಾನು ಅದನ್ನು ಬೆಂಬಲಿಸುವುದಿಲ್ಲ ಎಂದು ಬಾಲಿವುಡ್ ನಟಿ ಮತ್ತು ನಿರ್ಮಾಪಕಿ ಪೂಜಾ ಭಟ್ ಹೇಳಿದ್ದಾರೆ.

ಅವರು ಸೋಮವಾರ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸಿಎಎ ವಿರೋಧಿ ಪ್ರತಿಭಟನೆಗಳ ಬಗ್ಗೆ ತಮ್ಮ ಕಾಳಜಿಯನ್ನು ತೋರಿಸಿ, “ದೇಶದಲ್ಲಿ ಎದ್ದಿರುವ ಭಿನ್ನಧ್ವನಿಗಳನ್ನು ಕೇಳಲು ನಮ್ಮ ನಾಯಕರನ್ನು ಮುಂದಾಗಬೇಕು” ಎಂದು ಮನವಿ ಮಾಡಿದ್ದಾರೆ.

ಭಾರತದ ಮಹಿಳೆಯರು ಶಾಹೀನ್ ಬಾಗ್ ಮತ್ತು ಲಕ್ನೋದಲ್ಲಿ ಹೋರಾಟನಿರತರಾಗಿದ್ದಾರೆ. ನಾವು ಜೋರಾಗಿ ಮತ್ತು ಸ್ಪಷ್ಟವಾಗಿ ನಮ್ಮ ಮಾತನ್ನು ಸರ್ಕಾರ ಕೇಳುವವರೆಗೂ ನಾವು ನಿಲ್ಲುವುದಿಲ್ಲ. ನಾನು ಹೆಚ್ಚು ಮಾತನಾಡಲು ಜನರನ್ನು ಬೇಡಿಕೊಳ್ಳುತ್ತೇನೆ. ಸಿಎಎ ಮತ್ತು ಎನ್‌ಆರ್‌ಸಿ ನನ್ನ ಮನೆಯನ್ನು ವಿಭಜಿಸುವುದರಿಂದ ನಾನು ಅದನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.

ಭಿನ್ನಾಭಿಪ್ರಾಯವು ದೇಶಪ್ರೇಮದ ಶ್ರೇಷ್ಠ ಸ್ವರೂಪವಾಗಿದೆ ಎಂದು ಪೂಜಾ ಭಟ್ ಹೇಳಿದ್ದಾರೆ. ಸಿಎಎ ಮತ್ತು  ಎನ್‌ಆರ್‌ಸಿ ವಿರುದ್ಧ ಪ್ರತಿಭಟಿಸುವ ವಿದ್ಯಾರ್ಥಿಗಳು ಆಡಳಿತ ಪಕ್ಷವು ನಮ್ಮನ್ನು ಒಂದುಗೂಡಿಸಿದೆ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಮಾತನಾಡಿದ ಖ್ಯಾತ ವ್ಯಕ್ತಿಗಳ ಪೈಕಿ ಪೂಜಾ ಭಟ್ ಕೂಡ ಒಬ್ಬರಾಗಿದ್ದಾರೆ. ದಕ್ಷಿಣ ಮುಂಬೈನ ಕೊಲಾಬಾದಲ್ಲಿ ಈ ಕಾರ್ಯಕ್ರಮವನ್ನು ಪಾರ್ಚಮ್ ಫೌಂಡೇಶನ್ ಮತ್ತು ವಿ ದಿ ಪೀಪಲ್ ಆಫ್ ಮಹಾರಾಷ್ಟ್ರ ಆಯೋಜಿಸಿದೆ.

ನಮ್ಮ ಮೌನವು ನಮ್ಮನ್ನು ಉಳಿಸುವುದಿಲ್ಲ ಮತ್ತು ಸರ್ಕಾರವನ್ನು ಉಳಿಸುವುದಿಲ್ಲ. ಆಡಳಿತ ಪಕ್ಷವು ನಮ್ಮನ್ನು ಒಂದುಗೂಡಿಸಿದೆ. ಸಿಎಎ-ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ನಮ್ಮ ಧ್ವನಿ ಎತ್ತುವ ಸಮಯ ಬಂದಿದೆ ಎಂಬ ಸಂದೇಶವನ್ನು ನೀಡುತ್ತಿದ್ದಾರೆ.

ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಮತ್ತು ರಕ್ಷಿಸುವ ಅಗತ್ಯವನ್ನು ಚರ್ಚಿಸುವುದು ಮತ್ತು ಅವುಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು ಸಮ್ಮೇಳನದ ಉದ್ದೇಶವಾಗಿತ್ತು ಎಂದು ಅದರ ಸಂಘಟಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...